ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ಹನ್ನೊಂದನೇ ಸ್ಥಾನ ಪಡೆದುಕೊಂಡಿದೆ.

ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲೆಯ ಒಟ್ಟು 278 ಪ್ರೌಢಶಾಲೆಗಳಲ್ಲಿನ ಒಟ್ಟು 13,083 ವಿದ್ಯಾರ್ಥಿಗಳ ಹಾಜರಾಗಿದ್ದು, 12,510 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇಕಡ 95.62 ರಷ್ಟು ಫಲಿತಾಂಶ ಪಡೆದಿದ್ದಾರೆ.

ಒಟ್ಟು 6639 ಬಾಲಕರು ಹಾಜರಾಗಿದ್ದು 6247 ಬಾಲಕರು ತೇರ್ಗಡೆಯಾಗುವ ಮೂಲಕ ಶೇ. 94.10 ರಷ್ಟು ಫಲಿತಾಂಶ ಪಡೆದಿದ್ದಾರೆ. 6444 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದು, 6263 ಬಾಲಕಿಯರು ತೇರ್ಗಡೆ ಹೊಂದುವ ಮೂಲಕ ಶೇ 97.19 ರಷ್ಟು ಫಲಿತಾಂಶ ದೊರಕಿದೆ.

ನಗರ ಪ್ರದೇಶದ 4775 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 4496 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 94.16 ರಷ್ಟು ಫಲಿತಾಂಶ ದೊರೆತಿದೆ.

ಗ್ರಾಮೀಣ ಪ್ರದೇಶದ 8308 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 8014 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ 96.46 ರಷ್ಟು ಫಲಿತಾಂಶ ಸಿಕ್ಕಿದೆ.

*ತಾಲ್ಲೂಕು ವಾರು ಫಲಿತಾಂಶ*

*ದೇವನಹಳ್ಳಿ
* ಹಾಜರಾದವರು-3091
ಉತ್ತೀರ್ಣರಾದವರು-2956
ಶೇಕಡ: 95.63%

*ದೊಡ್ಡಬಳ್ಳಾಪುರ*
* ಹಾಜರಾದವರು-3553
ಉತ್ತೀರ್ಣರಾದವರು-3416
ಶೇಕಡ: 96.14%

*ಹೊಸಕೋಟೆ*
* ಹಾಜರಾದವರು-3578
ಉತ್ತೀರ್ಣರಾದವರು-3479
ಶೇಕಡ: 97.23%

*ನೆಲಮಂಗಲ*
* ಹಾಜರಾದವರು-2861
ಉತ್ತೀರ್ಣರಾದವರು-2659
ಶೇಕಡ:92.94%

*ಶಾಲಾವಾರು ಫಲಿತಾಂಶ*

* ಸರ್ಕಾರಿ ಶಾಲೆ-94.35%
* ಅನುದಾನಿತ-90.14%
* ಅನುದಾನ ರಹಿತ-98.27%

*625 ಕ್ಕೆ 622 ಅಂಕ ಪಡೆದ ಜಿಲ್ಲೆಯ ಮೂವರು ಟಾಪರ್ ಗಳು*

1. ಹೇಮ ಜಿ. ಹೆಚ್, ಡಾ. ಬಿ.ಆರ್ ಅಂಬೇಡ್ಕರ್ ಹೆಣ್ಣು ಮಕ್ಕಳ ವಸತಿ ಶಾಲೆ. ಮಧುರೆ ದೊಡ್ಡಬಳ್ಳಾಪುರ.
2. ವಿಷ್ಣು ರೆಡ್ಡಿ. ಪಿ, ನ್ಯೂ ಹಾರಿಜನ್ ಶಾಲೆ, ಹೊಸಕೋಟೆ ತಾಲ್ಲೂಕು.
3. ಸಹನಾ.ಎ, ಲಿಟ್ಲ್ ಮಾಸ್ಟರ್ ಆಂಗ್ಲ ಶಾಲೆ, ಕಂಟನಕುಂಟೆ, ದೊಡ್ಡಬಳ್ಳಾಪುರ ತಾಲ್ಲೂಕು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

19 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago