ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ಹನ್ನೊಂದನೇ ಸ್ಥಾನ ಪಡೆದುಕೊಂಡಿದೆ.

ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲೆಯ ಒಟ್ಟು 278 ಪ್ರೌಢಶಾಲೆಗಳಲ್ಲಿನ ಒಟ್ಟು 13,083 ವಿದ್ಯಾರ್ಥಿಗಳ ಹಾಜರಾಗಿದ್ದು, 12,510 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇಕಡ 95.62 ರಷ್ಟು ಫಲಿತಾಂಶ ಪಡೆದಿದ್ದಾರೆ.

ಒಟ್ಟು 6639 ಬಾಲಕರು ಹಾಜರಾಗಿದ್ದು 6247 ಬಾಲಕರು ತೇರ್ಗಡೆಯಾಗುವ ಮೂಲಕ ಶೇ. 94.10 ರಷ್ಟು ಫಲಿತಾಂಶ ಪಡೆದಿದ್ದಾರೆ. 6444 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದು, 6263 ಬಾಲಕಿಯರು ತೇರ್ಗಡೆ ಹೊಂದುವ ಮೂಲಕ ಶೇ 97.19 ರಷ್ಟು ಫಲಿತಾಂಶ ದೊರಕಿದೆ.

ನಗರ ಪ್ರದೇಶದ 4775 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 4496 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 94.16 ರಷ್ಟು ಫಲಿತಾಂಶ ದೊರೆತಿದೆ.

ಗ್ರಾಮೀಣ ಪ್ರದೇಶದ 8308 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 8014 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ 96.46 ರಷ್ಟು ಫಲಿತಾಂಶ ಸಿಕ್ಕಿದೆ.

*ತಾಲ್ಲೂಕು ವಾರು ಫಲಿತಾಂಶ*

*ದೇವನಹಳ್ಳಿ
* ಹಾಜರಾದವರು-3091
ಉತ್ತೀರ್ಣರಾದವರು-2956
ಶೇಕಡ: 95.63%

*ದೊಡ್ಡಬಳ್ಳಾಪುರ*
* ಹಾಜರಾದವರು-3553
ಉತ್ತೀರ್ಣರಾದವರು-3416
ಶೇಕಡ: 96.14%

*ಹೊಸಕೋಟೆ*
* ಹಾಜರಾದವರು-3578
ಉತ್ತೀರ್ಣರಾದವರು-3479
ಶೇಕಡ: 97.23%

*ನೆಲಮಂಗಲ*
* ಹಾಜರಾದವರು-2861
ಉತ್ತೀರ್ಣರಾದವರು-2659
ಶೇಕಡ:92.94%

*ಶಾಲಾವಾರು ಫಲಿತಾಂಶ*

* ಸರ್ಕಾರಿ ಶಾಲೆ-94.35%
* ಅನುದಾನಿತ-90.14%
* ಅನುದಾನ ರಹಿತ-98.27%

*625 ಕ್ಕೆ 622 ಅಂಕ ಪಡೆದ ಜಿಲ್ಲೆಯ ಮೂವರು ಟಾಪರ್ ಗಳು*

1. ಹೇಮ ಜಿ. ಹೆಚ್, ಡಾ. ಬಿ.ಆರ್ ಅಂಬೇಡ್ಕರ್ ಹೆಣ್ಣು ಮಕ್ಕಳ ವಸತಿ ಶಾಲೆ. ಮಧುರೆ ದೊಡ್ಡಬಳ್ಳಾಪುರ.
2. ವಿಷ್ಣು ರೆಡ್ಡಿ. ಪಿ, ನ್ಯೂ ಹಾರಿಜನ್ ಶಾಲೆ, ಹೊಸಕೋಟೆ ತಾಲ್ಲೂಕು.
3. ಸಹನಾ.ಎ, ಲಿಟ್ಲ್ ಮಾಸ್ಟರ್ ಆಂಗ್ಲ ಶಾಲೆ, ಕಂಟನಕುಂಟೆ, ದೊಡ್ಡಬಳ್ಳಾಪುರ ತಾಲ್ಲೂಕು.

Ramesh Babu

Journalist

Recent Posts

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

4 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

5 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

5 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

7 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

8 hours ago

ಜನ ಪ್ರತಿನಿಧಿಗಳೆಂಬ ಸಮಾಜ ಸೇವಕರೋ – ಸಂವಿಧಾನ ರಕ್ಷಕರೋ – ರೇಸು ಕುದುರೆಗಳೋ – ಗೋಮುಖ ವ್ಯಾಘ್ರಗಳೋ…..?

ಕೃಷಿಕರ ನಿರೀಕ್ಷೆ,.... ಅನ್ನದ ಋಣ ಮರೆತ ರಾಜಕಾರಣಿಗಳು,..... ಅನ್ನದಾತರ ಅಂತರಂಗ...... ಮುಂಗಾರು ಮಳೆಯ ಹೊಸ್ತಿಲಲ್ಲಿ.... ರೈತರ ದಾರುಣ ಆತ್ಮಹತ್ಯೆಗಳು...... ಜನ…

10 hours ago