ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ.

ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ.

ಗ್ರಾಮದ DVS ವಸತಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ 16 ವರ್ಷದ ವಿದ್ಯಾರ್ಥಿ ಕೊಟ್ರೇಶ್ ಶಾಲಾ ಕಟ್ಟಡದ ಮೇಲಿಂದ ಬಿದ್ದು ಸಾ*ವನ್ನಪ್ಪಿದ್ದಾರೆ.

ಈ ಘಟನೆಯಿಂದ ಗ್ರಾಮಸ್ಥರು ಮತ್ತು ಶಾಲಾ ಶಿಕ್ಷಕರು ಆಘಾತಕ್ಕೆ ಒಳಗಾಗಿದ್ದಾರೆ. ಆತ ಕಟ್ಟಡದ ಮೇಲಿಂದ ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕೊಟ್ರೇಶ್ ಭರಮಸಾಗರ ಹೋಬಳಿಯ ಕರಿಯಮ್ಮನಹಳ್ಳಿ ನಿವಾಸಿಯಾಗಿದ್ದರು. ಶಾಲೆಯ ವಸತಿ ಗೃಹದಲ್ಲೇ ಇದ್ದು ಓದುತ್ತಿದ್ದರು. ಘಟನೆ ಶಾಲಾ ಕಟ್ಟಡದ ಮೇಲ್ಭಾಗದಲ್ಲಿ ನಡೆದಿದೆ. ವಿದ್ಯಾರ್ಥಿ ತಾನಾಗಿಯೇ ಪಲ್ಟಿ ಹೊಡೆದು ಬಿದ್ದಿರುವುದು ಸಿಸಿ ಟಿವಿ ದೃಶ್ಯದಲ್ಲಿ ಸೆರೆಯಾಗಿದೆ. ಆದರೆ ಈ ದುರಂತಕ್ಕೆ ನಿಖರ ಕಾರಣ ಇದುವರೆಗೂ ತಿಳಿದುಬಂದಿಲ್ಲ.

ಸ್ಥಳೀಯರ ಪ್ರಕಾರ, ಕೊಟ್ರೇಶ್ ಶಾಲಾ ಕಟ್ಟಡದ ಮೇಲ್ಭಾಗಕ್ಕೆ ಹೋಗಿದ್ದರು. ಅಲ್ಲಿಂದ ಏಕಾಏಕಿ ಕೆಳಗೆ ಬಿದ್ದಿದ್ದಾರೆ. ಘಟನೆ ನಡೆದ ಕೂಡಲೇ ಶಾಲಾ ಆಡಳಿತ ಮತ್ತು ಸಹಪಾಠಿಗಳು ಆತಂಕಕ್ಕೆ ಒಳಗಾದರು.

ತಕ್ಷಣವೇ ಆಂಬ್ಯುಲೆನ್ಸ್ ಕರೆಸಿ ಮೃ*ತದೇಹವನ್ನು ಭರಮಸಾಗರ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿದ ನಂತರ ಮೃ*ತದೇಹವನ್ನು ಪೋಸ್ಟ್‌ಮಾರ್ಟಂಗೆ ಕಳುಹಿಸಲಾಗಿದೆ.

Ramesh Babu

Journalist

Recent Posts

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

5 hours ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

15 hours ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

20 hours ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

23 hours ago

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

2 days ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

3 days ago