Categories: ಕೋಲಾರ

ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಗೆ ಶಾಸಕ ಕೊತ್ತೂರು ಮಂಜುನಾಥ್ ಭೇಟಿ; ಪರಿಶೀಲನೆ

ಕೋಲಾರ: ನಗರದ ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಗೆ ಶನಿವಾರ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ಮೂಲಸೌಕರ್ಯ ಹಾಗೂ ಕುಂದು ಕೊರತೆಗಳ ಬಗ್ಗೆ ಪರಿಶೀಲಿಸಿದರು.

ಆಸ್ಪತ್ರೆಯ ವೈದ್ಯರು ಸೇರಿದಂತೆ ಸಿಬ್ಬಂದಿಯ ಹಾಜರಾತಿ ಪುಸ್ತಕ, ಆಡಳಿತದ ಖರ್ಚು ವೆಚ್ಚದ ಕಡತಗಳನ್ನು ಪರಿಶೀಲಿಸಿ, ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಿರಬೇಕು ಎಂದು ಸೂಚಿಸಿದರು ನಂತರ ವಿವಿಧ ವಾರ್ಡ್‌ಗಳಿಗೆ ತೆರಳಿ ರೋಗಿಗಳ ಆರೋಗ್ಯ ವಿಚಾರಿಸಿದರು.

ನಂತರ ಪತ್ರಕರ್ತರೊಂದಿಗೆ ಮಾತನಾಡಿ ರಾಜ್ಯದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಅಂತಹ ಖಾಯಿಲೆಗಳು ಹೆಚ್ಚಾಗುತ್ತಾ ಇದ್ದು ಸ್ವಚ್ಚತೆ ಕಾಪಾಡಲು ಖಾಯಿಲೆ ಬರದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನಗರಸಭೆ ಹಾಗೂ ಆಸ್ಪತ್ರೆಯ ಅಧಿಕಾರಿಗಳಿಗೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಜೊತೆಗೆ ಖಾಸಗಿ ಆಸ್ಪತ್ರೆಗಳ ಮಾಫೀಯಾ ನಡೆಯುತ್ತಿದ್ದು ಯಾವುದೇ ಕಾರಣಕ್ಕೂ ಖಾಸಗಿ ಆಸ್ಪತ್ರೆ ಹಾಗೂ ಔಷಧ ಅಂಗಡಿಗಳಲ್ಲಿ ಖರೀದಿಸಲು ಚೀಟಿ ಬರೆದುಕೊಟ್ಟಿದ್ದು ಕಂಡು ಬಂದಲ್ಲಿ ಶಿಸ್ತುಕ್ರಮ ಕೈಗೊಳ್ಳುವುದಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಆಸ್ಪತ್ರೆಯ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು, ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ ಜೊತೆಗೆ ಸೌಜನ್ಯವಾಗಿ ವರ್ತಿಸಬೇಕು ದಿನನಿತ್ಯ ಸುಮಾರು 1200 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಹೊರರೋಗಿಗಳು ಚಿಕಿತ್ಸೆಗೆ ಬರುತ್ತಾರೆ ಜೊತೆಗೆ ರಕ್ಷಣೆಯ ದೃಷ್ಟಿಯಿಂದ ತಾಯಿ ಮಕ್ಕಳ ವಾರ್ಡ್ ನಲ್ಲಿ ಪಾಸ್ ಮತ್ತು ಟ್ಯಾಗ್ ಕಡ್ಡಾಯವಾಗಿ ಕೊಟ್ಟು ಅವರ ಬಗ್ಗೆ ನಿಗಾ ವಹಿಸಬೇಕು ಸುಮಾರು ಹತ್ತು ಕೋಟಿ ವೆಚ್ಚದಲ್ಲಿ ಸಣ್ಣ ಪುಟ್ಟ ಕಾಮಗಾರಿಗಳು ನಡೆಯುತ್ತಿವೆ ಮೂಲಭೂತ ಸೌಕರ್ಯಗಳ ನೀಡಿ ಮುಂದೆ ಎಲ್ಲಾ ಸೌಲಭ್ಯಗಳನ್ನು ಒಂದೇ ಕಡೆಯಲ್ಲಿ ಸಿಗುವಂತೆ ಮಾಡಲಾಗುತ್ತದೆ ಎಂದರು

ಜಿಲ್ಲಾ ಆಸ್ಪತ್ರೆಯಲ್ಲಿ ಸಣ್ಣ ಪುಟ್ಟ ಸಮಸ್ಯೆ ಇದ್ದೇ ಇರುತ್ತದೆ ಇಲ್ಲ ಅಂತ ಹೇಳಿಲ್ಲ ಅದನ್ನು ವೈದ್ಯರು ಮತ್ತು ಸಿಬ್ಬಂದಿ ತಿದ್ದಿಕೊಳ್ಳಬೇಕು ಇಲ್ಲಿ ಪಾರ್ಕಿಂಗ್ ಸಮಸ್ಯೆಯ ಜೊತೆಗೆ ಖಾಸಗಿ ಆಂಬುಲೆನ್ಸ್ ಗಳ ಹಾವಳಿ ಹೆಚ್ಚಾಗಿದೆ ಮುಂದೆ ಎಲ್ಲವೂ ಸರಿಹೋಗುತ್ತದೆ ಎಂದರು ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಜಿಲ್ಲಾ ಸರ್ಜನ್ ಜಗದೀಶ್ ಸೇರಿದಂತೆ ವೈದ್ಯರು ಸಿಬ್ಬಂದಿ ಇದ್ದರು.

Ramesh Babu

Journalist

Recent Posts

ಮೇ 20 ಇ-ಫಾರ್ಮಸಿ ವಿರೋಧಿ ಬಂದ್‌ಗೆ ಔಷಧ ವ್ಯಾಪಾರಿಗಳ ಬೆಂಬಲ

ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ…

7 hours ago

ಹಾಡೋನಹಳ್ಳಿ ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…

8 hours ago

ವಿ.ಡಿ ಸತೀಶನ್ ಕೇರಳದ ನೂತನ ಮುಖ್ಯಮಂತ್ರಿ

ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…

13 hours ago

ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ ಪರೀಕ್ಷೆಯ ಅಕ್ರಮ ಖಂಡಿಸಿ “ಕೈ” ಪ್ರತಿಭಟನೆ

ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…

14 hours ago

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

1 day ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

1 day ago