ಹೊಸಕೋಟೆ : ಹೊಸಕೋಟೆ ಟೌನ್ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ನಾಮ ನಿರ್ದೇಶಕರನ್ನಾಗಿ ಹೊಸಕೋಟೆ ತಾಲ್ಲೂಕಿನ ಕೊಳತೂರು ಗ್ರಾಮದ ಕೆ. ಬಿ. ಜಯಪ್ರಕಾಶ್ ನಾರಾಯಣ್ (ರಾಜು) ಅವರನ್ನು ಆಯ್ಕೆ ಮಾಡಲಾಗಿದೆ.
ಈ ಹಿಂದೆ ಹೊಸಕೋಟೆ ನಗರದಲ್ಲಿ ನಡೆದ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ (ಎಸ್. ಎಫ್. ಸಿ. ಎಸ್) ಚುನಾವಣೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅಭೂತ ಪೂರ್ವ ಜಯಗಳಿಸಿದ ಹಿನ್ನಲೆ ಸಹಕಾರ ಸಂಘಕ್ಕೆ ಒಬ್ಬ ಸರಕಾರದ ನಾಮ ನಿರ್ದೇಶಕರನ್ನು ಆಯ್ಕೆ ಮಾಡುವ ಸಲುವಾಗಿ ಕೊಳತೂರು ಗ್ರಾಮದ ಮುಖಂಡರು ಹಾಗೂ ಹೆಚ್ಚಿನ ಸೇವೆ ಸಲ್ಲಿಸುತ್ತಾ ಬಂದಿರುವ ಕೆ. ಬಿ. ಜಯಪ್ರಕಾಶ್ ನಾರಾಯಣ್ (ರಾಜು) ಅವರನ್ನು ಎಲ್ಲಾ ಮುಖಂಡರು ಹಾಗೂ ನಿರ್ದೇಶಕರು ಒಮ್ಮತದಿಂದ ಬೆಂಬಲ ಸೂಚಿಸಿದ್ದಾರೆ.
ಹಿನ್ನಲೆ ಶಾಸಕ ಶರತ್ ಬಚ್ಚೇಗೌಡರ ನೇತೃತ್ವದಲ್ಲಿ ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಗಿದೆ.
ಇದೆ ಸಂದರ್ಭದಲ್ಲಿ ನೂತನ ನಿರ್ದೇಶಕರನ್ನು ಸನ್ಮಾನಿಸಿ ಅಭಿನಂದಿಸಿ ಮಾತನಾಡಿದ ಶಾಸಕ ಶರತ್ ಬಚ್ಚೇಗೌಡ ಅವರು, ಸಂಘದ ಅಭಿವೃದ್ಧಿಗೆ ತಮ್ಮ ಸೇವೆ ನಿರಂತರವಾಗಿರಬೇಕು. ಈ ನಿಟ್ಟಿನಲ್ಲಿ ಎಲ್ಲಾ ಸದಸ್ಯರುಗಳು ಹಾಗೂ ಆಡಳಿತ ಮಂಡಳಿ ಅವರೊಂದಿಗೆ ಒಮ್ಮತದಿಂದ ಸಂಘವನ್ನು ಲಾಭದತ್ತ ಮುನ್ನಡೆಸಬೇಕು. ಸಂಘ ಮತ್ತಷ್ಟು ಅಭಿವೃದ್ಧಿಗೆ ತಾವು ತಮ್ಮ ಶ್ರಮವಹಿಸಿ ಎಂದು ಶುಭ ಹಾರೈಸಿದರು.
ನೂತನ ನಾಮ ನಿರ್ದೇಶಕರಾಗಿ ಆಯ್ಕೆಯಾದ ಕೆ. ಬಿ. ಜಯಪ್ರಕಾಶ್ ನಾರಾಯಣ್ (ರಾಜು) ಮಾತನಾಡಿ, ನನ್ನ ಮೇಲೆ ನಂಬಿಕೆ ಇಟ್ಟು ನಾಮ ನಿರ್ದೇಶಕರನ್ನಾಗಿ ಆಯ್ಕೆ ಮಾಡಿದ್ದಾರೆ. ಈ ಜವಾಬ್ದಾರಿಯನ್ನು ನಾನು ಪ್ರಾಮಾಣಿಕವಾಗಿ ಮುನ್ನಡೆಸಿಕೊಂಡು ಹೋಗುತ್ತೇನೆ. ಸಹಕಾರ ಸಂಘದ ಹಾಗೂ ರೈತರ ಶ್ರೇಯಸ್ಸು ಅಭಿವೃದ್ಧಿಗೆ ನಾನು ಪ್ರಾಮಾಣಿಕವಾಗಿ ಶ್ರಮಿಸಲಿದ್ದು ಎಲ್ಲರ ಸಹಕಾರ ಮುಖ್ಯ ಎಂದು ತಿಳಿಸಿದ್ದಾರೆ.
ಇದೆ ಸಂದರ್ಭದಲ್ಲಿ ಮಾಜಿ ಸಂಸದರು ಹಾಗೂ ತಾಲ್ಲೂಕಿನಾ ಮುಖಂಡರು ಮತ್ತು ಕೊಳತುರು ಗ್ರಾಮಸ್ಥರು ಅಭಿನಂದನೆ ತಿಳಿಸಿದ್ದಾರೆ.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…