ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 96.48 ರಷ್ಟು ಫಲಿತಾಂಶ ಪಡೆದು ರಾಜ್ಯದಲ್ಲಿ 4 ನೇ ಸ್ಥಾನ ಗಳಿಸಿದೆ. ಜಿಲ್ಲೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪರೀಕ್ಷೆ ಬರೆದ 13430 ವಿದ್ಯಾರ್ಥಿಗಳಲ್ಲಿ 12988 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
6632 ಕ್ಕೆ 6499 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 98.03 ರಷ್ಟು ಫಲಿತಾಂಶದೊಂದಿಗೆ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.
ಬಾಲಕರು 6798 ಕ್ಕೆ 6489 ಉತ್ತೀರ್ಣತೆ ಪಡೆದು ಶೇ.95.45 ರಷ್ಟು ಫಲಿತಾಂಶ ಪಡೆದಿದ್ದಾರೆ.
ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಶಿವಾನಿ.ಹೆಚ್.ವಿ ಅವರು 625ಕ್ಕೆ 617 ಅಂಕ ಗಳಿಸಿ ಸರ್ಕಾರಿ ಶಾಲೆಗಳಲ್ಲಿ ಜಿಲ್ಲೆಗೆ ಮೊದಲಿಗರೆನಿಸಿದ್ದಾರೆ.
ಮ್ಯಾನೇಜ್ಮೆಂಟ್ವಾರು ಫಲಿತಾಂಶದಲ್ಲಿ ಸರ್ಕಾರಿ ಶಾಲೆಗಳು ಶೇ. 95.05 ರಷ್ಟು, ಅನುದಾನಿತ ಶಾಲೆಗಳು ಶೇ. 93.53 ರಷ್ಟು ಮತ್ತು ಅನುದಾನರಹಿತ ಪ್ರೌಢಶಾಲೆಗಳು ಶೇ. 98.75 ರಷ್ಟು ಫಲಿತಾಂಶ ಗಳಿಸಿವೆ.
ಇದೇ ಮೊದಲ ಬಾರಿಗೆ ಹೊಸಕೋಟೆ ತಾಲ್ಲೂಕು ಶೇ. 98.75 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಪ್ರಥಮ ಎನಿಸಿದೆ. ನಂತರ ದೇವನಹಳ್ಳಿ ಶೇ. 97.79 ರಷ್ಟು, ದೊಡ್ಡಬಳ್ಳಾಪುರ ಶೇ. 95.19 ರಷ್ಟು ಹಾಗೂ ನೆಲಮಂಗಲ ತಾಲ್ಲೂಕು ಶೇ. 94.17 ರಷ್ಟು ಫಲಿತಾಂಶ ಪಡೆದಿವೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…