Categories: ಕೋಲಾರ

ಎಸ್.ಎಸ್.ಎಲ್.ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ಸದುಪಯೋಗ ಪಡಿಸಿಕೊಳ್ಳಿ-‌ ಡಿಡಿಪಿಐ ಕೃಷ್ಣಮೂರ್ತಿ

ಕೋಲಾರ: ಎಸ್.ಎಸ್.ಎಲ್.ಸಿ ಅನುತ್ತೀರ್ಣ ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಎದುರಿಸಲು ಸಿದ್ಧರಾಗಿ ಶ್ರದ್ಧೆಯಿಂದ ಉಳಿದ ಸಮಯವನ್ನು ಓದಿನ ಕಡೆಗೆ ಗಮನ ಕೊಟ್ಟಾಗ ಮಾತ್ರವೇ ಗುರಿ ಸಾಧಿಸಲು ಸಾಧ್ಯವಾಗುತ್ತದೆ ತಾವುಗಳು ಅನುತ್ತೀರ್ಣ ವಿದ್ಯಾರ್ಥಿಗಳೆಂಬ ಕೀಳರಿಮೆಯನ್ನು ಮನಸ್ಸಿಯಿಂದ ದೂರ ಮಾಡಿಕೊಳ್ಳಿ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದರು.

ನಗರದಲ್ಲಿ ಗುರುವಾರ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಹಾಗೂ ಕೌಶಲ್ಯ ತರಬೇತಿ ಸಂಸ್ಥೆ ವತಿಯಿಂದ ಎಸ್.ಎಸ್ ಎಲ್ ಸಿ ಅನುತ್ತೀರ್ಣ ವಿಧ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ಅನುತ್ತೀರ್ಣ ವಿದ್ಯಾರ್ಥಿಗಳಿಗೂ ಬದುಕು ರೂಪಿಸಬೇಕು ಎಂಬ ಹಿನ್ನೆಲೆಯಲ್ಲಿ ಇನ್ನೂ ಉಳಿದ ಸಮಯದಲ್ಲಿ ಉಚಿತ ತರಗತಿ ನಡೆಸಿ ವಿದ್ಯಾರ್ಥಿಗಳಿಗೆ ಬದುಕು ರೂಪಿಸಲು ಹೊರಟಿದ್ದಾರೆ ವಿದ್ಯಾರ್ಥಿಗಳು ಸಹ ಉತ್ತೀರ್ಣರಾಗುವ ಮೂಲಕ ಈ ಸಂಸ್ಥೆಗೆ ಹಾಗೂ ತಮ್ಮ ಭವಿಷ್ಯಕ್ಕೆ ಕೊಡುಗೆ ನೀಡಬೇಕು ಎಂದರು.

ಕೋಲಾರ ಜಿಲ್ಲೆಯು ಫಲಿತಾಂಶದಲ್ಲಿ ರಾಜ್ಯಕ್ಕೆ 14ನೇ ಸ್ಥಾನವನ್ನು ಪಡೆಯಲಾಗಿದೆ 68% ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಉಳಿದ 32 % ಅನುತ್ತೀರ್ಣರಾದ ವಿಧ್ಯಾರ್ಥಿಗಳ ಭವಿಷ್ಯವನ್ನು ಕಾಣಬೇಕಾಗಿದೆ ಆಸಕ್ತಿಯಿಂದ ಕಲಿತಾಗ ಗುರಿ ಸಾಧಿಸಲು ಸಾಧ್ಯವಾಗುತ್ತದೆ ಅನುತ್ತೀರ್ಣ ವಿದ್ಯಾರ್ಥಿಗಳು ಸಹ ವಿದ್ಯಾಭ್ಯಾಸ ಪಡೆಯಲೇಬೇಕು ಎನ್ನುವ ಮನಸ್ಥಿತಿ ಬರಬೇಕು ಸಮಾಜದಲ್ಲಿ ಶಿಕ್ಷಣದಲ್ಲಿ ಎಡವಿದ ಸಾವಿರಾರು ವಿಧ್ಯಾರ್ಥಿಗಳು ಸಾಧಕರಾಗಿ ಹೊರ ಹೊಮ್ಮಿದ್ದಾರೆ ಅವರ ಜೀವನ ನಮಗೆ ಮಾದರಿಯಾಗಬೇಕು ಎಂದರು.

ಈ ಸಂದರ್ಭದಲ್ಲಿ ಸರ್ಕಾರಿ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಸಂಘದ ಜಿಲ್ಲಾ ಅಧ್ಯಕ್ಷ ಬಿ.ಎಂ ಚಂದ್ರಪ್ಪ ಮಾತನಾಡಿ ವಿಧ್ಯಾರ್ಥಿಗಳು ಶಿಕ್ಷಣ ಪಡೆಯುವ ಹಂತದಲ್ಲಿ ಸಣ್ಣ ಅಡೆತಡೆಯು ಬದುಕಿನ ದಿಕ್ಕನ್ನೇ ಬದಲಿಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಜ್ಞಾನರ್ಜನೆಯತ್ತ ಒತ್ತು ನೀಡಿ ಶಿಕ್ಷಣದಲ್ಲಿ ಎಡವದೇ ಮುಂದೆ ಸಾಗಬೇಕು. ಅನುತ್ತೀರ್ಣತೆ ಬದುಕಿನ ಅಂತ್ಯವಲ್ಲ. ಎಷ್ಟೇ ಬಾರಿ ಶಿಕ್ಷಣದಲ್ಲಿ ಎಡವಿದರೂ ಮುಂದೊಂದು ದಿನ ಯಶಸ್ವಿ ಯಾಗಬಹುದು ಎಂಬ ಛಲ ನಿಮ್ಮಲ್ಲಿರಲಿ, ಓದುವ ಹವ್ಯಾಸ ನಿರಂತರವಾಗಿರಲಿ ಗುರಿಯೇ ನಮ್ಮಗೆಲ್ಲ ಮುಖ್ಯವಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೆಚ್.ಆರ್.ಡಿ.ಸಿ ಕೌಶಲ್ಯ ಸಂಸ್ಥೆಯ ನಿರ್ದೇಶಕ ಎಂ.ವಿ ನಾರಾಯಣಸ್ವಾಮಿ ಮಾತನಾಡಿ, ಸುಮಾರುವ 16 ವರ್ಷಗಳಿಂದ ನಮ್ಮ ಸಂಸ್ಥೆಯು ವಿವಿಧ ಕೋರ್ಸ್ ಗಳಲ್ಲಿ ಕೌಶಲ್ಯ ತರಬೇತಿ ನೀಡುವ ಮೂಲಕ ಉದ್ಯೋಗ ಅವಕಾಶಗಳನ್ನು ಸಂಸ್ಥೆ ಮಾಡಿಕೊಂಡು ಬಂದಿದೆ ಶಿಕ್ಷಣವೇ ಅಭಿವೃದ್ಧಿಯ ಉದ್ದೇಶದಿಂದ ಉಚಿತವಾಗಿ ಅನುತ್ತೀರ್ಣ ವಿಧ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ ಕಡ್ಡಾಯವಾಗಿ ತರಬೇತಿಯಲ್ಲಿ ಭಾಗವಹಿಸಿ ಎಲ್ಲರೂ ಪಾಸ್ ಆಗಿ ಮುಂದಿನ ಭವಿಷ್ಯಕ್ಕೆ ದಾರಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು

ಈ ಸಂದರ್ಭದಲ್ಲಿ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಸಂಘದ ತಾಲೂಕು ಅಧ್ಯಕ್ಷ ರಮೇಶ್ ಗೌಡ, ಸಹ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಹೆಚ್ ಶಿವಕುಮಾರ್, ತಾಲೂಕು ಅಧ್ಯಕ್ಷ ಕೆ.ನಾರಾಯಣರೆಡ್ಡಿ, ಸಂಸ್ಥೆಯ ಚೌಡಪ್ಪ, ಎಂ.ಶಂಕರಪ್ಪ ಮುಂತಾದವರು ಇದ್ದರು.

Ramesh Babu

Journalist

Recent Posts

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ- ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…

7 hours ago

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

10 hours ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

20 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

1 day ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

1 day ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 day ago