ಎಸ್ ಎಸ್ ಎಲ್‌ಸಿ ಫಲಿತಾಂಶ: ಬೆ. ಗ್ರಾ. ಜಿಲ್ಲೆಯು ಶೇ.96.48ರಷ್ಟು ಫಲಿತಾಂಶ ಪಡೆದು ರಾಜ್ಯದಲ್ಲಿ 4ನೇ ಸ್ಥಾನ ಗಳಿಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 96.48 ರಷ್ಟು ಫಲಿತಾಂಶ ಪಡೆದು ರಾಜ್ಯದಲ್ಲಿ 4 ನೇ ಸ್ಥಾನ ಗಳಿಸಿದೆ. ಜಿಲ್ಲೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪರೀಕ್ಷೆ ಬರೆದ 13430 ವಿದ್ಯಾರ್ಥಿಗಳಲ್ಲಿ 12988 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

6632 ಕ್ಕೆ 6499 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 98.03 ರಷ್ಟು ಫಲಿತಾಂಶದೊಂದಿಗೆ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.

ಬಾಲಕರು 6798 ಕ್ಕೆ 6489 ಉತ್ತೀರ್ಣತೆ ಪಡೆದು ಶೇ.95.45 ರಷ್ಟು ಫಲಿತಾಂಶ ಪಡೆದಿದ್ದಾರೆ.

ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಶಿವಾನಿ.ಹೆಚ್.ವಿ ಅವರು 625ಕ್ಕೆ 617 ಅಂಕ ಗಳಿಸಿ ಸರ್ಕಾರಿ ಶಾಲೆಗಳಲ್ಲಿ ಜಿಲ್ಲೆಗೆ ಮೊದಲಿಗರೆನಿಸಿದ್ದಾರೆ.

ಮ್ಯಾನೇಜ್‌ಮೆಂಟ್‌ವಾರು ಫಲಿತಾಂಶದಲ್ಲಿ ಸರ್ಕಾರಿ ಶಾಲೆಗಳು ಶೇ. 95.05 ರಷ್ಟು, ಅನುದಾನಿತ ಶಾಲೆಗಳು ಶೇ. 93.53 ರಷ್ಟು ಮತ್ತು ಅನುದಾನರಹಿತ ಪ್ರೌಢಶಾಲೆಗಳು ಶೇ. 98.75 ರಷ್ಟು ಫಲಿತಾಂಶ ಗಳಿಸಿವೆ.

ಇದೇ ಮೊದಲ ಬಾರಿಗೆ ಹೊಸಕೋಟೆ ತಾಲ್ಲೂಕು ಶೇ. 98.75 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಪ್ರಥಮ ಎನಿಸಿದೆ. ನಂತರ ದೇವನಹಳ್ಳಿ ಶೇ. 97.79 ರಷ್ಟು, ದೊಡ್ಡಬಳ್ಳಾಪುರ ಶೇ. 95.19 ರಷ್ಟು ಹಾಗೂ ನೆಲಮಂಗಲ ತಾಲ್ಲೂಕು ಶೇ. 94.17 ರಷ್ಟು ಫಲಿತಾಂಶ ಪಡೆದಿವೆ.

Ramesh Babu

Journalist

Recent Posts

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

15 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

16 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

21 hours ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

22 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

1 day ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

2 days ago