ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ.
ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ.
ಗ್ರಾಮದ DVS ವಸತಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ 16 ವರ್ಷದ ವಿದ್ಯಾರ್ಥಿ ಕೊಟ್ರೇಶ್ ಶಾಲಾ ಕಟ್ಟಡದ ಮೇಲಿಂದ ಬಿದ್ದು ಸಾ*ವನ್ನಪ್ಪಿದ್ದಾರೆ.
ಈ ಘಟನೆಯಿಂದ ಗ್ರಾಮಸ್ಥರು ಮತ್ತು ಶಾಲಾ ಶಿಕ್ಷಕರು ಆಘಾತಕ್ಕೆ ಒಳಗಾಗಿದ್ದಾರೆ. ಆತ ಕಟ್ಟಡದ ಮೇಲಿಂದ ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕೊಟ್ರೇಶ್ ಭರಮಸಾಗರ ಹೋಬಳಿಯ ಕರಿಯಮ್ಮನಹಳ್ಳಿ ನಿವಾಸಿಯಾಗಿದ್ದರು. ಶಾಲೆಯ ವಸತಿ ಗೃಹದಲ್ಲೇ ಇದ್ದು ಓದುತ್ತಿದ್ದರು. ಘಟನೆ ಶಾಲಾ ಕಟ್ಟಡದ ಮೇಲ್ಭಾಗದಲ್ಲಿ ನಡೆದಿದೆ. ವಿದ್ಯಾರ್ಥಿ ತಾನಾಗಿಯೇ ಪಲ್ಟಿ ಹೊಡೆದು ಬಿದ್ದಿರುವುದು ಸಿಸಿ ಟಿವಿ ದೃಶ್ಯದಲ್ಲಿ ಸೆರೆಯಾಗಿದೆ. ಆದರೆ ಈ ದುರಂತಕ್ಕೆ ನಿಖರ ಕಾರಣ ಇದುವರೆಗೂ ತಿಳಿದುಬಂದಿಲ್ಲ.
ಸ್ಥಳೀಯರ ಪ್ರಕಾರ, ಕೊಟ್ರೇಶ್ ಶಾಲಾ ಕಟ್ಟಡದ ಮೇಲ್ಭಾಗಕ್ಕೆ ಹೋಗಿದ್ದರು. ಅಲ್ಲಿಂದ ಏಕಾಏಕಿ ಕೆಳಗೆ ಬಿದ್ದಿದ್ದಾರೆ. ಘಟನೆ ನಡೆದ ಕೂಡಲೇ ಶಾಲಾ ಆಡಳಿತ ಮತ್ತು ಸಹಪಾಠಿಗಳು ಆತಂಕಕ್ಕೆ ಒಳಗಾದರು.
ತಕ್ಷಣವೇ ಆಂಬ್ಯುಲೆನ್ಸ್ ಕರೆಸಿ ಮೃ*ತದೇಹವನ್ನು ಭರಮಸಾಗರ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿದ ನಂತರ ಮೃ*ತದೇಹವನ್ನು ಪೋಸ್ಟ್ಮಾರ್ಟಂಗೆ ಕಳುಹಿಸಲಾಗಿದೆ.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…