ದೊಡ್ಡಬಳ್ಳಾಪುರ: ಶಾಲೆ ಎಂದರೆ ಒಂದು ದೇವರ ಮನೆ ಇದ್ದ ಹಾಗೆ, ಅದೇ ರೀತಿಯಾಗಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಇದು ನಮ್ಮ ಶಾಲೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ ಎಂದು ಎಸ್. ಎಲ್. ಆರ್. ಎಸ್. ಶಾಲೆಯ ಕಾರ್ಯದರ್ಶಿ ರಮೇಶ್ ಹೇಳಿದರು.
ತೂಬಗೆರೆ ಎಸ್.ಎಲ್.ಆರ್.ಎಸ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್ಗಳನ್ನು ಮಾಡುತ್ತಿರುವ ಎಸ್ .ಎಲ್.ಆರ್.ಎಸ್ ಹಳೆಯ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಮಾತನಾಡಿದ ಅವರು, ನಮ್ಮ ಶಾಲೆಯಲ್ಲಿ ಓದಿದ ಹಳೆಯ ವಿದ್ಯಾರ್ಥಿಗಳು ಇಂದು ವಿವಿಧ ಕೋರ್ಸ್ಗಳನ್ನು ಮಾಡುತ್ತಿದ್ದು, ನಮ್ಮ ಶಾಲೆಗೆ ಕೀರ್ತಿ ತಂದಿದ್ದಾರೆ. ಇಂತಹ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಪ್ರೋತ್ಸಾಹ ನೀಡುವುರಿಂದ ಇನ್ನಷ್ಟು ಸಾಧನೆ ಮಾಡಲು ಸಹಕಾರಿಯಾಗುತ್ತದೆ. ಜೊತೆಗೆ ಇಂತಹ ಕಾರ್ಯಕ್ರಮಗಳಿಂದ ನಮ್ಮ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೂ ಪ್ರೇರೇಪಣೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಪಶುವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ಹಳೆಯ ವಿದ್ಯಾರ್ಥಿ ಸ್ವರೂಪ್ ಮಾತನಾಡಿ, ಈಗಿನ ಮಕ್ಕಳು ಮೊಬೈಲ್ ಗೀಳಿಗೆ ಒಳಗಾಗಿದ್ದಾರೆ. ಪೋಷಕರು ಮಕ್ಕಳಿಗೆ ಮೊಬೈಲ್ ಕೊಡುವದನ್ನು ನಿಲ್ಲಿಸಬೇಕು. ಮೊಬೈಲ್ ಕೊಡುವುದರ ಬದಲು ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಬೇಕು. ಆದಷ್ಟು ಸಾಮಾಜಿಕ ಮಾಧ್ಯಮಗಳಿಂದ ದೂರವಿರಬೇಕು ಎಂದು ಮಕ್ಕಳಿಗೆ ಮತ್ತು ಪೋಷಕರಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಯೀದಾ ಅನೀಸ್, ಶಾಲೆಯ ಕಾರ್ಯದರ್ಶಿ ರಮೇಶ್, ಗ್ರಾಮದ ಹಿರಿಯ ಮುಖಂಡ ಮುನಿರಾಜು, ಶಾಲೆಯ ಮುಖ್ಯೋಪಾಧ್ಯಾಯ ಮತ್ತು ಶಿಕ್ಷಕರು, ಹಳೆಯ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತಿ ಇದ್ದರು.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…