ಎಸ್ ಟಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಎಸ್ ಟಿ ಸಮಿತಿ ಬದ್ಧ- ಸಮಿತಿ ನೂತನ‌ ರಾಜ್ಯಾಧ್ಯಕ್ಷ ಮುನಿರಾಜು(ಚಿಕ್ಕಪ್ಪಿ)

ಎಸ್ ಟಿ ಸಮುದಾಯವು ಸಮಾಜದಲ್ಲಿ ಇನ್ನೂ ಹಿಂದುಳಿದಿದೆ. ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಎಸ್ ಟಿ ಸಮಿತಿ ಶ್ರಮಿಸಲಿದೆ ಎಂದು ಸಮಿತಿಯ ನೂತನ ರಾಜ್ಯಾಧ್ಯಕ್ಷ ಮುನಿರಾಜು (ಚಿಕ್ಕಪ್ಪಿ) ಹೇಳಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಎಸ್ ಟಿ ಸಮಿತಿಯನ್ನ ಅಧಿಕೃತವಾಗಿ ಘೋಷಣೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಅನೇಕ ಸಂಘಟನೆಗಳಿದ್ದಾಗಿಯೂ ಸಹ ವಾಲ್ಮೀಕಿ ನಾಯಕ ಸಮುದಾಯದ ಜನತೆ ಅನ್ಯರಿಂದ ಶೋಷಣೆ ಹಾಗೂ ದೌರ್ಜನ್ಯಕ್ಕೆ ಒಳಗಾಗುವುದನ್ನು ತಪ್ಪಿಸಲಾಗುತ್ತಿಲ್ಲ. ಈ ನಿಟ್ಟಿನಲ್ಲಿ ಸಮುದಾಯದ ಜನರನ್ನು ಸ್ವಾವಲಂಬಿಗಳಾಗಿ ಜೀವಿಸಲು ಅವಕಾಶ ಕಲ್ಪಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಿದ ಕಾರ್ಯಕ್ರಮಗಳ ಮತ್ತು ಯೋಜನೆಗಳ ಪೂರ್ಣ ಪ್ರಯೋಜನಗಳನ್ನು ವಾಲ್ಮೀಕಿ ಜನಾಂಗದ ಜನರಿಗೆ ದೊರಕಿಸುವ ಅಗತ್ಯವಿದ್ದು. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೆರವು ಮತ್ತು ಸ್ವ-ಸಹಾಯ ಸಂಘಗಳ ಸಹಾಯದಿಂದ ಜನಾಂಗದ ಮಹಿಳೆಯರ ಮತ್ತು ಮಕ್ಕಳ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಎಂದು ತಿಳಿಸಿದರು.

ನಮ್ಮ ನಾಯಕ ಸಮಾಜದ ವಿದ್ಯಾರ್ಥಿಗಳು, ನಿರುದ್ಯೋಗಿಗಳು,ಅಂಗವಿಕಲರು ಮತ್ತು ವಿಧವೆಯರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ದೊರಕಿಸಿಕೊಡುವ ಮೂಲಕ ಜನಾಂಗದ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿಸಿಕೊಂಡು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ನಂತರ ರಾಜ್ಯಉಪಾಧ್ಯಕ್ಷ ಕೇಬಲ್ ರಾಮಚಂದ್ರ ಮಾತನಾಡಿ, ವಾಲ್ಮೀಕಿ ನಾಯಕ ಸಮಾಜದ ಜನರು ವಾಸಿಸುತ್ತಿರುವ ಹಳ್ಳಿಗಳಿಗೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಸರ್ಕಾರದಿಂದ ಒದಗಿಸುವುದು ನಮ್ಮ ಆದ್ಯತೆಯಾಗಿದೆ. ಸರ್ಕಾರಗಳು ವಿವಿಧ ಇಲಾಖೆಗಳ ಅಡಿಯಲ್ಲಿ ಅನೇಕ ಯೋಜನೆಗಳನ್ನು ನಮ್ಮ ಸಮುದಾಯಕ್ಕೆ ನೀಡುತ್ತಿದೆ. ಆದರೆ ಅರ್ಹರಿಗೆ ತಲುಪುತ್ತಿಲ್ಲ. ಸಮಾಜ ಕಲ್ಯಾಣ ಇಲಾಖೆಯಿಂದ ದೊರಕಬೇಕಾದ ಸೌಲಭ್ಯ ಕೆಲ ರಾಜಕಾರಣಿಗಳ ಹಿಂಬಾಲಕರಿಗೆ ಸೀಮಿತವಾಗಿದೆ. ಈ ನಿಟ್ಟಿನಲ್ಲಿ ಸಮಿತಿ ಪ್ರಮಾಣಿಕ ಹೋರಾಟ ನಡೆಸಿ ಅರ್ಹರಿಗೆ ಯೋಜನೆ ತಲುಪಿಸುತ್ತೇವೆ.ಈಗಾಗಲೆ ಅಸ್ಥಿತ್ವದಲ್ಲಿರುವ ಸಂಘಟನೆಗಳ ಸಲಹೆ ಸಹಕಾರದೊಂದಿಗೆ, ನಮ್ಮ ಸಂಘದ ಧೈಯೋದ್ದೇಶಗಳ ಈಡೇರಿಕೆಗೆ ಅಗತ್ಯವಾದ ಮತ್ತು ಸೂಕ್ತವಾದ ಭೂಮಿಕೆಯನ್ನು ಸಿದ್ಧಪಡಿಸಲು ರಾಜ್ಯಾದ್ಯಂತ ಪ್ರವಾಸವನ್ನು ಕೈಗೊಂಡು, ಕಾರ್ಯಕರ್ತರನ್ನು ಸಜ್ಜುಗೊಳಿಸಲಿದ್ದೇವೆ ಎಂದು ತಿಳಿಸಿದರು.

ಕಾನೂನು ಸಲಹೆಗಾರ ನ್ಯಾಯವಾದಿ ಅಂಬರೀಶ್ ಮಾತನಾಡಿ ಮಹರ್ಷಿ ವಾಲ್ಮೀಕಿ,ಮದಕರಿ ನಾಯಕ ರಂತಹ ಮಹಾನ್ ಪುರುಷರನ್ನು ಇತಿಹಾಸಕ್ಕೆ ಕೊಡುಗೆ ನೀಡಿದ ಜನಾಂಗ ನಮ್ಮದು. ಆದರೆ ಆಧುನಿಕತೆ ಬೆಳೆದರು ನಮ್ಮ ಸಮಾಜಕ್ಕೆ ಸಿಗಬೇಕಾದ ಗೌರವ , ಸೌಲಭ್ಯಗಳು ಸಿಗುತ್ತಿಲ್ಲ . ನಮ್ಮ ಸಮುದಾಯದ ಅಥವಾ ಯಾವುದೇ ಸಮುದಾಯದ ಜನತೆಗೆ ಅನ್ಯಾಯವಾದಲ್ಲಿ ನಮ್ಮ ಸಮಿತಿ ಆವರ ದ್ವನಿಯಾಗಿ ನಿಲ್ಲಲಿದೆ ಈ ರೀತಿಯ ಘಟನೆಗಳು ಎದುರಾದಲ್ಲಿ ನಮ್ಮ ಸಂಘದವತಿಯಿಂದ ಉಚಿತವಾಗಿ ಕಾನೂನು ನೆರವನ್ನು ನೀಡಲಾಗುವುದು ಎಂದರು.

ಈ ವೇಳೆ ಈ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ರಾಜ್ಯ ಖಜಾಂಚಿ ರಾಜಣ್ಣ, ರಾಜ್ಯ ಸದಸ್ಯರಾದ ರಾಜಣ್ಣ, ರಘು, ನವೀನ್ ಕುಮಾರ್ ಉಪಸ್ಥಿತರಿದ್ದರು.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

10 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

13 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

14 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

16 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

17 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

20 hours ago