ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯ ಸರ್ಕಾರಿ ಪ್ರೌಢ ಶಾಲೆಯನ್ನು ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರವನ್ನಾಗಿ ಗುರುತಿಸಿ ಸಕಲ ಸಿದ್ಧತೆ ನಡೆಸಲಾಗಿತ್ತು. ಇಂದು ನಿಗದಿಯಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ ಸುಸೂತ್ರವಾಗಿ ನಡೆಸಲು ತಯಾರಿ ಮಾಡಲಾಗಿತ್ತು.
ಪರೀಕ್ಷಾ ಕೇಂದ್ರದ ಪ್ರತಿಯೊಂದು ಕೊಠಡಿಗೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಕಳೆದ ರಾತ್ರಿ ಯಾರೋ ಕಿಡಿಗೇಡಿಗಳು ಪರೀಕ್ಷಾ ಕೇಂದ್ರಕ್ಕೆ ಬಂದು ಗೇಟ್, ಕೊಠಡಿಗಳ ಬಾಗಿಲು ಮುರಿದು, ಕೊಠಡಿಗಳಿಗೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಕಿತ್ತು, ಮತ್ತೆ ಜೋಡಿಸು ಪ್ರಯತ್ನ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
10 ಕೊಠಡಿಗಳಲ್ಲಿ 14 ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಅದರಲ್ಲಿ 6 ಕ್ಯಾಮೆರಾಗಳನ್ನು ಕಿತ್ತೆಸೆದಿದ್ದಾರೆ. ವಿಚಾರ ತಿಳಿದ ಪೊಲೀಸರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಪರೀಕ್ಷಾ ಕೇಂದ್ರಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ, ನಾಶಪಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಮತ್ತೆ ಜೋಡಿಸಿ, ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೇ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗಿದೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…