2023ರ ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಗಳು ನಡೆಯಲಿದ್ದು, ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷಾ ಕಾರ್ಯವು ಸುವ್ಯವಸ್ಥಿತವಾಗಿ, ಪಾರದರ್ಶಕವಾಗಿ ಸುಗಮವಾಗಿ ನಡೆಯಲು ಅಧಿಕಾರಿಗಳು ಜವಾಬ್ಧಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಸಭಾಂಗಣದಲ್ಲಿಂದು ನಡೆದ “2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ 58 ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸಕ್ತ ವರ್ಷ ಸಾರ್ವತ್ರಿಕ ಚುನಾವಣೆ ಮತ್ತು ಎಸ್.ಎಸ್.ಎಲ್.ಸಿ. ಪರೀಕ್ಷಾ ಕಾರ್ಯಗಳೆರಡೂ ಜೊತೆ ಜೊತೆಯಲ್ಲೇ ಆಯೋಜನೆಗೊಂಡಿದೆ. ಈ ಎರಡೂ ಜವಾಬ್ದಾರಿಗಳು ಅತ್ಯಂತ ಪ್ರಮುಖವಾದವುಗಳೇ ಆಗಿದ್ದು ಧೃತಿಗೆಡದೆ ಎಲ್ಲರೂ ಒಟ್ಟಾಗಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸೋಣ ಎಂದರಲ್ಲದೆ ಪರೀಕ್ಷಾ ಕಾರ್ಯವನ್ನು ಅತ್ಯಂತ ನಿಷ್ಠೆ, ಪ್ರಾಮಾಣಿಕತೆ,
ಪಾರದರ್ಶಕತೆ, ಗೌಪ್ಯತೆ ಮತ್ತು ಸುವ್ಯವಸ್ಥಿತವಾಗಿ ನಡೆಸುವಂತೆ ತಿಳಿಸಿದರು.
ಸಭೆಯಲ್ಲಿ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎನ್.ಶ್ರೀಕಂಠ, ಜಿಲ್ಲಾ ಡಯಟ್ನ ಪ್ರಾಂಶುಪಾಲರಾದ ಉಷಾಕುಮಾರಿ, ಶಿಕ್ಷಣಾಧಿಕಾರಿ ಹನುಮಂತಪ್ಪ, ನಾಲ್ಕು ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲೆಯ ವಿಷಯ ಪರಿವೀಕ್ಷಕರು, ತಾಲ್ಲೂಕು ನೋಡಲ್ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಉಪಸ್ಥಿತರಿದ್ದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…