ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು ಶೇ.100ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯಕ್ಕೆ 4ನೇ ಸ್ಥಾನ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಈ ಹಿನ್ನೆಲೆ ನಾವು ಮಾಡಿದ ಕಠೋರ ತಪಸ್ಸಿಗೆ ತಕ್ಕ ಯಶಸ್ಸು ಸಿಕ್ಕಿದೆ ಎಂದು ಶಾಲಾ ಸಂಸ್ಥಾಪಕ ಕಾರ್ಯದರ್ಶಿ ಶ್ರೀನಿವಾಸ್ ಮೂರ್ತಿ ಹೇಳಿದರು.

ಶಾಲಾ ವಿದ್ಯಾರ್ಥಿನಿ ಸಹನಾ 625ಕ್ಕೆ 622 ಅಂಕ (99.52%) ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. 88 ವಿದ್ಯಾರ್ಥಿಗಳು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 34 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 47 ವಿದ್ಯಾರ್ಥಿಗಳು ಪ್ರಥಮ ದರ್ಜೆ, 7 ವಿದ್ಯಾರ್ಥಿಗಳು ಸೆಕೆಂಡ್ ಕ್ಲಾಸ್ ಬಂದಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು..

ಇಡೀ ಜಿಲ್ಲೆಗೆ ಟಾಪರ್ ಆದ ವಿದ್ಯಾರ್ಥಿಗಳಿಗೆ 50 ಸಾವಿರ ನಗದು ಬಹುಮಾನ‌ ನೀಡಲಾಗುವುದು ಎಂದು ಈ ಮೊದಲೇ ತಿಳಿಸಿದ್ದೇವು. ಅದರಂತೆ ಸಹನಾ ಎ ವಿದ್ಯಾರ್ಥಿನಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುರುತ್ತಾರೆ. ಈ ಹಿನ್ನೆಲೆ ಸಹನಾ ಎ ಗೆ ನಗದು ಬಹುಮಾನ ನೀಡಲಾಗುವುದು.

ನಮ್ಮ ಶಾಲೆಯಲ್ಲಿ ಅನುಭವಿ, ನುರಿತ ಶಿಕ್ಷಕರಿದ್ದಾರೆ.‌ ಮಕ್ಕಳ ವಿದ್ಯಾಭ್ಯಾಸ ಸುಧಾರಿಸಲು ಅವಿರತ ಶ್ರಮ ವಹಿಸುತ್ತಾರೆ. ಅದರಂತೆ ಮಕ್ಕಳು, ಪೋಷಕರು ಸಹಕಾರದಿಂದ ಈ ಯಶಸ್ಸು ಕಾಣಲು ಸಾಧ್ಯವಾಯಿತು ಎಂದರು.

ನಂತರ ಎಸ್ ಎಸ್ ಎಲ್ ಸಿ ಟಾಪರ್ ಸಹನಾ.ಎ ಮಾತನಾಡಿ, ನನ್ನ ಶಿಕ್ಷಕರಿಂದಲೇ ನಾನು ಉತ್ತಮ ಅಂಕ ಪಡೆಯಲು ಸಾಧ್ಯವಾಯಿತು. ಟಾಪರ್ ಆಗಿದ್ದಕ್ಕೆ ತುಂಬಾ ಸಂತೋಷ ಆಗುತ್ತಿದೆ. ಭವಿಷ್ಯದಲ್ಲಿ ವೈದ್ಯೆ ಆಗುವ ಆಸೆ ಇದೆ. ಅದನ್ನು ಸಾಕಾರಗೊಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಎಸ್ ಎಲ್ ಸಿ ಟಾಪರ್ ಸಹನಾ.ಎ ತಂದೆ ಕೆ.ಆರ್ ಅಶ್ವತ್ಥ್ ಮಾತನಾಡಿ, ನನ್ನ ಮಗಳು ಎಸ್ ಎಸ್ ಎಲ್ ಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ಶಾಲಾ ಆಡಳಿತ ಮಂಡಳಿ, ಶಿಕ್ಷಕರಿಗೆ ಅರ್ಪಣೆ ಮಾಡುತ್ತಿದ್ದೇನೆ. ಎಂಬಿಬಿಎಸ್ ಓದಿ ವೈದ್ಯೆಯಾಗುವ ಇಚ್ಛೆಯನ್ನು ಮಗಳು ಹೊಂದಿದ್ದಾಳೆ. ಈ ನಿಟ್ಟಿನಲ್ಲಿ ಮುಂದಿನ‌‌ ವಿದ್ಯಾಭ್ಯಾಸ ಮಾಡಿಸುತ್ತೇನೆ.‌ ಮಗಳ ಓದಿಗಾಗಿ ನಮ್ಮ ಸಹಕಾರ ಇದ್ದೇ ಇರುತ್ತದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶಂಕರಯ್ಯ ಟಿ ಎಸ್, (ಕ್ಷೇತ್ರ ಸಮನ್ವಯ ಅಧಿಕಾರಿ, ಆರ್. ನಾರಾಯಣಸ್ವಾಮಿ, ಎಸ್‌ಎಸ್‌ಎಲ್‌ಸಿ ನೋಡಲ್ ಅಧಿಕಾರಿಗಳಾದ ಕೆ.ಎಮ್ ಭೀಮರಾಜು, ರಾಮಚಂದ್ರ ವಿ, ಆಂಜಿನಪ್ಪ ಶಿಕ್ಷಣ ಸಂಯೋಜಕರು ಮತ್ತು ಮುಖ್ಯೋಪಾಧ್ಯಾಯರಾದ ಶೋಭಾವತಿ.ಎಂ, ಪೋಷಕರು ಮತ್ತು ಶಿಕ್ಷಕರ ಸಮ್ಮುಖದಲ್ಲಿ ಕುಮಾರಿ ಸಹಾನರವರನ್ನು ಸನ್ಮಾನಿಸಿ ಶುಭ ಕೋರಿದರು.

ನಂತರ ಕನ್ನಡ ಭಾಷಾ ಶಿಕ್ಷಕ ನವೀನ್ ಕುಮಾರ್ ಮಾತನಾಡಿ, ಮಕ್ಕಳ ಪರಿಶ್ರಮದಿಂದ ಶಾಲೆಗೆ ಉತ್ತಮ ಫಲಿತಾಂಶ ಬಂದಿದೆ. ಎಸ್ ಎಸ್ ಎಲ್ ಸಿ ಟಾಪರ್ ಸಹನಾ ಒಳ್ಳೆ ಸಂಸ್ಕಾರವುಳ್ಳ ಮಗು, ಈ ಮಗು ನಮ್ಮ ಶಾಲೆಯ ಹೆಮ್ಮೆ. ಮುಂದಿನ ವರ್ಷ ಫಲಿತಾಂಶದಲ್ಲಿ ರಾಜ್ಯ ದರ್ಜೆ ಪಡೆಯಲು ಶ್ರಮಪಡುತ್ತೇವೆ ಎಂದರು…

Ramesh Babu

Journalist

Recent Posts

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

3 hours ago

Facharbeit Schreiben_ Ein Leitfaden für Schüler und Studenten(2)

Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…

4 hours ago

Ideal Online Slot Machine Online Casinos: A Comprehensive Guide

Welcome to our thorough overview on the very best online slots online casinos. If you're…

8 hours ago

ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿರ್ಧಾರ- ಸಿಎಂ ಸಿದ್ದರಾಮಯ್ಯ

ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಎಡ, ಬಲ…

10 hours ago

How To Choose The Best Real Money Casino Sites And Utilize Them

There are many benefits to playing at real money casino sites. Whether you are looking…

18 hours ago

ವಿಧಾನಸೌಧದಲ್ಲಿ ಐತಿಹಾಸಿಕ ತೀರ್ಮಾನ: ಒಳಮೀಸಲಾತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ- ಸಚಿವ ಕೆ.ಎಚ್ ಮುನಿಯಪ್ಪ

ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…

20 hours ago