2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ಹನ್ನೊಂದನೇ ಸ್ಥಾನ ಪಡೆದುಕೊಂಡಿದೆ.
ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲೆಯ ಒಟ್ಟು 278 ಪ್ರೌಢಶಾಲೆಗಳಲ್ಲಿನ ಒಟ್ಟು 13,083 ವಿದ್ಯಾರ್ಥಿಗಳ ಹಾಜರಾಗಿದ್ದು, 12,510 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇಕಡ 95.62 ರಷ್ಟು ಫಲಿತಾಂಶ ಪಡೆದಿದ್ದಾರೆ.
ಒಟ್ಟು 6639 ಬಾಲಕರು ಹಾಜರಾಗಿದ್ದು 6247 ಬಾಲಕರು ತೇರ್ಗಡೆಯಾಗುವ ಮೂಲಕ ಶೇ. 94.10 ರಷ್ಟು ಫಲಿತಾಂಶ ಪಡೆದಿದ್ದಾರೆ. 6444 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದು, 6263 ಬಾಲಕಿಯರು ತೇರ್ಗಡೆ ಹೊಂದುವ ಮೂಲಕ ಶೇ 97.19 ರಷ್ಟು ಫಲಿತಾಂಶ ದೊರಕಿದೆ.
ನಗರ ಪ್ರದೇಶದ 4775 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 4496 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 94.16 ರಷ್ಟು ಫಲಿತಾಂಶ ದೊರೆತಿದೆ.
ಗ್ರಾಮೀಣ ಪ್ರದೇಶದ 8308 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 8014 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ 96.46 ರಷ್ಟು ಫಲಿತಾಂಶ ಸಿಕ್ಕಿದೆ.
*ತಾಲ್ಲೂಕು ವಾರು ಫಲಿತಾಂಶ*
*ದೇವನಹಳ್ಳಿ
* ಹಾಜರಾದವರು-3091
ಉತ್ತೀರ್ಣರಾದವರು-2956
ಶೇಕಡ: 95.63%
*ದೊಡ್ಡಬಳ್ಳಾಪುರ*
* ಹಾಜರಾದವರು-3553
ಉತ್ತೀರ್ಣರಾದವರು-3416
ಶೇಕಡ: 96.14%
*ಹೊಸಕೋಟೆ*
* ಹಾಜರಾದವರು-3578
ಉತ್ತೀರ್ಣರಾದವರು-3479
ಶೇಕಡ: 97.23%
*ನೆಲಮಂಗಲ*
* ಹಾಜರಾದವರು-2861
ಉತ್ತೀರ್ಣರಾದವರು-2659
ಶೇಕಡ:92.94%
*ಶಾಲಾವಾರು ಫಲಿತಾಂಶ*
* ಸರ್ಕಾರಿ ಶಾಲೆ-94.35%
* ಅನುದಾನಿತ-90.14%
* ಅನುದಾನ ರಹಿತ-98.27%
*625 ಕ್ಕೆ 622 ಅಂಕ ಪಡೆದ ಜಿಲ್ಲೆಯ ಮೂವರು ಟಾಪರ್ ಗಳು*
1. ಹೇಮ ಜಿ. ಹೆಚ್, ಡಾ. ಬಿ.ಆರ್ ಅಂಬೇಡ್ಕರ್ ಹೆಣ್ಣು ಮಕ್ಕಳ ವಸತಿ ಶಾಲೆ. ಮಧುರೆ ದೊಡ್ಡಬಳ್ಳಾಪುರ.
2. ವಿಷ್ಣು ರೆಡ್ಡಿ. ಪಿ, ನ್ಯೂ ಹಾರಿಜನ್ ಶಾಲೆ, ಹೊಸಕೋಟೆ ತಾಲ್ಲೂಕು.
3. ಸಹನಾ.ಎ, ಲಿಟ್ಲ್ ಮಾಸ್ಟರ್ ಆಂಗ್ಲ ಶಾಲೆ, ಕಂಟನಕುಂಟೆ, ದೊಡ್ಡಬಳ್ಳಾಪುರ ತಾಲ್ಲೂಕು.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…