ಎಸ್ ಎಸ್ ಘಾಟಿ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ್, ಉಪಾಧ್ಯಕ್ಷರಾಗಿ ನರಸಮ್ಮ ಆಯ್ಕೆ

ತಾಲ್ಲೂಕಿನ ಎಸ್.ಎಸ್.ಘಾಟಿ ವ್ಯವಸಾಯ ಸೇವಾ ಸಹಕಾರ ಸಂಘ ನಿಯಮಿತದ ನೂತನ ಅಧ್ಯಕ್ಷರಾಗಿ ಜಗನ್ನಾಥ್, ಉಪಾಧ್ಯಕ್ಷರಾಗಿ ನರಸಮ್ಮ ಅವಿರೋಧ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯು ಸಂಘದ ಕಚೇರಿಯಲ್ಲಿ ಬುಧವಾರ ಬೆಳಿಗ್ಗೆ 10.30 ಗಂಟೆಗೆ ನಡೆಯಿತು. ಆಡಳಿತ ಮಂಡಳಿಯ 11 ನಿರ್ದೇಶಕರ ಪೈಕಿ, ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಜಗನ್ನಾಥ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನರಸಮ್ಮ ನಾಮಪತ್ರ ಸಲ್ಲಿಸಿದ್ದರು.

ಚುನಾವಣಾ ಅಧಿಕಾರಿಯಾದ ಟಿ.ಭಾಸ್ಕರ್ ನೇತೃತ್ವದಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಏರ್ಪಾಡು ಮಾಡಲಾಗಿತ್ತು. ಆದರೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದು ನಾಮಪತ್ರ ಮಾತ್ರ ಸಲ್ಲಿಕೆ ಯಾಗಿರುವುದರಿಂದ ಸಲ್ಲಿಸಿರುವ ನಾಮಪತ್ರವನ್ನು ಅಂಗೀಕರಿಸಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜುಂಜಪ್ಪ. ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಅಪ್ಪಯಣ್ಣ, ಆಡಳಿತ ಮಂಡಳಿ ಸದಸ್ಯರು ಹಾಗೂ ಗ್ರಾಮದ ಮುಖಂಡರುಗಳು ಹೂಮಾಲೆ ಹಾಕಿ ಸಿಹಿ ತಿನ್ನಿಸಿ ಅಭಿನಂದಿಸಿರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷರಾದ ಜಗನ್ನಾಥ್, ನಾನು ಮೂರನೇ ಬಾರಿಗೆ ಸಂಘದ ಅಧ್ಯಕ್ಷನಾಗಿ ಆಯ್ಕೆಯಾಗುತ್ತಿದ್ದೇನೆ, ಇದಕ್ಕೆ ಸಹಕರಿಸಿದ ಎಲ್ಲಾ ನಿರ್ದೇಶಕರುಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಎಲ್ಲಾ ನಿರ್ದೇಶಕರ ಸಹಕಾರ ಪಡೆದು ನೆನೆಗುದಿಗೆ ಬಿದ್ದಿರುವ ನೂತನ ಕಟ್ಟಡವನ್ನು ಒಂದು ವಾರದೊಳಗೆ ಭೂಮಿ ಪೂಜೆ ಮಾಡಿ, ಒಂದು ವರ್ಷದೊಳಗೆ ಕಟ್ಟಡ ಪೂರ್ಣಗೊಳಿಸುವ ಯೋಜನೆ ರೂಪಿಸುತ್ತೇನೆ ಎಂದರು.

ಈ ವೇಳೆ ಜೆಡಿಎಸ್ ಮುಖಂಡರಾದ ಗೌರೀಶ್, ಗುಂಜೂರು ಕುಮಾರ್, ಶಿವಣ್ಣ, ಮೈಲಾರಪ್ಪ, ಮಂಜುನಾಥ್ ಎಸ್ ಬಿ, ನಿರ್ದೇಶಕರಾದ ಮಂಜುನಾಥ್, ನಾಗನಾಯಕ್, ಚಿಕ್ಕಣ್ಣ ಸೇರಿದಂತೆ ಎಲ್ಲಾ ನಿರ್ದೇಶಕರು, ಯುವ ಮುಖಂಡರಾದ ಮಧು, ಮುರುಳಿ, ಉದಯ್ ಆರಾಧ್ಯ, ವಕೀಲ ಸಂತೋಷ್ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

13 minutes ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

3 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

14 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

14 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

18 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

19 hours ago