ಕೋಲಾರ: ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಬುಧವಾರ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಮಾತನಾಡಿ ಎಸ್.ಎಂ. ಕೃಷ್ಣ ಅವರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ಬೆಂಗಳೂರು ನಗರವನ್ನು ಸಿಲಿಕಾನ್ ಸಿಟಿಯಾಗಿ ಮಾಡಿದ್ದಾರೆ ಇಡೀ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಬಯಸಿ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ದ ಕೀರ್ತಿ ಅವರಿಗೆ ಸಲ್ಲುತ್ತದೆ ಮಹಿಳಾ ಸಂಘಗಳ ರಚನೆ, ಸಹಕಾರಿ ಸಂಸ್ಥೆಗಳಲ್ಲಿ ಯಶಸ್ವಿನಿ ಯೋಜನೆ ಜಾರಿಗೆ ಕಾರಣವಾಗಿದ್ದಾರೆ ಇವರ ಆತ್ಮಕ್ಕೆ ಶಾಂತಿ ಸಿಗುವುದರ ಜತೆಗೆ ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಎಸ್ಸಿ ಘಟಕದ ಜಿಲ್ಲಾ ಅಧ್ಯಕ್ಷ ಕೆ.ಜಯದೇವ್ ಮಾತನಾಡಿ ಎಸ್.ಎಂ ಕೃಷ್ಣ ಅವರು ಮಾಜಿ ಮುಖ್ಯಮಂತ್ರಿಯಾಗಿ ಕೇಂದ್ರದಲ್ಲಿ ಸಚಿವರಾಗಿ ಮಹಾರಾಷ್ಟ್ರ ರಾಜ್ಯದ ರಾಜ್ಯಪಾಲ ಅಂತಹ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದಾರೆ ಅವರ ನಿಧನವು ರಾಜ್ಯಕ್ಕೆ ಮತ್ತು ಕೇಂದ್ರಕ್ಕೆ ತುಂಬಲಾರದ ನಷ್ಟವಾಗಿದೆ ಅವರು ದೇಶಕ್ಕೆ ಮತ್ತು ರಾಜ್ಯಕ್ಕೆ ನೀಡಿರುವ ಕೊಡುಗೆಯೂ ಜನಮಾನಸದಲ್ಲಿ ಉಳಿಯುವಂತೆ ಮಾಡಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಎಸ್ಸಿ ಘಟಕದ ರಾಜ್ಯ ಕಾರ್ಯದರ್ಶಿ ಬಿ.ಶಂಕರಪ್ಪ, ಬೀದಿಬದಿ ವ್ಯಾಪಾರಸ್ಥರ ಘಟಕದ ಜಿಲ್ಲಾ ಅಧ್ಯಕ್ಷ ಮಂಜುನಾಥ್, ಕಿಸಾನ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ನಾಗರಾಜ್ ಗೌಡ, ಮುಖಂಡರಾದ ಶ್ರೀರಾಮ್ ವೆಂಕಟಪತಿಯಪ್ಪ, ಸೈಯದ್ ಜಾಫರ್, ಪಾರೇಜಾನ್, ತಮ್ಮಣ್ಣ ಮುಂತಾದವರು ಇದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…