ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 96.48 ರಷ್ಟು ಫಲಿತಾಂಶ ಪಡೆದು ರಾಜ್ಯದಲ್ಲಿ 4 ನೇ ಸ್ಥಾನ ಗಳಿಸಿದೆ. ಜಿಲ್ಲೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪರೀಕ್ಷೆ ಬರೆದ 13430 ವಿದ್ಯಾರ್ಥಿಗಳಲ್ಲಿ 12988 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
6632 ಕ್ಕೆ 6499 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 98.03 ರಷ್ಟು ಫಲಿತಾಂಶದೊಂದಿಗೆ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.
ಬಾಲಕರು 6798 ಕ್ಕೆ 6489 ಉತ್ತೀರ್ಣತೆ ಪಡೆದು ಶೇ.95.45 ರಷ್ಟು ಫಲಿತಾಂಶ ಪಡೆದಿದ್ದಾರೆ.
ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಶಿವಾನಿ.ಹೆಚ್.ವಿ ಅವರು 625ಕ್ಕೆ 617 ಅಂಕ ಗಳಿಸಿ ಸರ್ಕಾರಿ ಶಾಲೆಗಳಲ್ಲಿ ಜಿಲ್ಲೆಗೆ ಮೊದಲಿಗರೆನಿಸಿದ್ದಾರೆ.
ಮ್ಯಾನೇಜ್ಮೆಂಟ್ವಾರು ಫಲಿತಾಂಶದಲ್ಲಿ ಸರ್ಕಾರಿ ಶಾಲೆಗಳು ಶೇ. 95.05 ರಷ್ಟು, ಅನುದಾನಿತ ಶಾಲೆಗಳು ಶೇ. 93.53 ರಷ್ಟು ಮತ್ತು ಅನುದಾನರಹಿತ ಪ್ರೌಢಶಾಲೆಗಳು ಶೇ. 98.75 ರಷ್ಟು ಫಲಿತಾಂಶ ಗಳಿಸಿವೆ.
ಇದೇ ಮೊದಲ ಬಾರಿಗೆ ಹೊಸಕೋಟೆ ತಾಲ್ಲೂಕು ಶೇ. 98.75 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಪ್ರಥಮ ಎನಿಸಿದೆ. ನಂತರ ದೇವನಹಳ್ಳಿ ಶೇ. 97.79 ರಷ್ಟು, ದೊಡ್ಡಬಳ್ಳಾಪುರ ಶೇ. 95.19 ರಷ್ಟು ಹಾಗೂ ನೆಲಮಂಗಲ ತಾಲ್ಲೂಕು ಶೇ. 94.17 ರಷ್ಟು ಫಲಿತಾಂಶ ಪಡೆದಿವೆ.
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…