Categories: ಕೋಲಾರ

ಎಸ್.ಎನ್ ಗೆ ಸಚಿವ ಸ್ಥಾನಕ್ಕೆ ಯುವ ಸೇನೆ ನವೀನ್ ಒತ್ತಾಯ

ಕೋಲಾರ: ರಾಜ್ಯದಲ್ಲಿನ ಕಾಂಗ್ರೆಸ್ ನೇತೃತ್ವದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಮುಂದೆ ನಡೆಯಲಿರುವ ಸಚಿವ ಸಂಪುಟದ ಪುನಃರಚನೆಯ ಸಂದರ್ಭದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಎಸ್.ಎನ್ ಯುವ ಸೇನೆ ಜಿಲ್ಲಾ ಅಧ್ಯಕ್ಷ ತುಮಟಗೆರೆ ನವೀನ್ ಗೌಡ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಎಸ್.ಎನ್ ನಾರಾಯಣಸ್ವಾಮಿ ಅವರು ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಸತತವಾಗಿ ಮೂರನೇ ಬಾರಿಗೆ ಶಾಸಕರಾಗಿ ಜಿಲ್ಲೆಯಲ್ಲಿ ಗೆದ್ದಿರುವ ನಾಲ್ಕು ಸ್ಥಾನಗಳಲ್ಲಿ ಹಿರಿಯ ಶಾಸಕರಾಗಿದ್ದಾರೆ ಈ ಹಿಂದೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಪ್ರಸ್ತುತ ಹಣಕಾಸು ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಅನುಭವವಿರುವ ಇವರು ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದು ದಲಿತ ಸಮುದಾಯಗಳಿಂದ ಪ್ರತಿನಿಧಿಸಿರುವ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯವನ್ನು ದೊರಕಿಸಿ ಕೊಡಬೇಕೆಂದು ಮನವಿ ಮಾಡಿದರು.

ಕಳೆದ 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 136 ಸ್ಥಾನಗಳನ್ನು ಪಡೆದಿದ್ದ ಸಂದರ್ಭದಲ್ಲಿ ಸರಕಾರ ರಚನೆಯಲ್ಲಿ ಎಸ್.ಎನ್ ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದರು ಆದರೆ ಮೊದಲ ಸಚಿವ ಸಂಪುಟದ ರಚನೆಯಲ್ಲಿ ಹಿರಿಯರಿಗೆ ಅವಕಾಶ ನೀಡಲಾಗುತ್ತದೆ ಮುಂದೆ ನಡೆಯವ ಸಂದರ್ಭದಲ್ಲಿ ಅವಕಾಶ ನೀಡುವುದಾಗಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಆಶ್ವಾಸನೆ ನೀಡಿದ್ದರಿಂದ ಹಿಂದೆ ಸರಿದಿದ್ದು ಈ ಬಾರಿಯ ದಲಿತ ಕೋಟಾ ಹಾಗೂ ಜಿಲ್ಲೆಯ ಹಿರಿತನದ ಆಧಾರದಲ್ಲಿ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿದರು.

ಕೋಲಾರ ಜಿಲ್ಲೆಯಲ್ಲಿ ಎಲ್ಲಾ ಶಾಸಕರನ್ನು ಹಾಗೂ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಹೊಂದುವಂತೆ ಮಾಡುವಂತೆ ಮಾಡಲಿದ್ದು ಇಂತಹ ಅನುಭವಿಗೆ ಅವಕಾಶ ಕೊಟ್ಟರೆ ಜಿಲ್ಲೆಯಲ್ಲಿನ ಹಿಂದುಳಿದ ವರ್ಗ, ಶೋಷಿತ ಸಮುದಾಯಗಳು, ಬಡವರು, ದೀನ ದಲಿತರ ಪರವಾಗಿ ಕೆಲಸ ಮಾಡಿದ್ದಾರೆ. ದುರ್ಬಲರ ಏಳಿಗೆಗಾಗಿ ಶ್ರಮಿಸಿದ್ದಾರೆ. ಜನಾನುರಾಗಿ ಆಗಿರುವ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಶಾಸಕ ಎಸ್ ಎನ್ ನಾರಾಯಣಸ್ವಾಮಿ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜನ ಮೆಚ್ಚುವ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರಿಂದಾಗಿ ಸತತವಾಗಿ ಮೂರನೇ ಬಾರಿಗೆ ಗೆಲ್ಲಿಸಿದ್ದಾರೆ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರದ ಮಟ್ಟದಲ್ಲಿ ಒತ್ತಡ ತಂದು ಜಿಲ್ಲೆಯಲ್ಲಿ ಅಭಿವೃದ್ಧಿ ಹರಿಕಾರ ಎನಿಸಿಕೊಂಡಿದ್ದಾರೆ ಯಾವುದೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಾ ಮುಖಂಡರು ಹಾಗೂ ಕಾರ್ಯಕರ್ತರಿಗೆ ದೊಡ್ಡ ಶಕ್ತಿಯಾಗಿ ನಿಂತಿದ್ದು ಪಕ್ಷದ ಹೈಕಮಾಂಡ್ ಜನಪರ ಸೇವೆ ಗುರುತಿಸಿ ಸಚಿವ ಸ್ಥಾನ ನೀಡುವ ಮೂಲಕ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

3 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

14 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

15 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

15 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

17 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

20 hours ago