ಎಸ್ ಎಸ್ ಘಾಟಿ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ್, ಉಪಾಧ್ಯಕ್ಷರಾಗಿ ನರಸಮ್ಮ ಆಯ್ಕೆ

ತಾಲ್ಲೂಕಿನ ಎಸ್.ಎಸ್.ಘಾಟಿ ವ್ಯವಸಾಯ ಸೇವಾ ಸಹಕಾರ ಸಂಘ ನಿಯಮಿತದ ನೂತನ ಅಧ್ಯಕ್ಷರಾಗಿ ಜಗನ್ನಾಥ್, ಉಪಾಧ್ಯಕ್ಷರಾಗಿ ನರಸಮ್ಮ ಅವಿರೋಧ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯು ಸಂಘದ ಕಚೇರಿಯಲ್ಲಿ ಬುಧವಾರ ಬೆಳಿಗ್ಗೆ 10.30 ಗಂಟೆಗೆ ನಡೆಯಿತು. ಆಡಳಿತ ಮಂಡಳಿಯ 11 ನಿರ್ದೇಶಕರ ಪೈಕಿ, ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಜಗನ್ನಾಥ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನರಸಮ್ಮ ನಾಮಪತ್ರ ಸಲ್ಲಿಸಿದ್ದರು.

ಚುನಾವಣಾ ಅಧಿಕಾರಿಯಾದ ಟಿ.ಭಾಸ್ಕರ್ ನೇತೃತ್ವದಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಏರ್ಪಾಡು ಮಾಡಲಾಗಿತ್ತು. ಆದರೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದು ನಾಮಪತ್ರ ಮಾತ್ರ ಸಲ್ಲಿಕೆ ಯಾಗಿರುವುದರಿಂದ ಸಲ್ಲಿಸಿರುವ ನಾಮಪತ್ರವನ್ನು ಅಂಗೀಕರಿಸಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜುಂಜಪ್ಪ. ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಅಪ್ಪಯಣ್ಣ, ಆಡಳಿತ ಮಂಡಳಿ ಸದಸ್ಯರು ಹಾಗೂ ಗ್ರಾಮದ ಮುಖಂಡರುಗಳು ಹೂಮಾಲೆ ಹಾಕಿ ಸಿಹಿ ತಿನ್ನಿಸಿ ಅಭಿನಂದಿಸಿರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷರಾದ ಜಗನ್ನಾಥ್, ನಾನು ಮೂರನೇ ಬಾರಿಗೆ ಸಂಘದ ಅಧ್ಯಕ್ಷನಾಗಿ ಆಯ್ಕೆಯಾಗುತ್ತಿದ್ದೇನೆ, ಇದಕ್ಕೆ ಸಹಕರಿಸಿದ ಎಲ್ಲಾ ನಿರ್ದೇಶಕರುಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಎಲ್ಲಾ ನಿರ್ದೇಶಕರ ಸಹಕಾರ ಪಡೆದು ನೆನೆಗುದಿಗೆ ಬಿದ್ದಿರುವ ನೂತನ ಕಟ್ಟಡವನ್ನು ಒಂದು ವಾರದೊಳಗೆ ಭೂಮಿ ಪೂಜೆ ಮಾಡಿ, ಒಂದು ವರ್ಷದೊಳಗೆ ಕಟ್ಟಡ ಪೂರ್ಣಗೊಳಿಸುವ ಯೋಜನೆ ರೂಪಿಸುತ್ತೇನೆ ಎಂದರು.

ಈ ವೇಳೆ ಜೆಡಿಎಸ್ ಮುಖಂಡರಾದ ಗೌರೀಶ್, ಗುಂಜೂರು ಕುಮಾರ್, ಶಿವಣ್ಣ, ಮೈಲಾರಪ್ಪ, ಮಂಜುನಾಥ್ ಎಸ್ ಬಿ, ನಿರ್ದೇಶಕರಾದ ಮಂಜುನಾಥ್, ನಾಗನಾಯಕ್, ಚಿಕ್ಕಣ್ಣ ಸೇರಿದಂತೆ ಎಲ್ಲಾ ನಿರ್ದೇಶಕರು, ಯುವ ಮುಖಂಡರಾದ ಮಧು, ಮುರುಳಿ, ಉದಯ್ ಆರಾಧ್ಯ, ವಕೀಲ ಸಂತೋಷ್ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

2 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

10 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

14 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

23 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago