2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ಹನ್ನೊಂದನೇ ಸ್ಥಾನ ಪಡೆದುಕೊಂಡಿದೆ.
ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲೆಯ ಒಟ್ಟು 278 ಪ್ರೌಢಶಾಲೆಗಳಲ್ಲಿನ ಒಟ್ಟು 13,083 ವಿದ್ಯಾರ್ಥಿಗಳ ಹಾಜರಾಗಿದ್ದು, 12,510 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇಕಡ 95.62 ರಷ್ಟು ಫಲಿತಾಂಶ ಪಡೆದಿದ್ದಾರೆ.
ಒಟ್ಟು 6639 ಬಾಲಕರು ಹಾಜರಾಗಿದ್ದು 6247 ಬಾಲಕರು ತೇರ್ಗಡೆಯಾಗುವ ಮೂಲಕ ಶೇ. 94.10 ರಷ್ಟು ಫಲಿತಾಂಶ ಪಡೆದಿದ್ದಾರೆ. 6444 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದು, 6263 ಬಾಲಕಿಯರು ತೇರ್ಗಡೆ ಹೊಂದುವ ಮೂಲಕ ಶೇ 97.19 ರಷ್ಟು ಫಲಿತಾಂಶ ದೊರಕಿದೆ.
ನಗರ ಪ್ರದೇಶದ 4775 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 4496 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 94.16 ರಷ್ಟು ಫಲಿತಾಂಶ ದೊರೆತಿದೆ.
ಗ್ರಾಮೀಣ ಪ್ರದೇಶದ 8308 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 8014 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ 96.46 ರಷ್ಟು ಫಲಿತಾಂಶ ಸಿಕ್ಕಿದೆ.
*ತಾಲ್ಲೂಕು ವಾರು ಫಲಿತಾಂಶ*
*ದೇವನಹಳ್ಳಿ
* ಹಾಜರಾದವರು-3091
ಉತ್ತೀರ್ಣರಾದವರು-2956
ಶೇಕಡ: 95.63%
*ದೊಡ್ಡಬಳ್ಳಾಪುರ*
* ಹಾಜರಾದವರು-3553
ಉತ್ತೀರ್ಣರಾದವರು-3416
ಶೇಕಡ: 96.14%
*ಹೊಸಕೋಟೆ*
* ಹಾಜರಾದವರು-3578
ಉತ್ತೀರ್ಣರಾದವರು-3479
ಶೇಕಡ: 97.23%
*ನೆಲಮಂಗಲ*
* ಹಾಜರಾದವರು-2861
ಉತ್ತೀರ್ಣರಾದವರು-2659
ಶೇಕಡ:92.94%
*ಶಾಲಾವಾರು ಫಲಿತಾಂಶ*
* ಸರ್ಕಾರಿ ಶಾಲೆ-94.35%
* ಅನುದಾನಿತ-90.14%
* ಅನುದಾನ ರಹಿತ-98.27%
*625 ಕ್ಕೆ 622 ಅಂಕ ಪಡೆದ ಜಿಲ್ಲೆಯ ಮೂವರು ಟಾಪರ್ ಗಳು*
1. ಹೇಮ ಜಿ. ಹೆಚ್, ಡಾ. ಬಿ.ಆರ್ ಅಂಬೇಡ್ಕರ್ ಹೆಣ್ಣು ಮಕ್ಕಳ ವಸತಿ ಶಾಲೆ. ಮಧುರೆ ದೊಡ್ಡಬಳ್ಳಾಪುರ.
2. ವಿಷ್ಣು ರೆಡ್ಡಿ. ಪಿ, ನ್ಯೂ ಹಾರಿಜನ್ ಶಾಲೆ, ಹೊಸಕೋಟೆ ತಾಲ್ಲೂಕು.
3. ಸಹನಾ.ಎ, ಲಿಟ್ಲ್ ಮಾಸ್ಟರ್ ಆಂಗ್ಲ ಶಾಲೆ, ಕಂಟನಕುಂಟೆ, ದೊಡ್ಡಬಳ್ಳಾಪುರ ತಾಲ್ಲೂಕು.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…