ಎಸ್. ಎಫ್. ಸಿ. ಎಸ್. ಬ್ಯಾಂಕಿಗೆ ನೂತನ ನಾಮನಿರ್ದೇಶನ ಸದಸ್ಯರ ಆಯ್ಕೆ

ಹೊಸಕೋಟೆ : ಹೊಸಕೋಟೆ ಟೌನ್ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ನಾಮ ನಿರ್ದೇಶಕರನ್ನಾಗಿ ಹೊಸಕೋಟೆ ತಾಲ್ಲೂಕಿನ ಕೊಳತೂರು ಗ್ರಾಮದ ಕೆ. ಬಿ. ಜಯಪ್ರಕಾಶ್ ನಾರಾಯಣ್ (ರಾಜು) ಅವರನ್ನು ಆಯ್ಕೆ ಮಾಡಲಾಗಿದೆ.

ಈ ಹಿಂದೆ ಹೊಸಕೋಟೆ ನಗರದಲ್ಲಿ ನಡೆದ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ (ಎಸ್. ಎಫ್. ಸಿ. ಎಸ್) ಚುನಾವಣೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅಭೂತ ಪೂರ್ವ ಜಯಗಳಿಸಿದ ಹಿನ್ನಲೆ ಸಹಕಾರ ಸಂಘಕ್ಕೆ ಒಬ್ಬ ಸರಕಾರದ ನಾಮ ನಿರ್ದೇಶಕರನ್ನು ಆಯ್ಕೆ ಮಾಡುವ ಸಲುವಾಗಿ ಕೊಳತೂರು ಗ್ರಾಮದ ಮುಖಂಡರು ಹಾಗೂ ಹೆಚ್ಚಿನ ಸೇವೆ ಸಲ್ಲಿಸುತ್ತಾ ಬಂದಿರುವ ಕೆ. ಬಿ. ಜಯಪ್ರಕಾಶ್ ನಾರಾಯಣ್ (ರಾಜು) ಅವರನ್ನು ಎಲ್ಲಾ ಮುಖಂಡರು ಹಾಗೂ ನಿರ್ದೇಶಕರು ಒಮ್ಮತದಿಂದ ಬೆಂಬಲ ಸೂಚಿಸಿದ್ದಾರೆ.

ಹಿನ್ನಲೆ ಶಾಸಕ ಶರತ್ ಬಚ್ಚೇಗೌಡರ ನೇತೃತ್ವದಲ್ಲಿ ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಗಿದೆ.

ಇದೆ ಸಂದರ್ಭದಲ್ಲಿ ನೂತನ ನಿರ್ದೇಶಕರನ್ನು ಸನ್ಮಾನಿಸಿ ಅಭಿನಂದಿಸಿ ಮಾತನಾಡಿದ ಶಾಸಕ ಶರತ್ ಬಚ್ಚೇಗೌಡ ಅವರು, ಸಂಘದ ಅಭಿವೃದ್ಧಿಗೆ ತಮ್ಮ ಸೇವೆ ನಿರಂತರವಾಗಿರಬೇಕು. ಈ ನಿಟ್ಟಿನಲ್ಲಿ ಎಲ್ಲಾ ಸದಸ್ಯರುಗಳು ಹಾಗೂ ಆಡಳಿತ ಮಂಡಳಿ ಅವರೊಂದಿಗೆ ಒಮ್ಮತದಿಂದ ಸಂಘವನ್ನು ಲಾಭದತ್ತ ಮುನ್ನಡೆಸಬೇಕು. ಸಂಘ ಮತ್ತಷ್ಟು ಅಭಿವೃದ್ಧಿಗೆ ತಾವು ತಮ್ಮ ಶ್ರಮವಹಿಸಿ ಎಂದು ಶುಭ ಹಾರೈಸಿದರು.

ನೂತನ ನಾಮ ನಿರ್ದೇಶಕರಾಗಿ ಆಯ್ಕೆಯಾದ ಕೆ. ಬಿ. ಜಯಪ್ರಕಾಶ್ ನಾರಾಯಣ್ (ರಾಜು) ಮಾತನಾಡಿ, ನನ್ನ ಮೇಲೆ ನಂಬಿಕೆ ಇಟ್ಟು ನಾಮ ನಿರ್ದೇಶಕರನ್ನಾಗಿ ಆಯ್ಕೆ ಮಾಡಿದ್ದಾರೆ. ಈ ಜವಾಬ್ದಾರಿಯನ್ನು ನಾನು ಪ್ರಾಮಾಣಿಕವಾಗಿ ಮುನ್ನಡೆಸಿಕೊಂಡು ಹೋಗುತ್ತೇನೆ. ಸಹಕಾರ ಸಂಘದ ಹಾಗೂ ರೈತರ ಶ್ರೇಯಸ್ಸು ಅಭಿವೃದ್ಧಿಗೆ ನಾನು ಪ್ರಾಮಾಣಿಕವಾಗಿ ಶ್ರಮಿಸಲಿದ್ದು ಎಲ್ಲರ ಸಹಕಾರ ಮುಖ್ಯ ಎಂದು ತಿಳಿಸಿದ್ದಾರೆ.

ಇದೆ ಸಂದರ್ಭದಲ್ಲಿ ಮಾಜಿ ಸಂಸದರು ಹಾಗೂ ತಾಲ್ಲೂಕಿನಾ ಮುಖಂಡರು ಮತ್ತು ಕೊಳತುರು ಗ್ರಾಮಸ್ಥರು ಅಭಿನಂದನೆ ತಿಳಿಸಿದ್ದಾರೆ.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

2 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

17 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago