Categories: ಕೋಲಾರ

ಎಸ್.ಎಂ ಕೃಷ್ಣ ನಿಧನ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ

ಕೋಲಾರ: ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಬುಧವಾರ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಮಾತನಾಡಿ ಎಸ್.ಎಂ. ಕೃಷ್ಣ ಅವರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ಬೆಂಗಳೂರು ನಗರವನ್ನು ಸಿಲಿಕಾನ್ ಸಿಟಿಯಾಗಿ ಮಾಡಿದ್ದಾರೆ ಇಡೀ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಬಯಸಿ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ದ ಕೀರ್ತಿ ಅವರಿಗೆ ಸಲ್ಲುತ್ತದೆ ಮಹಿಳಾ ಸಂಘಗಳ ರಚನೆ, ಸಹಕಾರಿ ಸಂಸ್ಥೆಗಳಲ್ಲಿ ಯಶಸ್ವಿನಿ ಯೋಜನೆ ಜಾರಿಗೆ ಕಾರಣವಾಗಿದ್ದಾರೆ ಇವರ ಆತ್ಮಕ್ಕೆ ಶಾಂತಿ ಸಿಗುವುದರ ಜತೆಗೆ ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷ ಕೆ.ಜಯದೇವ್ ಮಾತನಾಡಿ ಎಸ್.ಎಂ ಕೃಷ್ಣ ಅವರು ಮಾಜಿ ಮುಖ್ಯಮಂತ್ರಿಯಾಗಿ ಕೇಂದ್ರದಲ್ಲಿ ಸಚಿವರಾಗಿ ಮಹಾರಾಷ್ಟ್ರ ರಾಜ್ಯದ ರಾಜ್ಯಪಾಲ ಅಂತಹ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದಾರೆ ಅವರ ನಿಧನವು ರಾಜ್ಯಕ್ಕೆ ಮತ್ತು ಕೇಂದ್ರಕ್ಕೆ ತುಂಬಲಾರದ ನಷ್ಟವಾಗಿದೆ ಅವರು ದೇಶಕ್ಕೆ ಮತ್ತು ರಾಜ್ಯಕ್ಕೆ ನೀಡಿರುವ ಕೊಡುಗೆಯೂ ಜನಮಾನಸದಲ್ಲಿ ಉಳಿಯುವಂತೆ ಮಾಡಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಎಸ್ಸಿ ಘಟಕದ ರಾಜ್ಯ ಕಾರ್ಯದರ್ಶಿ ಬಿ.ಶಂಕರಪ್ಪ, ಬೀದಿಬದಿ ವ್ಯಾಪಾರಸ್ಥರ ಘಟಕದ ಜಿಲ್ಲಾ ಅಧ್ಯಕ್ಷ ಮಂಜುನಾಥ್, ಕಿಸಾನ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ನಾಗರಾಜ್ ಗೌಡ, ಮುಖಂಡರಾದ ಶ್ರೀರಾಮ್ ವೆಂಕಟಪತಿಯಪ್ಪ, ಸೈಯದ್ ಜಾಫರ್, ಪಾರೇಜಾನ್, ತಮ್ಮಣ್ಣ ಮುಂತಾದವರು ಇದ್ದರು.

Ramesh Babu

Journalist

Recent Posts

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

37 minutes ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 hour ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

1 hour ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

1 hour ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

5 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

8 hours ago