ಹೊಸಕೋಟೆ : ಹೊಸಕೋಟೆ ಟೌನ್ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ನಾಮ ನಿರ್ದೇಶಕರನ್ನಾಗಿ ಹೊಸಕೋಟೆ ತಾಲ್ಲೂಕಿನ ಕೊಳತೂರು ಗ್ರಾಮದ ಕೆ. ಬಿ. ಜಯಪ್ರಕಾಶ್ ನಾರಾಯಣ್ (ರಾಜು) ಅವರನ್ನು ಆಯ್ಕೆ ಮಾಡಲಾಗಿದೆ.
ಈ ಹಿಂದೆ ಹೊಸಕೋಟೆ ನಗರದಲ್ಲಿ ನಡೆದ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ (ಎಸ್. ಎಫ್. ಸಿ. ಎಸ್) ಚುನಾವಣೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅಭೂತ ಪೂರ್ವ ಜಯಗಳಿಸಿದ ಹಿನ್ನಲೆ ಸಹಕಾರ ಸಂಘಕ್ಕೆ ಒಬ್ಬ ಸರಕಾರದ ನಾಮ ನಿರ್ದೇಶಕರನ್ನು ಆಯ್ಕೆ ಮಾಡುವ ಸಲುವಾಗಿ ಕೊಳತೂರು ಗ್ರಾಮದ ಮುಖಂಡರು ಹಾಗೂ ಹೆಚ್ಚಿನ ಸೇವೆ ಸಲ್ಲಿಸುತ್ತಾ ಬಂದಿರುವ ಕೆ. ಬಿ. ಜಯಪ್ರಕಾಶ್ ನಾರಾಯಣ್ (ರಾಜು) ಅವರನ್ನು ಎಲ್ಲಾ ಮುಖಂಡರು ಹಾಗೂ ನಿರ್ದೇಶಕರು ಒಮ್ಮತದಿಂದ ಬೆಂಬಲ ಸೂಚಿಸಿದ್ದಾರೆ.
ಹಿನ್ನಲೆ ಶಾಸಕ ಶರತ್ ಬಚ್ಚೇಗೌಡರ ನೇತೃತ್ವದಲ್ಲಿ ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಗಿದೆ.
ಇದೆ ಸಂದರ್ಭದಲ್ಲಿ ನೂತನ ನಿರ್ದೇಶಕರನ್ನು ಸನ್ಮಾನಿಸಿ ಅಭಿನಂದಿಸಿ ಮಾತನಾಡಿದ ಶಾಸಕ ಶರತ್ ಬಚ್ಚೇಗೌಡ ಅವರು, ಸಂಘದ ಅಭಿವೃದ್ಧಿಗೆ ತಮ್ಮ ಸೇವೆ ನಿರಂತರವಾಗಿರಬೇಕು. ಈ ನಿಟ್ಟಿನಲ್ಲಿ ಎಲ್ಲಾ ಸದಸ್ಯರುಗಳು ಹಾಗೂ ಆಡಳಿತ ಮಂಡಳಿ ಅವರೊಂದಿಗೆ ಒಮ್ಮತದಿಂದ ಸಂಘವನ್ನು ಲಾಭದತ್ತ ಮುನ್ನಡೆಸಬೇಕು. ಸಂಘ ಮತ್ತಷ್ಟು ಅಭಿವೃದ್ಧಿಗೆ ತಾವು ತಮ್ಮ ಶ್ರಮವಹಿಸಿ ಎಂದು ಶುಭ ಹಾರೈಸಿದರು.
ನೂತನ ನಾಮ ನಿರ್ದೇಶಕರಾಗಿ ಆಯ್ಕೆಯಾದ ಕೆ. ಬಿ. ಜಯಪ್ರಕಾಶ್ ನಾರಾಯಣ್ (ರಾಜು) ಮಾತನಾಡಿ, ನನ್ನ ಮೇಲೆ ನಂಬಿಕೆ ಇಟ್ಟು ನಾಮ ನಿರ್ದೇಶಕರನ್ನಾಗಿ ಆಯ್ಕೆ ಮಾಡಿದ್ದಾರೆ. ಈ ಜವಾಬ್ದಾರಿಯನ್ನು ನಾನು ಪ್ರಾಮಾಣಿಕವಾಗಿ ಮುನ್ನಡೆಸಿಕೊಂಡು ಹೋಗುತ್ತೇನೆ. ಸಹಕಾರ ಸಂಘದ ಹಾಗೂ ರೈತರ ಶ್ರೇಯಸ್ಸು ಅಭಿವೃದ್ಧಿಗೆ ನಾನು ಪ್ರಾಮಾಣಿಕವಾಗಿ ಶ್ರಮಿಸಲಿದ್ದು ಎಲ್ಲರ ಸಹಕಾರ ಮುಖ್ಯ ಎಂದು ತಿಳಿಸಿದ್ದಾರೆ.
ಇದೆ ಸಂದರ್ಭದಲ್ಲಿ ಮಾಜಿ ಸಂಸದರು ಹಾಗೂ ತಾಲ್ಲೂಕಿನಾ ಮುಖಂಡರು ಮತ್ತು ಕೊಳತುರು ಗ್ರಾಮಸ್ಥರು ಅಭಿನಂದನೆ ತಿಳಿಸಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…