ಹೊಸಕೋಟೆ : ಹೊಸಕೋಟೆ ಟೌನ್ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ನಾಮ ನಿರ್ದೇಶಕರನ್ನಾಗಿ ಹೊಸಕೋಟೆ ತಾಲ್ಲೂಕಿನ ಕೊಳತೂರು ಗ್ರಾಮದ ಕೆ. ಬಿ. ಜಯಪ್ರಕಾಶ್ ನಾರಾಯಣ್ (ರಾಜು) ಅವರನ್ನು ಆಯ್ಕೆ ಮಾಡಲಾಗಿದೆ.
ಈ ಹಿಂದೆ ಹೊಸಕೋಟೆ ನಗರದಲ್ಲಿ ನಡೆದ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ (ಎಸ್. ಎಫ್. ಸಿ. ಎಸ್) ಚುನಾವಣೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅಭೂತ ಪೂರ್ವ ಜಯಗಳಿಸಿದ ಹಿನ್ನಲೆ ಸಹಕಾರ ಸಂಘಕ್ಕೆ ಒಬ್ಬ ಸರಕಾರದ ನಾಮ ನಿರ್ದೇಶಕರನ್ನು ಆಯ್ಕೆ ಮಾಡುವ ಸಲುವಾಗಿ ಕೊಳತೂರು ಗ್ರಾಮದ ಮುಖಂಡರು ಹಾಗೂ ಹೆಚ್ಚಿನ ಸೇವೆ ಸಲ್ಲಿಸುತ್ತಾ ಬಂದಿರುವ ಕೆ. ಬಿ. ಜಯಪ್ರಕಾಶ್ ನಾರಾಯಣ್ (ರಾಜು) ಅವರನ್ನು ಎಲ್ಲಾ ಮುಖಂಡರು ಹಾಗೂ ನಿರ್ದೇಶಕರು ಒಮ್ಮತದಿಂದ ಬೆಂಬಲ ಸೂಚಿಸಿದ್ದಾರೆ.
ಹಿನ್ನಲೆ ಶಾಸಕ ಶರತ್ ಬಚ್ಚೇಗೌಡರ ನೇತೃತ್ವದಲ್ಲಿ ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಗಿದೆ.
ಇದೆ ಸಂದರ್ಭದಲ್ಲಿ ನೂತನ ನಿರ್ದೇಶಕರನ್ನು ಸನ್ಮಾನಿಸಿ ಅಭಿನಂದಿಸಿ ಮಾತನಾಡಿದ ಶಾಸಕ ಶರತ್ ಬಚ್ಚೇಗೌಡ ಅವರು, ಸಂಘದ ಅಭಿವೃದ್ಧಿಗೆ ತಮ್ಮ ಸೇವೆ ನಿರಂತರವಾಗಿರಬೇಕು. ಈ ನಿಟ್ಟಿನಲ್ಲಿ ಎಲ್ಲಾ ಸದಸ್ಯರುಗಳು ಹಾಗೂ ಆಡಳಿತ ಮಂಡಳಿ ಅವರೊಂದಿಗೆ ಒಮ್ಮತದಿಂದ ಸಂಘವನ್ನು ಲಾಭದತ್ತ ಮುನ್ನಡೆಸಬೇಕು. ಸಂಘ ಮತ್ತಷ್ಟು ಅಭಿವೃದ್ಧಿಗೆ ತಾವು ತಮ್ಮ ಶ್ರಮವಹಿಸಿ ಎಂದು ಶುಭ ಹಾರೈಸಿದರು.
ನೂತನ ನಾಮ ನಿರ್ದೇಶಕರಾಗಿ ಆಯ್ಕೆಯಾದ ಕೆ. ಬಿ. ಜಯಪ್ರಕಾಶ್ ನಾರಾಯಣ್ (ರಾಜು) ಮಾತನಾಡಿ, ನನ್ನ ಮೇಲೆ ನಂಬಿಕೆ ಇಟ್ಟು ನಾಮ ನಿರ್ದೇಶಕರನ್ನಾಗಿ ಆಯ್ಕೆ ಮಾಡಿದ್ದಾರೆ. ಈ ಜವಾಬ್ದಾರಿಯನ್ನು ನಾನು ಪ್ರಾಮಾಣಿಕವಾಗಿ ಮುನ್ನಡೆಸಿಕೊಂಡು ಹೋಗುತ್ತೇನೆ. ಸಹಕಾರ ಸಂಘದ ಹಾಗೂ ರೈತರ ಶ್ರೇಯಸ್ಸು ಅಭಿವೃದ್ಧಿಗೆ ನಾನು ಪ್ರಾಮಾಣಿಕವಾಗಿ ಶ್ರಮಿಸಲಿದ್ದು ಎಲ್ಲರ ಸಹಕಾರ ಮುಖ್ಯ ಎಂದು ತಿಳಿಸಿದ್ದಾರೆ.
ಇದೆ ಸಂದರ್ಭದಲ್ಲಿ ಮಾಜಿ ಸಂಸದರು ಹಾಗೂ ತಾಲ್ಲೂಕಿನಾ ಮುಖಂಡರು ಮತ್ತು ಕೊಳತುರು ಗ್ರಾಮಸ್ಥರು ಅಭಿನಂದನೆ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…