ಎಸ್. ಎಫ್. ಸಿ. ಎಸ್. ಬ್ಯಾಂಕಿಗೆ ನೂತನ ನಾಮನಿರ್ದೇಶನ ಸದಸ್ಯರ ಆಯ್ಕೆ

ಹೊಸಕೋಟೆ : ಹೊಸಕೋಟೆ ಟೌನ್ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ನಾಮ ನಿರ್ದೇಶಕರನ್ನಾಗಿ ಹೊಸಕೋಟೆ ತಾಲ್ಲೂಕಿನ ಕೊಳತೂರು ಗ್ರಾಮದ ಕೆ. ಬಿ. ಜಯಪ್ರಕಾಶ್ ನಾರಾಯಣ್ (ರಾಜು) ಅವರನ್ನು ಆಯ್ಕೆ ಮಾಡಲಾಗಿದೆ.

ಈ ಹಿಂದೆ ಹೊಸಕೋಟೆ ನಗರದಲ್ಲಿ ನಡೆದ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ (ಎಸ್. ಎಫ್. ಸಿ. ಎಸ್) ಚುನಾವಣೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅಭೂತ ಪೂರ್ವ ಜಯಗಳಿಸಿದ ಹಿನ್ನಲೆ ಸಹಕಾರ ಸಂಘಕ್ಕೆ ಒಬ್ಬ ಸರಕಾರದ ನಾಮ ನಿರ್ದೇಶಕರನ್ನು ಆಯ್ಕೆ ಮಾಡುವ ಸಲುವಾಗಿ ಕೊಳತೂರು ಗ್ರಾಮದ ಮುಖಂಡರು ಹಾಗೂ ಹೆಚ್ಚಿನ ಸೇವೆ ಸಲ್ಲಿಸುತ್ತಾ ಬಂದಿರುವ ಕೆ. ಬಿ. ಜಯಪ್ರಕಾಶ್ ನಾರಾಯಣ್ (ರಾಜು) ಅವರನ್ನು ಎಲ್ಲಾ ಮುಖಂಡರು ಹಾಗೂ ನಿರ್ದೇಶಕರು ಒಮ್ಮತದಿಂದ ಬೆಂಬಲ ಸೂಚಿಸಿದ್ದಾರೆ.

ಹಿನ್ನಲೆ ಶಾಸಕ ಶರತ್ ಬಚ್ಚೇಗೌಡರ ನೇತೃತ್ವದಲ್ಲಿ ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಗಿದೆ.

ಇದೆ ಸಂದರ್ಭದಲ್ಲಿ ನೂತನ ನಿರ್ದೇಶಕರನ್ನು ಸನ್ಮಾನಿಸಿ ಅಭಿನಂದಿಸಿ ಮಾತನಾಡಿದ ಶಾಸಕ ಶರತ್ ಬಚ್ಚೇಗೌಡ ಅವರು, ಸಂಘದ ಅಭಿವೃದ್ಧಿಗೆ ತಮ್ಮ ಸೇವೆ ನಿರಂತರವಾಗಿರಬೇಕು. ಈ ನಿಟ್ಟಿನಲ್ಲಿ ಎಲ್ಲಾ ಸದಸ್ಯರುಗಳು ಹಾಗೂ ಆಡಳಿತ ಮಂಡಳಿ ಅವರೊಂದಿಗೆ ಒಮ್ಮತದಿಂದ ಸಂಘವನ್ನು ಲಾಭದತ್ತ ಮುನ್ನಡೆಸಬೇಕು. ಸಂಘ ಮತ್ತಷ್ಟು ಅಭಿವೃದ್ಧಿಗೆ ತಾವು ತಮ್ಮ ಶ್ರಮವಹಿಸಿ ಎಂದು ಶುಭ ಹಾರೈಸಿದರು.

ನೂತನ ನಾಮ ನಿರ್ದೇಶಕರಾಗಿ ಆಯ್ಕೆಯಾದ ಕೆ. ಬಿ. ಜಯಪ್ರಕಾಶ್ ನಾರಾಯಣ್ (ರಾಜು) ಮಾತನಾಡಿ, ನನ್ನ ಮೇಲೆ ನಂಬಿಕೆ ಇಟ್ಟು ನಾಮ ನಿರ್ದೇಶಕರನ್ನಾಗಿ ಆಯ್ಕೆ ಮಾಡಿದ್ದಾರೆ. ಈ ಜವಾಬ್ದಾರಿಯನ್ನು ನಾನು ಪ್ರಾಮಾಣಿಕವಾಗಿ ಮುನ್ನಡೆಸಿಕೊಂಡು ಹೋಗುತ್ತೇನೆ. ಸಹಕಾರ ಸಂಘದ ಹಾಗೂ ರೈತರ ಶ್ರೇಯಸ್ಸು ಅಭಿವೃದ್ಧಿಗೆ ನಾನು ಪ್ರಾಮಾಣಿಕವಾಗಿ ಶ್ರಮಿಸಲಿದ್ದು ಎಲ್ಲರ ಸಹಕಾರ ಮುಖ್ಯ ಎಂದು ತಿಳಿಸಿದ್ದಾರೆ.

ಇದೆ ಸಂದರ್ಭದಲ್ಲಿ ಮಾಜಿ ಸಂಸದರು ಹಾಗೂ ತಾಲ್ಲೂಕಿನಾ ಮುಖಂಡರು ಮತ್ತು ಕೊಳತುರು ಗ್ರಾಮಸ್ಥರು ಅಭಿನಂದನೆ ತಿಳಿಸಿದ್ದಾರೆ.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

5 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

8 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

10 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

10 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

21 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

22 hours ago