Categories: ಕೋಲಾರ

ಎಸ್.ಎನ್ ಗೆ ಸಚಿವ ಸ್ಥಾನಕ್ಕೆ ಯುವ ಸೇನೆ ನವೀನ್ ಒತ್ತಾಯ

ಕೋಲಾರ: ರಾಜ್ಯದಲ್ಲಿನ ಕಾಂಗ್ರೆಸ್ ನೇತೃತ್ವದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಮುಂದೆ ನಡೆಯಲಿರುವ ಸಚಿವ ಸಂಪುಟದ ಪುನಃರಚನೆಯ ಸಂದರ್ಭದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಎಸ್.ಎನ್ ಯುವ ಸೇನೆ ಜಿಲ್ಲಾ ಅಧ್ಯಕ್ಷ ತುಮಟಗೆರೆ ನವೀನ್ ಗೌಡ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಎಸ್.ಎನ್ ನಾರಾಯಣಸ್ವಾಮಿ ಅವರು ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಸತತವಾಗಿ ಮೂರನೇ ಬಾರಿಗೆ ಶಾಸಕರಾಗಿ ಜಿಲ್ಲೆಯಲ್ಲಿ ಗೆದ್ದಿರುವ ನಾಲ್ಕು ಸ್ಥಾನಗಳಲ್ಲಿ ಹಿರಿಯ ಶಾಸಕರಾಗಿದ್ದಾರೆ ಈ ಹಿಂದೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಪ್ರಸ್ತುತ ಹಣಕಾಸು ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಅನುಭವವಿರುವ ಇವರು ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದು ದಲಿತ ಸಮುದಾಯಗಳಿಂದ ಪ್ರತಿನಿಧಿಸಿರುವ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯವನ್ನು ದೊರಕಿಸಿ ಕೊಡಬೇಕೆಂದು ಮನವಿ ಮಾಡಿದರು.

ಕಳೆದ 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 136 ಸ್ಥಾನಗಳನ್ನು ಪಡೆದಿದ್ದ ಸಂದರ್ಭದಲ್ಲಿ ಸರಕಾರ ರಚನೆಯಲ್ಲಿ ಎಸ್.ಎನ್ ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದರು ಆದರೆ ಮೊದಲ ಸಚಿವ ಸಂಪುಟದ ರಚನೆಯಲ್ಲಿ ಹಿರಿಯರಿಗೆ ಅವಕಾಶ ನೀಡಲಾಗುತ್ತದೆ ಮುಂದೆ ನಡೆಯವ ಸಂದರ್ಭದಲ್ಲಿ ಅವಕಾಶ ನೀಡುವುದಾಗಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಆಶ್ವಾಸನೆ ನೀಡಿದ್ದರಿಂದ ಹಿಂದೆ ಸರಿದಿದ್ದು ಈ ಬಾರಿಯ ದಲಿತ ಕೋಟಾ ಹಾಗೂ ಜಿಲ್ಲೆಯ ಹಿರಿತನದ ಆಧಾರದಲ್ಲಿ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿದರು.

ಕೋಲಾರ ಜಿಲ್ಲೆಯಲ್ಲಿ ಎಲ್ಲಾ ಶಾಸಕರನ್ನು ಹಾಗೂ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಹೊಂದುವಂತೆ ಮಾಡುವಂತೆ ಮಾಡಲಿದ್ದು ಇಂತಹ ಅನುಭವಿಗೆ ಅವಕಾಶ ಕೊಟ್ಟರೆ ಜಿಲ್ಲೆಯಲ್ಲಿನ ಹಿಂದುಳಿದ ವರ್ಗ, ಶೋಷಿತ ಸಮುದಾಯಗಳು, ಬಡವರು, ದೀನ ದಲಿತರ ಪರವಾಗಿ ಕೆಲಸ ಮಾಡಿದ್ದಾರೆ. ದುರ್ಬಲರ ಏಳಿಗೆಗಾಗಿ ಶ್ರಮಿಸಿದ್ದಾರೆ. ಜನಾನುರಾಗಿ ಆಗಿರುವ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಶಾಸಕ ಎಸ್ ಎನ್ ನಾರಾಯಣಸ್ವಾಮಿ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜನ ಮೆಚ್ಚುವ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರಿಂದಾಗಿ ಸತತವಾಗಿ ಮೂರನೇ ಬಾರಿಗೆ ಗೆಲ್ಲಿಸಿದ್ದಾರೆ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರದ ಮಟ್ಟದಲ್ಲಿ ಒತ್ತಡ ತಂದು ಜಿಲ್ಲೆಯಲ್ಲಿ ಅಭಿವೃದ್ಧಿ ಹರಿಕಾರ ಎನಿಸಿಕೊಂಡಿದ್ದಾರೆ ಯಾವುದೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಾ ಮುಖಂಡರು ಹಾಗೂ ಕಾರ್ಯಕರ್ತರಿಗೆ ದೊಡ್ಡ ಶಕ್ತಿಯಾಗಿ ನಿಂತಿದ್ದು ಪಕ್ಷದ ಹೈಕಮಾಂಡ್ ಜನಪರ ಸೇವೆ ಗುರುತಿಸಿ ಸಚಿವ ಸ್ಥಾನ ನೀಡುವ ಮೂಲಕ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

14 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

21 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

22 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago