ತಾಲೂಕಿನ ಹಾದ್ರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಚುಂಚೇಗೌಡನ ಹೊಸಹಳ್ಳಿ ಗ್ರಾಮದ ಕೆರೆಯಲ್ಲಿ ಕುರಿ ಮಂದೆಗೆ ನೀರು ಕುಡಿಸಲು ಹೋಗಿ ಕುರಿಗಾಹಿ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಶಿರಾ ಮೂಲದ ಚಂದ್ರು (22) ಸಾವನ್ನಪ್ಪಿದ ಕುರಿಗಾಹಿ.
ಎಸ್ ಎನ್ ಸಿ ಕಂಪನಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ಕೆರೆಯಲ್ಲಿ ಕುರಿಗಾಹಿ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಮಾಹಿತಿ ಹಕ್ಕು ವೇದಿಕೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಿದೆ.
ಈ ಹಿಂದೆ ಎಸ್ ಎನ್ ಸಿ ಕಂಪನಿ ವಿರುದ್ಧವಾಗಿ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು, ಈ ಸಂದರ್ಭದಲ್ಲಿ ಲೋಕಾಯುಕ್ತಕ್ಕೆ ಇಲ್ಲಿನ ಅಧಿಕಾರಿಗಳು ಸುಳ್ಳು ವರದಿ ನೀಡಿದ್ದು, ಅವರ ವಿರುದ್ಧ ಹಾಗೂ ಗಲಾಟೆ ಮಾಡಿದ್ದ ಗ್ರಾಮದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ ಅಧ್ಯಕ್ಷ ವಿ.ಹನುಮಂತರಾಯಪ್ಪ ಹಾಗೂ ಉಪಾಧ್ಯಕ್ಷ ತ್ಯಾಗರಾಜು ಒತ್ತಾಯಿಸಿದ್ದಾರೆ.
ಏನಿದು ಕೆರೆ ವಿವಾದ..?
ಚುಂಚೇಗೌಡನ ಹೊಸಹಳ್ಳಿ ಗ್ರಾಮದ ಕೆರೆಯಲ್ಲಿ ಎನ್ಎನ್ಸಿ ಸುಮಾರು 40 ಅಡಿ ಮಣ್ಣಿನ್ನು ತೆಗೆದು ಕೆರೆಯ ಮೂಲ ಸ್ವರೂಪವನ್ನೇ ಹಾಳು ಮಾಡಲಾಗಿದ್ದು, ಇದು ಕರ್ನಾಟಕ ಕೆರೆ ಸಂರಕ್ಷಣಾ ಹಾಗೂ ಕೆರೆ ಅಭಿವೃದ್ಧಿ ಪ್ರಾಧಿಕಾರ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಬಗ್ಗೆ ಅಂದಿನ ಡಿಸಿ ಕೆ.ಶ್ರೀನಿವಾಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ರೇಣುಕಾ ಸೇರಿದಂತೆ 11 ಮಂದಿ ಅದಿಕಾರಿಗಳಿಗೆ ದೂರು ನೀಡಲಾಗಿದ್ದು, ಆದರೆ, ಯಾವ ಅಧಿಕಾರಿಯೂ ಕ್ರಮ ಜರುಗಿಸಲಿಲ್ಲ. ಅಧಿಕಾರಿಗಳ ಬೇಜವಾಬ್ದಾರಿತನದಿಂದಲೇ ಕುರಿಗಾಹಿಯ ಸಾವು ಸಂಭವಿಸಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…