ತಾಲೂಕಿನ ಹಾದ್ರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಚುಂಚೇಗೌಡನ ಹೊಸಹಳ್ಳಿ ಗ್ರಾಮದ ಕೆರೆಯಲ್ಲಿ ಕುರಿ ಮಂದೆಗೆ ನೀರು ಕುಡಿಸಲು ಹೋಗಿ ಕುರಿಗಾಹಿ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಶಿರಾ ಮೂಲದ ಚಂದ್ರು (22) ಸಾವನ್ನಪ್ಪಿದ ಕುರಿಗಾಹಿ.
ಎಸ್ ಎನ್ ಸಿ ಕಂಪನಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ಕೆರೆಯಲ್ಲಿ ಕುರಿಗಾಹಿ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಮಾಹಿತಿ ಹಕ್ಕು ವೇದಿಕೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಿದೆ.
ಈ ಹಿಂದೆ ಎಸ್ ಎನ್ ಸಿ ಕಂಪನಿ ವಿರುದ್ಧವಾಗಿ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು, ಈ ಸಂದರ್ಭದಲ್ಲಿ ಲೋಕಾಯುಕ್ತಕ್ಕೆ ಇಲ್ಲಿನ ಅಧಿಕಾರಿಗಳು ಸುಳ್ಳು ವರದಿ ನೀಡಿದ್ದು, ಅವರ ವಿರುದ್ಧ ಹಾಗೂ ಗಲಾಟೆ ಮಾಡಿದ್ದ ಗ್ರಾಮದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ ಅಧ್ಯಕ್ಷ ವಿ.ಹನುಮಂತರಾಯಪ್ಪ ಹಾಗೂ ಉಪಾಧ್ಯಕ್ಷ ತ್ಯಾಗರಾಜು ಒತ್ತಾಯಿಸಿದ್ದಾರೆ.
ಏನಿದು ಕೆರೆ ವಿವಾದ..?
ಚುಂಚೇಗೌಡನ ಹೊಸಹಳ್ಳಿ ಗ್ರಾಮದ ಕೆರೆಯಲ್ಲಿ ಎನ್ಎನ್ಸಿ ಸುಮಾರು 40 ಅಡಿ ಮಣ್ಣಿನ್ನು ತೆಗೆದು ಕೆರೆಯ ಮೂಲ ಸ್ವರೂಪವನ್ನೇ ಹಾಳು ಮಾಡಲಾಗಿದ್ದು, ಇದು ಕರ್ನಾಟಕ ಕೆರೆ ಸಂರಕ್ಷಣಾ ಹಾಗೂ ಕೆರೆ ಅಭಿವೃದ್ಧಿ ಪ್ರಾಧಿಕಾರ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಬಗ್ಗೆ ಅಂದಿನ ಡಿಸಿ ಕೆ.ಶ್ರೀನಿವಾಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ರೇಣುಕಾ ಸೇರಿದಂತೆ 11 ಮಂದಿ ಅದಿಕಾರಿಗಳಿಗೆ ದೂರು ನೀಡಲಾಗಿದ್ದು, ಆದರೆ, ಯಾವ ಅಧಿಕಾರಿಯೂ ಕ್ರಮ ಜರುಗಿಸಲಿಲ್ಲ. ಅಧಿಕಾರಿಗಳ ಬೇಜವಾಬ್ದಾರಿತನದಿಂದಲೇ ಕುರಿಗಾಹಿಯ ಸಾವು ಸಂಭವಿಸಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…