2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ಹನ್ನೊಂದನೇ ಸ್ಥಾನ ಪಡೆದುಕೊಂಡಿದೆ.
ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲೆಯ ಒಟ್ಟು 278 ಪ್ರೌಢಶಾಲೆಗಳಲ್ಲಿನ ಒಟ್ಟು 13,083 ವಿದ್ಯಾರ್ಥಿಗಳ ಹಾಜರಾಗಿದ್ದು, 12,510 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇಕಡ 95.62 ರಷ್ಟು ಫಲಿತಾಂಶ ಪಡೆದಿದ್ದಾರೆ.
ಒಟ್ಟು 6639 ಬಾಲಕರು ಹಾಜರಾಗಿದ್ದು 6247 ಬಾಲಕರು ತೇರ್ಗಡೆಯಾಗುವ ಮೂಲಕ ಶೇ. 94.10 ರಷ್ಟು ಫಲಿತಾಂಶ ಪಡೆದಿದ್ದಾರೆ. 6444 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದು, 6263 ಬಾಲಕಿಯರು ತೇರ್ಗಡೆ ಹೊಂದುವ ಮೂಲಕ ಶೇ 97.19 ರಷ್ಟು ಫಲಿತಾಂಶ ದೊರಕಿದೆ.
ನಗರ ಪ್ರದೇಶದ 4775 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 4496 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 94.16 ರಷ್ಟು ಫಲಿತಾಂಶ ದೊರೆತಿದೆ.
ಗ್ರಾಮೀಣ ಪ್ರದೇಶದ 8308 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 8014 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ 96.46 ರಷ್ಟು ಫಲಿತಾಂಶ ಸಿಕ್ಕಿದೆ.
*ತಾಲ್ಲೂಕು ವಾರು ಫಲಿತಾಂಶ*
*ದೇವನಹಳ್ಳಿ
* ಹಾಜರಾದವರು-3091
ಉತ್ತೀರ್ಣರಾದವರು-2956
ಶೇಕಡ: 95.63%
*ದೊಡ್ಡಬಳ್ಳಾಪುರ*
* ಹಾಜರಾದವರು-3553
ಉತ್ತೀರ್ಣರಾದವರು-3416
ಶೇಕಡ: 96.14%
*ಹೊಸಕೋಟೆ*
* ಹಾಜರಾದವರು-3578
ಉತ್ತೀರ್ಣರಾದವರು-3479
ಶೇಕಡ: 97.23%
*ನೆಲಮಂಗಲ*
* ಹಾಜರಾದವರು-2861
ಉತ್ತೀರ್ಣರಾದವರು-2659
ಶೇಕಡ:92.94%
*ಶಾಲಾವಾರು ಫಲಿತಾಂಶ*
* ಸರ್ಕಾರಿ ಶಾಲೆ-94.35%
* ಅನುದಾನಿತ-90.14%
* ಅನುದಾನ ರಹಿತ-98.27%
*625 ಕ್ಕೆ 622 ಅಂಕ ಪಡೆದ ಜಿಲ್ಲೆಯ ಮೂವರು ಟಾಪರ್ ಗಳು*
1. ಹೇಮ ಜಿ. ಹೆಚ್, ಡಾ. ಬಿ.ಆರ್ ಅಂಬೇಡ್ಕರ್ ಹೆಣ್ಣು ಮಕ್ಕಳ ವಸತಿ ಶಾಲೆ. ಮಧುರೆ ದೊಡ್ಡಬಳ್ಳಾಪುರ.
2. ವಿಷ್ಣು ರೆಡ್ಡಿ. ಪಿ, ನ್ಯೂ ಹಾರಿಜನ್ ಶಾಲೆ, ಹೊಸಕೋಟೆ ತಾಲ್ಲೂಕು.
3. ಸಹನಾ.ಎ, ಲಿಟ್ಲ್ ಮಾಸ್ಟರ್ ಆಂಗ್ಲ ಶಾಲೆ, ಕಂಟನಕುಂಟೆ, ದೊಡ್ಡಬಳ್ಳಾಪುರ ತಾಲ್ಲೂಕು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…