ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು ಶೇ.100ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯಕ್ಕೆ 4ನೇ ಸ್ಥಾನ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಈ ಹಿನ್ನೆಲೆ ನಾವು ಮಾಡಿದ ಕಠೋರ ತಪಸ್ಸಿಗೆ ತಕ್ಕ ಯಶಸ್ಸು ಸಿಕ್ಕಿದೆ ಎಂದು ಶಾಲಾ ಸಂಸ್ಥಾಪಕ ಕಾರ್ಯದರ್ಶಿ ಶ್ರೀನಿವಾಸ್ ಮೂರ್ತಿ ಹೇಳಿದರು.

ಶಾಲಾ ವಿದ್ಯಾರ್ಥಿನಿ ಸಹನಾ 625ಕ್ಕೆ 622 ಅಂಕ (99.52%) ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. 88 ವಿದ್ಯಾರ್ಥಿಗಳು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 34 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 47 ವಿದ್ಯಾರ್ಥಿಗಳು ಪ್ರಥಮ ದರ್ಜೆ, 7 ವಿದ್ಯಾರ್ಥಿಗಳು ಸೆಕೆಂಡ್ ಕ್ಲಾಸ್ ಬಂದಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು..

ಇಡೀ ಜಿಲ್ಲೆಗೆ ಟಾಪರ್ ಆದ ವಿದ್ಯಾರ್ಥಿಗಳಿಗೆ 50 ಸಾವಿರ ನಗದು ಬಹುಮಾನ‌ ನೀಡಲಾಗುವುದು ಎಂದು ಈ ಮೊದಲೇ ತಿಳಿಸಿದ್ದೇವು. ಅದರಂತೆ ಸಹನಾ ಎ ವಿದ್ಯಾರ್ಥಿನಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುರುತ್ತಾರೆ. ಈ ಹಿನ್ನೆಲೆ ಸಹನಾ ಎ ಗೆ ನಗದು ಬಹುಮಾನ ನೀಡಲಾಗುವುದು.

ನಮ್ಮ ಶಾಲೆಯಲ್ಲಿ ಅನುಭವಿ, ನುರಿತ ಶಿಕ್ಷಕರಿದ್ದಾರೆ.‌ ಮಕ್ಕಳ ವಿದ್ಯಾಭ್ಯಾಸ ಸುಧಾರಿಸಲು ಅವಿರತ ಶ್ರಮ ವಹಿಸುತ್ತಾರೆ. ಅದರಂತೆ ಮಕ್ಕಳು, ಪೋಷಕರು ಸಹಕಾರದಿಂದ ಈ ಯಶಸ್ಸು ಕಾಣಲು ಸಾಧ್ಯವಾಯಿತು ಎಂದರು.

ನಂತರ ಎಸ್ ಎಸ್ ಎಲ್ ಸಿ ಟಾಪರ್ ಸಹನಾ.ಎ ಮಾತನಾಡಿ, ನನ್ನ ಶಿಕ್ಷಕರಿಂದಲೇ ನಾನು ಉತ್ತಮ ಅಂಕ ಪಡೆಯಲು ಸಾಧ್ಯವಾಯಿತು. ಟಾಪರ್ ಆಗಿದ್ದಕ್ಕೆ ತುಂಬಾ ಸಂತೋಷ ಆಗುತ್ತಿದೆ. ಭವಿಷ್ಯದಲ್ಲಿ ವೈದ್ಯೆ ಆಗುವ ಆಸೆ ಇದೆ. ಅದನ್ನು ಸಾಕಾರಗೊಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಎಸ್ ಎಲ್ ಸಿ ಟಾಪರ್ ಸಹನಾ.ಎ ತಂದೆ ಕೆ.ಆರ್ ಅಶ್ವತ್ಥ್ ಮಾತನಾಡಿ, ನನ್ನ ಮಗಳು ಎಸ್ ಎಸ್ ಎಲ್ ಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ಶಾಲಾ ಆಡಳಿತ ಮಂಡಳಿ, ಶಿಕ್ಷಕರಿಗೆ ಅರ್ಪಣೆ ಮಾಡುತ್ತಿದ್ದೇನೆ. ಎಂಬಿಬಿಎಸ್ ಓದಿ ವೈದ್ಯೆಯಾಗುವ ಇಚ್ಛೆಯನ್ನು ಮಗಳು ಹೊಂದಿದ್ದಾಳೆ. ಈ ನಿಟ್ಟಿನಲ್ಲಿ ಮುಂದಿನ‌‌ ವಿದ್ಯಾಭ್ಯಾಸ ಮಾಡಿಸುತ್ತೇನೆ.‌ ಮಗಳ ಓದಿಗಾಗಿ ನಮ್ಮ ಸಹಕಾರ ಇದ್ದೇ ಇರುತ್ತದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶಂಕರಯ್ಯ ಟಿ ಎಸ್, (ಕ್ಷೇತ್ರ ಸಮನ್ವಯ ಅಧಿಕಾರಿ, ಆರ್. ನಾರಾಯಣಸ್ವಾಮಿ, ಎಸ್‌ಎಸ್‌ಎಲ್‌ಸಿ ನೋಡಲ್ ಅಧಿಕಾರಿಗಳಾದ ಕೆ.ಎಮ್ ಭೀಮರಾಜು, ರಾಮಚಂದ್ರ ವಿ, ಆಂಜಿನಪ್ಪ ಶಿಕ್ಷಣ ಸಂಯೋಜಕರು ಮತ್ತು ಮುಖ್ಯೋಪಾಧ್ಯಾಯರಾದ ಶೋಭಾವತಿ.ಎಂ, ಪೋಷಕರು ಮತ್ತು ಶಿಕ್ಷಕರ ಸಮ್ಮುಖದಲ್ಲಿ ಕುಮಾರಿ ಸಹಾನರವರನ್ನು ಸನ್ಮಾನಿಸಿ ಶುಭ ಕೋರಿದರು.

ನಂತರ ಕನ್ನಡ ಭಾಷಾ ಶಿಕ್ಷಕ ನವೀನ್ ಕುಮಾರ್ ಮಾತನಾಡಿ, ಮಕ್ಕಳ ಪರಿಶ್ರಮದಿಂದ ಶಾಲೆಗೆ ಉತ್ತಮ ಫಲಿತಾಂಶ ಬಂದಿದೆ. ಎಸ್ ಎಸ್ ಎಲ್ ಸಿ ಟಾಪರ್ ಸಹನಾ ಒಳ್ಳೆ ಸಂಸ್ಕಾರವುಳ್ಳ ಮಗು, ಈ ಮಗು ನಮ್ಮ ಶಾಲೆಯ ಹೆಮ್ಮೆ. ಮುಂದಿನ ವರ್ಷ ಫಲಿತಾಂಶದಲ್ಲಿ ರಾಜ್ಯ ದರ್ಜೆ ಪಡೆಯಲು ಶ್ರಮಪಡುತ್ತೇವೆ ಎಂದರು…

Ramesh Babu

Journalist

Recent Posts

ಪ್ರೊ. ಬಿ ಕೃಷ್ಣಪ್ಪ ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕ- ದಸಂಸ ಜಿಲ್ಲಾ ಸಂಚಾಲಕ ರಾಮಮೂರ್ತಿ(ರಾಮು)

ಸಮಾಜದಲ್ಲಿ ದಲಿತ ಸಮುದಾಯಗಳು ಎದುರಿಸುತ್ತಿದ್ದ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿದ ಪ್ರೊ. ಬಿ ಕೃಷ್ಣಪ್ಪ ಅವರು ಎಲ್ಲರಿಗೂ ಮಾದರಿ. ಅವರ…

7 hours ago

ಜೆಡಿಎಸ್ ಬಣ ಗುದ್ದಾಟದಲ್ಲಿ ಕಾರ್ಯಕರ್ತರಿಗೆ ಸಿಕ್ಕ ‘ಸ್ಮೈಲ್ ಕ್ಯಾಪ್ಟನ್ ಆನಂದ್’

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 40 ವರ್ಷಗಳಿಂದ ರಾಜಕಾರಣ ಮಾಡುತ್ತಾ, ಮನೆ ಮಾತಾಗಿರುವ ಹುಸ್ಕೂರು ಟಿ. ಆನಂದ್ ಜೆಡಿಎಸ್ ಪಕ್ಷದಲ್ಲಿ ರಾಜ್ಯ ಪ್ರಧಾನ…

15 hours ago

ವೇಶ್ಯಾವಾಟಿಕೆ ಜಗತ್ತಿನ ಹಳೆಯದಾದ ಒಂದು ಕ್ರಿಯೆ…?

ವೇಶ್ಯಾವಾಟಿಕೆ...... ಒಂದು ವೃತ್ತಿಯೇ, ಜೀವನ ನಿರ್ವಹಣೆಯ ಒಂದು ಮಾರ್ಗವೇ, ಒಂದು ಉದ್ಯೋಗವೇ, ಸಹಜ ಪ್ರಾಕೃತಿಕ ವಿಧಾನವೇ, ಹೆಣ್ಣಿನ ಶೋಷಣೆಯೇ, ಗಂಡಿನ…

16 hours ago

ಮಳೆಗಾಲ ಆರಂಭ: ರಸ್ತೆಗುಂಡಿಗಳ ದರ್ಬಾರ್: ಟೋಲ್ ತಪ್ಪಿಸಲು ಹಳ್ಳಿ ರಸ್ತೆಗಳ ಬಳಕೆ: ಜನರ ಜೀವದ ಜೊತೆ ಚೆಲ್ಲಾಟ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

ದೊಡ್ಡಬಳ್ಳಾಪುರ: ಮಳೆಗಾಲ ಆರಂಭವಾಗುತ್ತಿದ್ದಂತೆ ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ಭಾಗಗಳ ರಸ್ತೆಗುಂಡಿಗಳ ಸಮಸ್ಯೆ ಮತ್ತೆ ತಲೆದೋರಿದ್ದು, ವಾಹನ ಸವಾರರು ಜೀವ…

17 hours ago

ಬೈಕ್ – ಕಾರಿನ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ರಾತ್ರಿ ದೊಡ್ಡಬಳ್ಳಾಪುರ…

1 day ago

ಕೃಷಿ ಚಟುವಟಿಕೆಯಲ್ಲಿ ರೈತರು ಡಿಎಪಿ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಲು ಕೃಷಿ ಇಲಾಖೆ…

1 day ago