2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು ಶೇ.100ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯಕ್ಕೆ 4ನೇ ಸ್ಥಾನ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಈ ಹಿನ್ನೆಲೆ ನಾವು ಮಾಡಿದ ಕಠೋರ ತಪಸ್ಸಿಗೆ ತಕ್ಕ ಯಶಸ್ಸು ಸಿಕ್ಕಿದೆ ಎಂದು ಶಾಲಾ ಸಂಸ್ಥಾಪಕ ಕಾರ್ಯದರ್ಶಿ ಶ್ರೀನಿವಾಸ್ ಮೂರ್ತಿ ಹೇಳಿದರು.
ಶಾಲಾ ವಿದ್ಯಾರ್ಥಿನಿ ಸಹನಾ 625ಕ್ಕೆ 622 ಅಂಕ (99.52%) ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. 88 ವಿದ್ಯಾರ್ಥಿಗಳು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 34 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 47 ವಿದ್ಯಾರ್ಥಿಗಳು ಪ್ರಥಮ ದರ್ಜೆ, 7 ವಿದ್ಯಾರ್ಥಿಗಳು ಸೆಕೆಂಡ್ ಕ್ಲಾಸ್ ಬಂದಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು..
ಇಡೀ ಜಿಲ್ಲೆಗೆ ಟಾಪರ್ ಆದ ವಿದ್ಯಾರ್ಥಿಗಳಿಗೆ 50 ಸಾವಿರ ನಗದು ಬಹುಮಾನ ನೀಡಲಾಗುವುದು ಎಂದು ಈ ಮೊದಲೇ ತಿಳಿಸಿದ್ದೇವು. ಅದರಂತೆ ಸಹನಾ ಎ ವಿದ್ಯಾರ್ಥಿನಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುರುತ್ತಾರೆ. ಈ ಹಿನ್ನೆಲೆ ಸಹನಾ ಎ ಗೆ ನಗದು ಬಹುಮಾನ ನೀಡಲಾಗುವುದು.
ನಮ್ಮ ಶಾಲೆಯಲ್ಲಿ ಅನುಭವಿ, ನುರಿತ ಶಿಕ್ಷಕರಿದ್ದಾರೆ. ಮಕ್ಕಳ ವಿದ್ಯಾಭ್ಯಾಸ ಸುಧಾರಿಸಲು ಅವಿರತ ಶ್ರಮ ವಹಿಸುತ್ತಾರೆ. ಅದರಂತೆ ಮಕ್ಕಳು, ಪೋಷಕರು ಸಹಕಾರದಿಂದ ಈ ಯಶಸ್ಸು ಕಾಣಲು ಸಾಧ್ಯವಾಯಿತು ಎಂದರು.
ನಂತರ ಎಸ್ ಎಸ್ ಎಲ್ ಸಿ ಟಾಪರ್ ಸಹನಾ.ಎ ಮಾತನಾಡಿ, ನನ್ನ ಶಿಕ್ಷಕರಿಂದಲೇ ನಾನು ಉತ್ತಮ ಅಂಕ ಪಡೆಯಲು ಸಾಧ್ಯವಾಯಿತು. ಟಾಪರ್ ಆಗಿದ್ದಕ್ಕೆ ತುಂಬಾ ಸಂತೋಷ ಆಗುತ್ತಿದೆ. ಭವಿಷ್ಯದಲ್ಲಿ ವೈದ್ಯೆ ಆಗುವ ಆಸೆ ಇದೆ. ಅದನ್ನು ಸಾಕಾರಗೊಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ಎಸ್ ಎಲ್ ಸಿ ಟಾಪರ್ ಸಹನಾ.ಎ ತಂದೆ ಕೆ.ಆರ್ ಅಶ್ವತ್ಥ್ ಮಾತನಾಡಿ, ನನ್ನ ಮಗಳು ಎಸ್ ಎಸ್ ಎಲ್ ಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ಶಾಲಾ ಆಡಳಿತ ಮಂಡಳಿ, ಶಿಕ್ಷಕರಿಗೆ ಅರ್ಪಣೆ ಮಾಡುತ್ತಿದ್ದೇನೆ. ಎಂಬಿಬಿಎಸ್ ಓದಿ ವೈದ್ಯೆಯಾಗುವ ಇಚ್ಛೆಯನ್ನು ಮಗಳು ಹೊಂದಿದ್ದಾಳೆ. ಈ ನಿಟ್ಟಿನಲ್ಲಿ ಮುಂದಿನ ವಿದ್ಯಾಭ್ಯಾಸ ಮಾಡಿಸುತ್ತೇನೆ. ಮಗಳ ಓದಿಗಾಗಿ ನಮ್ಮ ಸಹಕಾರ ಇದ್ದೇ ಇರುತ್ತದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶಂಕರಯ್ಯ ಟಿ ಎಸ್, (ಕ್ಷೇತ್ರ ಸಮನ್ವಯ ಅಧಿಕಾರಿ, ಆರ್. ನಾರಾಯಣಸ್ವಾಮಿ, ಎಸ್ಎಸ್ಎಲ್ಸಿ ನೋಡಲ್ ಅಧಿಕಾರಿಗಳಾದ ಕೆ.ಎಮ್ ಭೀಮರಾಜು, ರಾಮಚಂದ್ರ ವಿ, ಆಂಜಿನಪ್ಪ ಶಿಕ್ಷಣ ಸಂಯೋಜಕರು ಮತ್ತು ಮುಖ್ಯೋಪಾಧ್ಯಾಯರಾದ ಶೋಭಾವತಿ.ಎಂ, ಪೋಷಕರು ಮತ್ತು ಶಿಕ್ಷಕರ ಸಮ್ಮುಖದಲ್ಲಿ ಕುಮಾರಿ ಸಹಾನರವರನ್ನು ಸನ್ಮಾನಿಸಿ ಶುಭ ಕೋರಿದರು.
ನಂತರ ಕನ್ನಡ ಭಾಷಾ ಶಿಕ್ಷಕ ನವೀನ್ ಕುಮಾರ್ ಮಾತನಾಡಿ, ಮಕ್ಕಳ ಪರಿಶ್ರಮದಿಂದ ಶಾಲೆಗೆ ಉತ್ತಮ ಫಲಿತಾಂಶ ಬಂದಿದೆ. ಎಸ್ ಎಸ್ ಎಲ್ ಸಿ ಟಾಪರ್ ಸಹನಾ ಒಳ್ಳೆ ಸಂಸ್ಕಾರವುಳ್ಳ ಮಗು, ಈ ಮಗು ನಮ್ಮ ಶಾಲೆಯ ಹೆಮ್ಮೆ. ಮುಂದಿನ ವರ್ಷ ಫಲಿತಾಂಶದಲ್ಲಿ ರಾಜ್ಯ ದರ್ಜೆ ಪಡೆಯಲು ಶ್ರಮಪಡುತ್ತೇವೆ ಎಂದರು…
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…