Categories: ಕೋಲಾರ

ಎಸ್.ಎಸ್.ಎಲ್.ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ಸದುಪಯೋಗ ಪಡಿಸಿಕೊಳ್ಳಿ-‌ ಡಿಡಿಪಿಐ ಕೃಷ್ಣಮೂರ್ತಿ

ಕೋಲಾರ: ಎಸ್.ಎಸ್.ಎಲ್.ಸಿ ಅನುತ್ತೀರ್ಣ ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಎದುರಿಸಲು ಸಿದ್ಧರಾಗಿ ಶ್ರದ್ಧೆಯಿಂದ ಉಳಿದ ಸಮಯವನ್ನು ಓದಿನ ಕಡೆಗೆ ಗಮನ ಕೊಟ್ಟಾಗ ಮಾತ್ರವೇ ಗುರಿ ಸಾಧಿಸಲು ಸಾಧ್ಯವಾಗುತ್ತದೆ ತಾವುಗಳು ಅನುತ್ತೀರ್ಣ ವಿದ್ಯಾರ್ಥಿಗಳೆಂಬ ಕೀಳರಿಮೆಯನ್ನು ಮನಸ್ಸಿಯಿಂದ ದೂರ ಮಾಡಿಕೊಳ್ಳಿ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದರು.

ನಗರದಲ್ಲಿ ಗುರುವಾರ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಹಾಗೂ ಕೌಶಲ್ಯ ತರಬೇತಿ ಸಂಸ್ಥೆ ವತಿಯಿಂದ ಎಸ್.ಎಸ್ ಎಲ್ ಸಿ ಅನುತ್ತೀರ್ಣ ವಿಧ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ಅನುತ್ತೀರ್ಣ ವಿದ್ಯಾರ್ಥಿಗಳಿಗೂ ಬದುಕು ರೂಪಿಸಬೇಕು ಎಂಬ ಹಿನ್ನೆಲೆಯಲ್ಲಿ ಇನ್ನೂ ಉಳಿದ ಸಮಯದಲ್ಲಿ ಉಚಿತ ತರಗತಿ ನಡೆಸಿ ವಿದ್ಯಾರ್ಥಿಗಳಿಗೆ ಬದುಕು ರೂಪಿಸಲು ಹೊರಟಿದ್ದಾರೆ ವಿದ್ಯಾರ್ಥಿಗಳು ಸಹ ಉತ್ತೀರ್ಣರಾಗುವ ಮೂಲಕ ಈ ಸಂಸ್ಥೆಗೆ ಹಾಗೂ ತಮ್ಮ ಭವಿಷ್ಯಕ್ಕೆ ಕೊಡುಗೆ ನೀಡಬೇಕು ಎಂದರು.

ಕೋಲಾರ ಜಿಲ್ಲೆಯು ಫಲಿತಾಂಶದಲ್ಲಿ ರಾಜ್ಯಕ್ಕೆ 14ನೇ ಸ್ಥಾನವನ್ನು ಪಡೆಯಲಾಗಿದೆ 68% ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಉಳಿದ 32 % ಅನುತ್ತೀರ್ಣರಾದ ವಿಧ್ಯಾರ್ಥಿಗಳ ಭವಿಷ್ಯವನ್ನು ಕಾಣಬೇಕಾಗಿದೆ ಆಸಕ್ತಿಯಿಂದ ಕಲಿತಾಗ ಗುರಿ ಸಾಧಿಸಲು ಸಾಧ್ಯವಾಗುತ್ತದೆ ಅನುತ್ತೀರ್ಣ ವಿದ್ಯಾರ್ಥಿಗಳು ಸಹ ವಿದ್ಯಾಭ್ಯಾಸ ಪಡೆಯಲೇಬೇಕು ಎನ್ನುವ ಮನಸ್ಥಿತಿ ಬರಬೇಕು ಸಮಾಜದಲ್ಲಿ ಶಿಕ್ಷಣದಲ್ಲಿ ಎಡವಿದ ಸಾವಿರಾರು ವಿಧ್ಯಾರ್ಥಿಗಳು ಸಾಧಕರಾಗಿ ಹೊರ ಹೊಮ್ಮಿದ್ದಾರೆ ಅವರ ಜೀವನ ನಮಗೆ ಮಾದರಿಯಾಗಬೇಕು ಎಂದರು.

ಈ ಸಂದರ್ಭದಲ್ಲಿ ಸರ್ಕಾರಿ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಸಂಘದ ಜಿಲ್ಲಾ ಅಧ್ಯಕ್ಷ ಬಿ.ಎಂ ಚಂದ್ರಪ್ಪ ಮಾತನಾಡಿ ವಿಧ್ಯಾರ್ಥಿಗಳು ಶಿಕ್ಷಣ ಪಡೆಯುವ ಹಂತದಲ್ಲಿ ಸಣ್ಣ ಅಡೆತಡೆಯು ಬದುಕಿನ ದಿಕ್ಕನ್ನೇ ಬದಲಿಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಜ್ಞಾನರ್ಜನೆಯತ್ತ ಒತ್ತು ನೀಡಿ ಶಿಕ್ಷಣದಲ್ಲಿ ಎಡವದೇ ಮುಂದೆ ಸಾಗಬೇಕು. ಅನುತ್ತೀರ್ಣತೆ ಬದುಕಿನ ಅಂತ್ಯವಲ್ಲ. ಎಷ್ಟೇ ಬಾರಿ ಶಿಕ್ಷಣದಲ್ಲಿ ಎಡವಿದರೂ ಮುಂದೊಂದು ದಿನ ಯಶಸ್ವಿ ಯಾಗಬಹುದು ಎಂಬ ಛಲ ನಿಮ್ಮಲ್ಲಿರಲಿ, ಓದುವ ಹವ್ಯಾಸ ನಿರಂತರವಾಗಿರಲಿ ಗುರಿಯೇ ನಮ್ಮಗೆಲ್ಲ ಮುಖ್ಯವಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೆಚ್.ಆರ್.ಡಿ.ಸಿ ಕೌಶಲ್ಯ ಸಂಸ್ಥೆಯ ನಿರ್ದೇಶಕ ಎಂ.ವಿ ನಾರಾಯಣಸ್ವಾಮಿ ಮಾತನಾಡಿ, ಸುಮಾರುವ 16 ವರ್ಷಗಳಿಂದ ನಮ್ಮ ಸಂಸ್ಥೆಯು ವಿವಿಧ ಕೋರ್ಸ್ ಗಳಲ್ಲಿ ಕೌಶಲ್ಯ ತರಬೇತಿ ನೀಡುವ ಮೂಲಕ ಉದ್ಯೋಗ ಅವಕಾಶಗಳನ್ನು ಸಂಸ್ಥೆ ಮಾಡಿಕೊಂಡು ಬಂದಿದೆ ಶಿಕ್ಷಣವೇ ಅಭಿವೃದ್ಧಿಯ ಉದ್ದೇಶದಿಂದ ಉಚಿತವಾಗಿ ಅನುತ್ತೀರ್ಣ ವಿಧ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ ಕಡ್ಡಾಯವಾಗಿ ತರಬೇತಿಯಲ್ಲಿ ಭಾಗವಹಿಸಿ ಎಲ್ಲರೂ ಪಾಸ್ ಆಗಿ ಮುಂದಿನ ಭವಿಷ್ಯಕ್ಕೆ ದಾರಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು

ಈ ಸಂದರ್ಭದಲ್ಲಿ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಸಂಘದ ತಾಲೂಕು ಅಧ್ಯಕ್ಷ ರಮೇಶ್ ಗೌಡ, ಸಹ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಹೆಚ್ ಶಿವಕುಮಾರ್, ತಾಲೂಕು ಅಧ್ಯಕ್ಷ ಕೆ.ನಾರಾಯಣರೆಡ್ಡಿ, ಸಂಸ್ಥೆಯ ಚೌಡಪ್ಪ, ಎಂ.ಶಂಕರಪ್ಪ ಮುಂತಾದವರು ಇದ್ದರು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

9 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

19 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

20 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago