ಎಸ್ ಎಸ್ ಘಾಟಿ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ್, ಉಪಾಧ್ಯಕ್ಷರಾಗಿ ನರಸಮ್ಮ ಆಯ್ಕೆ

ತಾಲ್ಲೂಕಿನ ಎಸ್.ಎಸ್.ಘಾಟಿ ವ್ಯವಸಾಯ ಸೇವಾ ಸಹಕಾರ ಸಂಘ ನಿಯಮಿತದ ನೂತನ ಅಧ್ಯಕ್ಷರಾಗಿ ಜಗನ್ನಾಥ್, ಉಪಾಧ್ಯಕ್ಷರಾಗಿ ನರಸಮ್ಮ ಅವಿರೋಧ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯು ಸಂಘದ ಕಚೇರಿಯಲ್ಲಿ ಬುಧವಾರ ಬೆಳಿಗ್ಗೆ 10.30 ಗಂಟೆಗೆ ನಡೆಯಿತು. ಆಡಳಿತ ಮಂಡಳಿಯ 11 ನಿರ್ದೇಶಕರ ಪೈಕಿ, ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಜಗನ್ನಾಥ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನರಸಮ್ಮ ನಾಮಪತ್ರ ಸಲ್ಲಿಸಿದ್ದರು.

ಚುನಾವಣಾ ಅಧಿಕಾರಿಯಾದ ಟಿ.ಭಾಸ್ಕರ್ ನೇತೃತ್ವದಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಏರ್ಪಾಡು ಮಾಡಲಾಗಿತ್ತು. ಆದರೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದು ನಾಮಪತ್ರ ಮಾತ್ರ ಸಲ್ಲಿಕೆ ಯಾಗಿರುವುದರಿಂದ ಸಲ್ಲಿಸಿರುವ ನಾಮಪತ್ರವನ್ನು ಅಂಗೀಕರಿಸಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜುಂಜಪ್ಪ. ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಅಪ್ಪಯಣ್ಣ, ಆಡಳಿತ ಮಂಡಳಿ ಸದಸ್ಯರು ಹಾಗೂ ಗ್ರಾಮದ ಮುಖಂಡರುಗಳು ಹೂಮಾಲೆ ಹಾಕಿ ಸಿಹಿ ತಿನ್ನಿಸಿ ಅಭಿನಂದಿಸಿರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷರಾದ ಜಗನ್ನಾಥ್, ನಾನು ಮೂರನೇ ಬಾರಿಗೆ ಸಂಘದ ಅಧ್ಯಕ್ಷನಾಗಿ ಆಯ್ಕೆಯಾಗುತ್ತಿದ್ದೇನೆ, ಇದಕ್ಕೆ ಸಹಕರಿಸಿದ ಎಲ್ಲಾ ನಿರ್ದೇಶಕರುಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಎಲ್ಲಾ ನಿರ್ದೇಶಕರ ಸಹಕಾರ ಪಡೆದು ನೆನೆಗುದಿಗೆ ಬಿದ್ದಿರುವ ನೂತನ ಕಟ್ಟಡವನ್ನು ಒಂದು ವಾರದೊಳಗೆ ಭೂಮಿ ಪೂಜೆ ಮಾಡಿ, ಒಂದು ವರ್ಷದೊಳಗೆ ಕಟ್ಟಡ ಪೂರ್ಣಗೊಳಿಸುವ ಯೋಜನೆ ರೂಪಿಸುತ್ತೇನೆ ಎಂದರು.

ಈ ವೇಳೆ ಜೆಡಿಎಸ್ ಮುಖಂಡರಾದ ಗೌರೀಶ್, ಗುಂಜೂರು ಕುಮಾರ್, ಶಿವಣ್ಣ, ಮೈಲಾರಪ್ಪ, ಮಂಜುನಾಥ್ ಎಸ್ ಬಿ, ನಿರ್ದೇಶಕರಾದ ಮಂಜುನಾಥ್, ನಾಗನಾಯಕ್, ಚಿಕ್ಕಣ್ಣ ಸೇರಿದಂತೆ ಎಲ್ಲಾ ನಿರ್ದೇಶಕರು, ಯುವ ಮುಖಂಡರಾದ ಮಧು, ಮುರುಳಿ, ಉದಯ್ ಆರಾಧ್ಯ, ವಕೀಲ ಸಂತೋಷ್ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

6 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

6 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

7 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

8 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

11 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

11 hours ago