ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು ಶೇ.100ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯಕ್ಕೆ 4ನೇ ಸ್ಥಾನ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಈ ಹಿನ್ನೆಲೆ ನಾವು ಮಾಡಿದ ಕಠೋರ ತಪಸ್ಸಿಗೆ ತಕ್ಕ ಯಶಸ್ಸು ಸಿಕ್ಕಿದೆ ಎಂದು ಶಾಲಾ ಸಂಸ್ಥಾಪಕ ಕಾರ್ಯದರ್ಶಿ ಶ್ರೀನಿವಾಸ್ ಮೂರ್ತಿ ಹೇಳಿದರು.

ಶಾಲಾ ವಿದ್ಯಾರ್ಥಿನಿ ಸಹನಾ 625ಕ್ಕೆ 622 ಅಂಕ (99.52%) ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. 88 ವಿದ್ಯಾರ್ಥಿಗಳು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 34 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 47 ವಿದ್ಯಾರ್ಥಿಗಳು ಪ್ರಥಮ ದರ್ಜೆ, 7 ವಿದ್ಯಾರ್ಥಿಗಳು ಸೆಕೆಂಡ್ ಕ್ಲಾಸ್ ಬಂದಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು..

ಇಡೀ ಜಿಲ್ಲೆಗೆ ಟಾಪರ್ ಆದ ವಿದ್ಯಾರ್ಥಿಗಳಿಗೆ 50 ಸಾವಿರ ನಗದು ಬಹುಮಾನ‌ ನೀಡಲಾಗುವುದು ಎಂದು ಈ ಮೊದಲೇ ತಿಳಿಸಿದ್ದೇವು. ಅದರಂತೆ ಸಹನಾ ಎ ವಿದ್ಯಾರ್ಥಿನಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುರುತ್ತಾರೆ. ಈ ಹಿನ್ನೆಲೆ ಸಹನಾ ಎ ಗೆ ನಗದು ಬಹುಮಾನ ನೀಡಲಾಗುವುದು.

ನಮ್ಮ ಶಾಲೆಯಲ್ಲಿ ಅನುಭವಿ, ನುರಿತ ಶಿಕ್ಷಕರಿದ್ದಾರೆ.‌ ಮಕ್ಕಳ ವಿದ್ಯಾಭ್ಯಾಸ ಸುಧಾರಿಸಲು ಅವಿರತ ಶ್ರಮ ವಹಿಸುತ್ತಾರೆ. ಅದರಂತೆ ಮಕ್ಕಳು, ಪೋಷಕರು ಸಹಕಾರದಿಂದ ಈ ಯಶಸ್ಸು ಕಾಣಲು ಸಾಧ್ಯವಾಯಿತು ಎಂದರು.

ನಂತರ ಎಸ್ ಎಸ್ ಎಲ್ ಸಿ ಟಾಪರ್ ಸಹನಾ.ಎ ಮಾತನಾಡಿ, ನನ್ನ ಶಿಕ್ಷಕರಿಂದಲೇ ನಾನು ಉತ್ತಮ ಅಂಕ ಪಡೆಯಲು ಸಾಧ್ಯವಾಯಿತು. ಟಾಪರ್ ಆಗಿದ್ದಕ್ಕೆ ತುಂಬಾ ಸಂತೋಷ ಆಗುತ್ತಿದೆ. ಭವಿಷ್ಯದಲ್ಲಿ ವೈದ್ಯೆ ಆಗುವ ಆಸೆ ಇದೆ. ಅದನ್ನು ಸಾಕಾರಗೊಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಎಸ್ ಎಲ್ ಸಿ ಟಾಪರ್ ಸಹನಾ.ಎ ತಂದೆ ಕೆ.ಆರ್ ಅಶ್ವತ್ಥ್ ಮಾತನಾಡಿ, ನನ್ನ ಮಗಳು ಎಸ್ ಎಸ್ ಎಲ್ ಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ಶಾಲಾ ಆಡಳಿತ ಮಂಡಳಿ, ಶಿಕ್ಷಕರಿಗೆ ಅರ್ಪಣೆ ಮಾಡುತ್ತಿದ್ದೇನೆ. ಎಂಬಿಬಿಎಸ್ ಓದಿ ವೈದ್ಯೆಯಾಗುವ ಇಚ್ಛೆಯನ್ನು ಮಗಳು ಹೊಂದಿದ್ದಾಳೆ. ಈ ನಿಟ್ಟಿನಲ್ಲಿ ಮುಂದಿನ‌‌ ವಿದ್ಯಾಭ್ಯಾಸ ಮಾಡಿಸುತ್ತೇನೆ.‌ ಮಗಳ ಓದಿಗಾಗಿ ನಮ್ಮ ಸಹಕಾರ ಇದ್ದೇ ಇರುತ್ತದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶಂಕರಯ್ಯ ಟಿ ಎಸ್, (ಕ್ಷೇತ್ರ ಸಮನ್ವಯ ಅಧಿಕಾರಿ, ಆರ್. ನಾರಾಯಣಸ್ವಾಮಿ, ಎಸ್‌ಎಸ್‌ಎಲ್‌ಸಿ ನೋಡಲ್ ಅಧಿಕಾರಿಗಳಾದ ಕೆ.ಎಮ್ ಭೀಮರಾಜು, ರಾಮಚಂದ್ರ ವಿ, ಆಂಜಿನಪ್ಪ ಶಿಕ್ಷಣ ಸಂಯೋಜಕರು ಮತ್ತು ಮುಖ್ಯೋಪಾಧ್ಯಾಯರಾದ ಶೋಭಾವತಿ.ಎಂ, ಪೋಷಕರು ಮತ್ತು ಶಿಕ್ಷಕರ ಸಮ್ಮುಖದಲ್ಲಿ ಕುಮಾರಿ ಸಹಾನರವರನ್ನು ಸನ್ಮಾನಿಸಿ ಶುಭ ಕೋರಿದರು.

ನಂತರ ಕನ್ನಡ ಭಾಷಾ ಶಿಕ್ಷಕ ನವೀನ್ ಕುಮಾರ್ ಮಾತನಾಡಿ, ಮಕ್ಕಳ ಪರಿಶ್ರಮದಿಂದ ಶಾಲೆಗೆ ಉತ್ತಮ ಫಲಿತಾಂಶ ಬಂದಿದೆ. ಎಸ್ ಎಸ್ ಎಲ್ ಸಿ ಟಾಪರ್ ಸಹನಾ ಒಳ್ಳೆ ಸಂಸ್ಕಾರವುಳ್ಳ ಮಗು, ಈ ಮಗು ನಮ್ಮ ಶಾಲೆಯ ಹೆಮ್ಮೆ. ಮುಂದಿನ ವರ್ಷ ಫಲಿತಾಂಶದಲ್ಲಿ ರಾಜ್ಯ ದರ್ಜೆ ಪಡೆಯಲು ಶ್ರಮಪಡುತ್ತೇವೆ ಎಂದರು…

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

6 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

23 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago