ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 96.48 ರಷ್ಟು ಫಲಿತಾಂಶ ಪಡೆದು ರಾಜ್ಯದಲ್ಲಿ 4 ನೇ ಸ್ಥಾನ ಗಳಿಸಿದೆ. ಜಿಲ್ಲೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪರೀಕ್ಷೆ ಬರೆದ 13430 ವಿದ್ಯಾರ್ಥಿಗಳಲ್ಲಿ 12988 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
6632 ಕ್ಕೆ 6499 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 98.03 ರಷ್ಟು ಫಲಿತಾಂಶದೊಂದಿಗೆ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.
ಬಾಲಕರು 6798 ಕ್ಕೆ 6489 ಉತ್ತೀರ್ಣತೆ ಪಡೆದು ಶೇ.95.45 ರಷ್ಟು ಫಲಿತಾಂಶ ಪಡೆದಿದ್ದಾರೆ.
ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಶಿವಾನಿ.ಹೆಚ್.ವಿ ಅವರು 625ಕ್ಕೆ 617 ಅಂಕ ಗಳಿಸಿ ಸರ್ಕಾರಿ ಶಾಲೆಗಳಲ್ಲಿ ಜಿಲ್ಲೆಗೆ ಮೊದಲಿಗರೆನಿಸಿದ್ದಾರೆ.
ಮ್ಯಾನೇಜ್ಮೆಂಟ್ವಾರು ಫಲಿತಾಂಶದಲ್ಲಿ ಸರ್ಕಾರಿ ಶಾಲೆಗಳು ಶೇ. 95.05 ರಷ್ಟು, ಅನುದಾನಿತ ಶಾಲೆಗಳು ಶೇ. 93.53 ರಷ್ಟು ಮತ್ತು ಅನುದಾನರಹಿತ ಪ್ರೌಢಶಾಲೆಗಳು ಶೇ. 98.75 ರಷ್ಟು ಫಲಿತಾಂಶ ಗಳಿಸಿವೆ.
ಇದೇ ಮೊದಲ ಬಾರಿಗೆ ಹೊಸಕೋಟೆ ತಾಲ್ಲೂಕು ಶೇ. 98.75 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಪ್ರಥಮ ಎನಿಸಿದೆ. ನಂತರ ದೇವನಹಳ್ಳಿ ಶೇ. 97.79 ರಷ್ಟು, ದೊಡ್ಡಬಳ್ಳಾಪುರ ಶೇ. 95.19 ರಷ್ಟು ಹಾಗೂ ನೆಲಮಂಗಲ ತಾಲ್ಲೂಕು ಶೇ. 94.17 ರಷ್ಟು ಫಲಿತಾಂಶ ಪಡೆದಿವೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…