2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ಹನ್ನೊಂದನೇ ಸ್ಥಾನ ಪಡೆದುಕೊಂಡಿದೆ.
ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲೆಯ ಒಟ್ಟು 278 ಪ್ರೌಢಶಾಲೆಗಳಲ್ಲಿನ ಒಟ್ಟು 13,083 ವಿದ್ಯಾರ್ಥಿಗಳ ಹಾಜರಾಗಿದ್ದು, 12,510 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇಕಡ 95.62 ರಷ್ಟು ಫಲಿತಾಂಶ ಪಡೆದಿದ್ದಾರೆ.
ಒಟ್ಟು 6639 ಬಾಲಕರು ಹಾಜರಾಗಿದ್ದು 6247 ಬಾಲಕರು ತೇರ್ಗಡೆಯಾಗುವ ಮೂಲಕ ಶೇ. 94.10 ರಷ್ಟು ಫಲಿತಾಂಶ ಪಡೆದಿದ್ದಾರೆ. 6444 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದು, 6263 ಬಾಲಕಿಯರು ತೇರ್ಗಡೆ ಹೊಂದುವ ಮೂಲಕ ಶೇ 97.19 ರಷ್ಟು ಫಲಿತಾಂಶ ದೊರಕಿದೆ.
ನಗರ ಪ್ರದೇಶದ 4775 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 4496 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 94.16 ರಷ್ಟು ಫಲಿತಾಂಶ ದೊರೆತಿದೆ.
ಗ್ರಾಮೀಣ ಪ್ರದೇಶದ 8308 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 8014 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ 96.46 ರಷ್ಟು ಫಲಿತಾಂಶ ಸಿಕ್ಕಿದೆ.
*ತಾಲ್ಲೂಕು ವಾರು ಫಲಿತಾಂಶ*
*ದೇವನಹಳ್ಳಿ
* ಹಾಜರಾದವರು-3091
ಉತ್ತೀರ್ಣರಾದವರು-2956
ಶೇಕಡ: 95.63%
*ದೊಡ್ಡಬಳ್ಳಾಪುರ*
* ಹಾಜರಾದವರು-3553
ಉತ್ತೀರ್ಣರಾದವರು-3416
ಶೇಕಡ: 96.14%
*ಹೊಸಕೋಟೆ*
* ಹಾಜರಾದವರು-3578
ಉತ್ತೀರ್ಣರಾದವರು-3479
ಶೇಕಡ: 97.23%
*ನೆಲಮಂಗಲ*
* ಹಾಜರಾದವರು-2861
ಉತ್ತೀರ್ಣರಾದವರು-2659
ಶೇಕಡ:92.94%
*ಶಾಲಾವಾರು ಫಲಿತಾಂಶ*
* ಸರ್ಕಾರಿ ಶಾಲೆ-94.35%
* ಅನುದಾನಿತ-90.14%
* ಅನುದಾನ ರಹಿತ-98.27%
*625 ಕ್ಕೆ 622 ಅಂಕ ಪಡೆದ ಜಿಲ್ಲೆಯ ಮೂವರು ಟಾಪರ್ ಗಳು*
1. ಹೇಮ ಜಿ. ಹೆಚ್, ಡಾ. ಬಿ.ಆರ್ ಅಂಬೇಡ್ಕರ್ ಹೆಣ್ಣು ಮಕ್ಕಳ ವಸತಿ ಶಾಲೆ. ಮಧುರೆ ದೊಡ್ಡಬಳ್ಳಾಪುರ.
2. ವಿಷ್ಣು ರೆಡ್ಡಿ. ಪಿ, ನ್ಯೂ ಹಾರಿಜನ್ ಶಾಲೆ, ಹೊಸಕೋಟೆ ತಾಲ್ಲೂಕು.
3. ಸಹನಾ.ಎ, ಲಿಟ್ಲ್ ಮಾಸ್ಟರ್ ಆಂಗ್ಲ ಶಾಲೆ, ಕಂಟನಕುಂಟೆ, ದೊಡ್ಡಬಳ್ಳಾಪುರ ತಾಲ್ಲೂಕು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…
ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…
ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…
ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…