Categories: ಕೋಲಾರ

ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಗೆ ಶಾಸಕ ಕೊತ್ತೂರು ಮಂಜುನಾಥ್ ಭೇಟಿ; ಪರಿಶೀಲನೆ

ಕೋಲಾರ: ನಗರದ ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಗೆ ಶನಿವಾರ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ಮೂಲಸೌಕರ್ಯ ಹಾಗೂ ಕುಂದು ಕೊರತೆಗಳ ಬಗ್ಗೆ ಪರಿಶೀಲಿಸಿದರು.

ಆಸ್ಪತ್ರೆಯ ವೈದ್ಯರು ಸೇರಿದಂತೆ ಸಿಬ್ಬಂದಿಯ ಹಾಜರಾತಿ ಪುಸ್ತಕ, ಆಡಳಿತದ ಖರ್ಚು ವೆಚ್ಚದ ಕಡತಗಳನ್ನು ಪರಿಶೀಲಿಸಿ, ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಿರಬೇಕು ಎಂದು ಸೂಚಿಸಿದರು ನಂತರ ವಿವಿಧ ವಾರ್ಡ್‌ಗಳಿಗೆ ತೆರಳಿ ರೋಗಿಗಳ ಆರೋಗ್ಯ ವಿಚಾರಿಸಿದರು.

ನಂತರ ಪತ್ರಕರ್ತರೊಂದಿಗೆ ಮಾತನಾಡಿ ರಾಜ್ಯದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಅಂತಹ ಖಾಯಿಲೆಗಳು ಹೆಚ್ಚಾಗುತ್ತಾ ಇದ್ದು ಸ್ವಚ್ಚತೆ ಕಾಪಾಡಲು ಖಾಯಿಲೆ ಬರದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನಗರಸಭೆ ಹಾಗೂ ಆಸ್ಪತ್ರೆಯ ಅಧಿಕಾರಿಗಳಿಗೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಜೊತೆಗೆ ಖಾಸಗಿ ಆಸ್ಪತ್ರೆಗಳ ಮಾಫೀಯಾ ನಡೆಯುತ್ತಿದ್ದು ಯಾವುದೇ ಕಾರಣಕ್ಕೂ ಖಾಸಗಿ ಆಸ್ಪತ್ರೆ ಹಾಗೂ ಔಷಧ ಅಂಗಡಿಗಳಲ್ಲಿ ಖರೀದಿಸಲು ಚೀಟಿ ಬರೆದುಕೊಟ್ಟಿದ್ದು ಕಂಡು ಬಂದಲ್ಲಿ ಶಿಸ್ತುಕ್ರಮ ಕೈಗೊಳ್ಳುವುದಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಆಸ್ಪತ್ರೆಯ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು, ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ ಜೊತೆಗೆ ಸೌಜನ್ಯವಾಗಿ ವರ್ತಿಸಬೇಕು ದಿನನಿತ್ಯ ಸುಮಾರು 1200 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಹೊರರೋಗಿಗಳು ಚಿಕಿತ್ಸೆಗೆ ಬರುತ್ತಾರೆ ಜೊತೆಗೆ ರಕ್ಷಣೆಯ ದೃಷ್ಟಿಯಿಂದ ತಾಯಿ ಮಕ್ಕಳ ವಾರ್ಡ್ ನಲ್ಲಿ ಪಾಸ್ ಮತ್ತು ಟ್ಯಾಗ್ ಕಡ್ಡಾಯವಾಗಿ ಕೊಟ್ಟು ಅವರ ಬಗ್ಗೆ ನಿಗಾ ವಹಿಸಬೇಕು ಸುಮಾರು ಹತ್ತು ಕೋಟಿ ವೆಚ್ಚದಲ್ಲಿ ಸಣ್ಣ ಪುಟ್ಟ ಕಾಮಗಾರಿಗಳು ನಡೆಯುತ್ತಿವೆ ಮೂಲಭೂತ ಸೌಕರ್ಯಗಳ ನೀಡಿ ಮುಂದೆ ಎಲ್ಲಾ ಸೌಲಭ್ಯಗಳನ್ನು ಒಂದೇ ಕಡೆಯಲ್ಲಿ ಸಿಗುವಂತೆ ಮಾಡಲಾಗುತ್ತದೆ ಎಂದರು

ಜಿಲ್ಲಾ ಆಸ್ಪತ್ರೆಯಲ್ಲಿ ಸಣ್ಣ ಪುಟ್ಟ ಸಮಸ್ಯೆ ಇದ್ದೇ ಇರುತ್ತದೆ ಇಲ್ಲ ಅಂತ ಹೇಳಿಲ್ಲ ಅದನ್ನು ವೈದ್ಯರು ಮತ್ತು ಸಿಬ್ಬಂದಿ ತಿದ್ದಿಕೊಳ್ಳಬೇಕು ಇಲ್ಲಿ ಪಾರ್ಕಿಂಗ್ ಸಮಸ್ಯೆಯ ಜೊತೆಗೆ ಖಾಸಗಿ ಆಂಬುಲೆನ್ಸ್ ಗಳ ಹಾವಳಿ ಹೆಚ್ಚಾಗಿದೆ ಮುಂದೆ ಎಲ್ಲವೂ ಸರಿಹೋಗುತ್ತದೆ ಎಂದರು ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಜಿಲ್ಲಾ ಸರ್ಜನ್ ಜಗದೀಶ್ ಸೇರಿದಂತೆ ವೈದ್ಯರು ಸಿಬ್ಬಂದಿ ಇದ್ದರು.

Ramesh Babu

Journalist

Recent Posts

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

2 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

2 hours ago

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…

5 hours ago

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

15 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

18 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

20 hours ago