ಹೊಸಕೋಟೆ : ಹೊಸಕೋಟೆ ಟೌನ್ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ನಾಮ ನಿರ್ದೇಶಕರನ್ನಾಗಿ ಹೊಸಕೋಟೆ ತಾಲ್ಲೂಕಿನ ಕೊಳತೂರು ಗ್ರಾಮದ ಕೆ. ಬಿ. ಜಯಪ್ರಕಾಶ್ ನಾರಾಯಣ್ (ರಾಜು) ಅವರನ್ನು ಆಯ್ಕೆ ಮಾಡಲಾಗಿದೆ.
ಈ ಹಿಂದೆ ಹೊಸಕೋಟೆ ನಗರದಲ್ಲಿ ನಡೆದ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ (ಎಸ್. ಎಫ್. ಸಿ. ಎಸ್) ಚುನಾವಣೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅಭೂತ ಪೂರ್ವ ಜಯಗಳಿಸಿದ ಹಿನ್ನಲೆ ಸಹಕಾರ ಸಂಘಕ್ಕೆ ಒಬ್ಬ ಸರಕಾರದ ನಾಮ ನಿರ್ದೇಶಕರನ್ನು ಆಯ್ಕೆ ಮಾಡುವ ಸಲುವಾಗಿ ಕೊಳತೂರು ಗ್ರಾಮದ ಮುಖಂಡರು ಹಾಗೂ ಹೆಚ್ಚಿನ ಸೇವೆ ಸಲ್ಲಿಸುತ್ತಾ ಬಂದಿರುವ ಕೆ. ಬಿ. ಜಯಪ್ರಕಾಶ್ ನಾರಾಯಣ್ (ರಾಜು) ಅವರನ್ನು ಎಲ್ಲಾ ಮುಖಂಡರು ಹಾಗೂ ನಿರ್ದೇಶಕರು ಒಮ್ಮತದಿಂದ ಬೆಂಬಲ ಸೂಚಿಸಿದ್ದಾರೆ.
ಹಿನ್ನಲೆ ಶಾಸಕ ಶರತ್ ಬಚ್ಚೇಗೌಡರ ನೇತೃತ್ವದಲ್ಲಿ ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಗಿದೆ.
ಇದೆ ಸಂದರ್ಭದಲ್ಲಿ ನೂತನ ನಿರ್ದೇಶಕರನ್ನು ಸನ್ಮಾನಿಸಿ ಅಭಿನಂದಿಸಿ ಮಾತನಾಡಿದ ಶಾಸಕ ಶರತ್ ಬಚ್ಚೇಗೌಡ ಅವರು, ಸಂಘದ ಅಭಿವೃದ್ಧಿಗೆ ತಮ್ಮ ಸೇವೆ ನಿರಂತರವಾಗಿರಬೇಕು. ಈ ನಿಟ್ಟಿನಲ್ಲಿ ಎಲ್ಲಾ ಸದಸ್ಯರುಗಳು ಹಾಗೂ ಆಡಳಿತ ಮಂಡಳಿ ಅವರೊಂದಿಗೆ ಒಮ್ಮತದಿಂದ ಸಂಘವನ್ನು ಲಾಭದತ್ತ ಮುನ್ನಡೆಸಬೇಕು. ಸಂಘ ಮತ್ತಷ್ಟು ಅಭಿವೃದ್ಧಿಗೆ ತಾವು ತಮ್ಮ ಶ್ರಮವಹಿಸಿ ಎಂದು ಶುಭ ಹಾರೈಸಿದರು.
ನೂತನ ನಾಮ ನಿರ್ದೇಶಕರಾಗಿ ಆಯ್ಕೆಯಾದ ಕೆ. ಬಿ. ಜಯಪ್ರಕಾಶ್ ನಾರಾಯಣ್ (ರಾಜು) ಮಾತನಾಡಿ, ನನ್ನ ಮೇಲೆ ನಂಬಿಕೆ ಇಟ್ಟು ನಾಮ ನಿರ್ದೇಶಕರನ್ನಾಗಿ ಆಯ್ಕೆ ಮಾಡಿದ್ದಾರೆ. ಈ ಜವಾಬ್ದಾರಿಯನ್ನು ನಾನು ಪ್ರಾಮಾಣಿಕವಾಗಿ ಮುನ್ನಡೆಸಿಕೊಂಡು ಹೋಗುತ್ತೇನೆ. ಸಹಕಾರ ಸಂಘದ ಹಾಗೂ ರೈತರ ಶ್ರೇಯಸ್ಸು ಅಭಿವೃದ್ಧಿಗೆ ನಾನು ಪ್ರಾಮಾಣಿಕವಾಗಿ ಶ್ರಮಿಸಲಿದ್ದು ಎಲ್ಲರ ಸಹಕಾರ ಮುಖ್ಯ ಎಂದು ತಿಳಿಸಿದ್ದಾರೆ.
ಇದೆ ಸಂದರ್ಭದಲ್ಲಿ ಮಾಜಿ ಸಂಸದರು ಹಾಗೂ ತಾಲ್ಲೂಕಿನಾ ಮುಖಂಡರು ಮತ್ತು ಕೊಳತುರು ಗ್ರಾಮಸ್ಥರು ಅಭಿನಂದನೆ ತಿಳಿಸಿದ್ದಾರೆ.
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…