Categories: ಕೋಲಾರ

ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಗೆ ಶಾಸಕ ಕೊತ್ತೂರು ಮಂಜುನಾಥ್ ಭೇಟಿ; ಪರಿಶೀಲನೆ

ಕೋಲಾರ: ನಗರದ ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಗೆ ಶನಿವಾರ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ಮೂಲಸೌಕರ್ಯ ಹಾಗೂ ಕುಂದು ಕೊರತೆಗಳ ಬಗ್ಗೆ ಪರಿಶೀಲಿಸಿದರು.

ಆಸ್ಪತ್ರೆಯ ವೈದ್ಯರು ಸೇರಿದಂತೆ ಸಿಬ್ಬಂದಿಯ ಹಾಜರಾತಿ ಪುಸ್ತಕ, ಆಡಳಿತದ ಖರ್ಚು ವೆಚ್ಚದ ಕಡತಗಳನ್ನು ಪರಿಶೀಲಿಸಿ, ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಿರಬೇಕು ಎಂದು ಸೂಚಿಸಿದರು ನಂತರ ವಿವಿಧ ವಾರ್ಡ್‌ಗಳಿಗೆ ತೆರಳಿ ರೋಗಿಗಳ ಆರೋಗ್ಯ ವಿಚಾರಿಸಿದರು.

ನಂತರ ಪತ್ರಕರ್ತರೊಂದಿಗೆ ಮಾತನಾಡಿ ರಾಜ್ಯದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಅಂತಹ ಖಾಯಿಲೆಗಳು ಹೆಚ್ಚಾಗುತ್ತಾ ಇದ್ದು ಸ್ವಚ್ಚತೆ ಕಾಪಾಡಲು ಖಾಯಿಲೆ ಬರದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನಗರಸಭೆ ಹಾಗೂ ಆಸ್ಪತ್ರೆಯ ಅಧಿಕಾರಿಗಳಿಗೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಜೊತೆಗೆ ಖಾಸಗಿ ಆಸ್ಪತ್ರೆಗಳ ಮಾಫೀಯಾ ನಡೆಯುತ್ತಿದ್ದು ಯಾವುದೇ ಕಾರಣಕ್ಕೂ ಖಾಸಗಿ ಆಸ್ಪತ್ರೆ ಹಾಗೂ ಔಷಧ ಅಂಗಡಿಗಳಲ್ಲಿ ಖರೀದಿಸಲು ಚೀಟಿ ಬರೆದುಕೊಟ್ಟಿದ್ದು ಕಂಡು ಬಂದಲ್ಲಿ ಶಿಸ್ತುಕ್ರಮ ಕೈಗೊಳ್ಳುವುದಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಆಸ್ಪತ್ರೆಯ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು, ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ ಜೊತೆಗೆ ಸೌಜನ್ಯವಾಗಿ ವರ್ತಿಸಬೇಕು ದಿನನಿತ್ಯ ಸುಮಾರು 1200 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಹೊರರೋಗಿಗಳು ಚಿಕಿತ್ಸೆಗೆ ಬರುತ್ತಾರೆ ಜೊತೆಗೆ ರಕ್ಷಣೆಯ ದೃಷ್ಟಿಯಿಂದ ತಾಯಿ ಮಕ್ಕಳ ವಾರ್ಡ್ ನಲ್ಲಿ ಪಾಸ್ ಮತ್ತು ಟ್ಯಾಗ್ ಕಡ್ಡಾಯವಾಗಿ ಕೊಟ್ಟು ಅವರ ಬಗ್ಗೆ ನಿಗಾ ವಹಿಸಬೇಕು ಸುಮಾರು ಹತ್ತು ಕೋಟಿ ವೆಚ್ಚದಲ್ಲಿ ಸಣ್ಣ ಪುಟ್ಟ ಕಾಮಗಾರಿಗಳು ನಡೆಯುತ್ತಿವೆ ಮೂಲಭೂತ ಸೌಕರ್ಯಗಳ ನೀಡಿ ಮುಂದೆ ಎಲ್ಲಾ ಸೌಲಭ್ಯಗಳನ್ನು ಒಂದೇ ಕಡೆಯಲ್ಲಿ ಸಿಗುವಂತೆ ಮಾಡಲಾಗುತ್ತದೆ ಎಂದರು

ಜಿಲ್ಲಾ ಆಸ್ಪತ್ರೆಯಲ್ಲಿ ಸಣ್ಣ ಪುಟ್ಟ ಸಮಸ್ಯೆ ಇದ್ದೇ ಇರುತ್ತದೆ ಇಲ್ಲ ಅಂತ ಹೇಳಿಲ್ಲ ಅದನ್ನು ವೈದ್ಯರು ಮತ್ತು ಸಿಬ್ಬಂದಿ ತಿದ್ದಿಕೊಳ್ಳಬೇಕು ಇಲ್ಲಿ ಪಾರ್ಕಿಂಗ್ ಸಮಸ್ಯೆಯ ಜೊತೆಗೆ ಖಾಸಗಿ ಆಂಬುಲೆನ್ಸ್ ಗಳ ಹಾವಳಿ ಹೆಚ್ಚಾಗಿದೆ ಮುಂದೆ ಎಲ್ಲವೂ ಸರಿಹೋಗುತ್ತದೆ ಎಂದರು ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಜಿಲ್ಲಾ ಸರ್ಜನ್ ಜಗದೀಶ್ ಸೇರಿದಂತೆ ವೈದ್ಯರು ಸಿಬ್ಬಂದಿ ಇದ್ದರು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

11 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

15 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

15 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

23 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

2 days ago