ಕೋಲಾರ: ನಗರದ ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಗೆ ಶನಿವಾರ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ಮೂಲಸೌಕರ್ಯ ಹಾಗೂ ಕುಂದು ಕೊರತೆಗಳ ಬಗ್ಗೆ ಪರಿಶೀಲಿಸಿದರು.
ಆಸ್ಪತ್ರೆಯ ವೈದ್ಯರು ಸೇರಿದಂತೆ ಸಿಬ್ಬಂದಿಯ ಹಾಜರಾತಿ ಪುಸ್ತಕ, ಆಡಳಿತದ ಖರ್ಚು ವೆಚ್ಚದ ಕಡತಗಳನ್ನು ಪರಿಶೀಲಿಸಿ, ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಿರಬೇಕು ಎಂದು ಸೂಚಿಸಿದರು ನಂತರ ವಿವಿಧ ವಾರ್ಡ್ಗಳಿಗೆ ತೆರಳಿ ರೋಗಿಗಳ ಆರೋಗ್ಯ ವಿಚಾರಿಸಿದರು.
ನಂತರ ಪತ್ರಕರ್ತರೊಂದಿಗೆ ಮಾತನಾಡಿ ರಾಜ್ಯದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಅಂತಹ ಖಾಯಿಲೆಗಳು ಹೆಚ್ಚಾಗುತ್ತಾ ಇದ್ದು ಸ್ವಚ್ಚತೆ ಕಾಪಾಡಲು ಖಾಯಿಲೆ ಬರದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನಗರಸಭೆ ಹಾಗೂ ಆಸ್ಪತ್ರೆಯ ಅಧಿಕಾರಿಗಳಿಗೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಜೊತೆಗೆ ಖಾಸಗಿ ಆಸ್ಪತ್ರೆಗಳ ಮಾಫೀಯಾ ನಡೆಯುತ್ತಿದ್ದು ಯಾವುದೇ ಕಾರಣಕ್ಕೂ ಖಾಸಗಿ ಆಸ್ಪತ್ರೆ ಹಾಗೂ ಔಷಧ ಅಂಗಡಿಗಳಲ್ಲಿ ಖರೀದಿಸಲು ಚೀಟಿ ಬರೆದುಕೊಟ್ಟಿದ್ದು ಕಂಡು ಬಂದಲ್ಲಿ ಶಿಸ್ತುಕ್ರಮ ಕೈಗೊಳ್ಳುವುದಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಆಸ್ಪತ್ರೆಯ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು, ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ ಜೊತೆಗೆ ಸೌಜನ್ಯವಾಗಿ ವರ್ತಿಸಬೇಕು ದಿನನಿತ್ಯ ಸುಮಾರು 1200 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಹೊರರೋಗಿಗಳು ಚಿಕಿತ್ಸೆಗೆ ಬರುತ್ತಾರೆ ಜೊತೆಗೆ ರಕ್ಷಣೆಯ ದೃಷ್ಟಿಯಿಂದ ತಾಯಿ ಮಕ್ಕಳ ವಾರ್ಡ್ ನಲ್ಲಿ ಪಾಸ್ ಮತ್ತು ಟ್ಯಾಗ್ ಕಡ್ಡಾಯವಾಗಿ ಕೊಟ್ಟು ಅವರ ಬಗ್ಗೆ ನಿಗಾ ವಹಿಸಬೇಕು ಸುಮಾರು ಹತ್ತು ಕೋಟಿ ವೆಚ್ಚದಲ್ಲಿ ಸಣ್ಣ ಪುಟ್ಟ ಕಾಮಗಾರಿಗಳು ನಡೆಯುತ್ತಿವೆ ಮೂಲಭೂತ ಸೌಕರ್ಯಗಳ ನೀಡಿ ಮುಂದೆ ಎಲ್ಲಾ ಸೌಲಭ್ಯಗಳನ್ನು ಒಂದೇ ಕಡೆಯಲ್ಲಿ ಸಿಗುವಂತೆ ಮಾಡಲಾಗುತ್ತದೆ ಎಂದರು
ಜಿಲ್ಲಾ ಆಸ್ಪತ್ರೆಯಲ್ಲಿ ಸಣ್ಣ ಪುಟ್ಟ ಸಮಸ್ಯೆ ಇದ್ದೇ ಇರುತ್ತದೆ ಇಲ್ಲ ಅಂತ ಹೇಳಿಲ್ಲ ಅದನ್ನು ವೈದ್ಯರು ಮತ್ತು ಸಿಬ್ಬಂದಿ ತಿದ್ದಿಕೊಳ್ಳಬೇಕು ಇಲ್ಲಿ ಪಾರ್ಕಿಂಗ್ ಸಮಸ್ಯೆಯ ಜೊತೆಗೆ ಖಾಸಗಿ ಆಂಬುಲೆನ್ಸ್ ಗಳ ಹಾವಳಿ ಹೆಚ್ಚಾಗಿದೆ ಮುಂದೆ ಎಲ್ಲವೂ ಸರಿಹೋಗುತ್ತದೆ ಎಂದರು ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಜಿಲ್ಲಾ ಸರ್ಜನ್ ಜಗದೀಶ್ ಸೇರಿದಂತೆ ವೈದ್ಯರು ಸಿಬ್ಬಂದಿ ಇದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…