ಎಸ್ ಟಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಎಸ್ ಟಿ ಸಮಿತಿ ಬದ್ಧ- ಸಮಿತಿ ನೂತನ‌ ರಾಜ್ಯಾಧ್ಯಕ್ಷ ಮುನಿರಾಜು(ಚಿಕ್ಕಪ್ಪಿ)

ಎಸ್ ಟಿ ಸಮುದಾಯವು ಸಮಾಜದಲ್ಲಿ ಇನ್ನೂ ಹಿಂದುಳಿದಿದೆ. ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಎಸ್ ಟಿ ಸಮಿತಿ ಶ್ರಮಿಸಲಿದೆ ಎಂದು ಸಮಿತಿಯ ನೂತನ ರಾಜ್ಯಾಧ್ಯಕ್ಷ ಮುನಿರಾಜು (ಚಿಕ್ಕಪ್ಪಿ) ಹೇಳಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಎಸ್ ಟಿ ಸಮಿತಿಯನ್ನ ಅಧಿಕೃತವಾಗಿ ಘೋಷಣೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಅನೇಕ ಸಂಘಟನೆಗಳಿದ್ದಾಗಿಯೂ ಸಹ ವಾಲ್ಮೀಕಿ ನಾಯಕ ಸಮುದಾಯದ ಜನತೆ ಅನ್ಯರಿಂದ ಶೋಷಣೆ ಹಾಗೂ ದೌರ್ಜನ್ಯಕ್ಕೆ ಒಳಗಾಗುವುದನ್ನು ತಪ್ಪಿಸಲಾಗುತ್ತಿಲ್ಲ. ಈ ನಿಟ್ಟಿನಲ್ಲಿ ಸಮುದಾಯದ ಜನರನ್ನು ಸ್ವಾವಲಂಬಿಗಳಾಗಿ ಜೀವಿಸಲು ಅವಕಾಶ ಕಲ್ಪಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಿದ ಕಾರ್ಯಕ್ರಮಗಳ ಮತ್ತು ಯೋಜನೆಗಳ ಪೂರ್ಣ ಪ್ರಯೋಜನಗಳನ್ನು ವಾಲ್ಮೀಕಿ ಜನಾಂಗದ ಜನರಿಗೆ ದೊರಕಿಸುವ ಅಗತ್ಯವಿದ್ದು. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೆರವು ಮತ್ತು ಸ್ವ-ಸಹಾಯ ಸಂಘಗಳ ಸಹಾಯದಿಂದ ಜನಾಂಗದ ಮಹಿಳೆಯರ ಮತ್ತು ಮಕ್ಕಳ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಎಂದು ತಿಳಿಸಿದರು.

ನಮ್ಮ ನಾಯಕ ಸಮಾಜದ ವಿದ್ಯಾರ್ಥಿಗಳು, ನಿರುದ್ಯೋಗಿಗಳು,ಅಂಗವಿಕಲರು ಮತ್ತು ವಿಧವೆಯರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ದೊರಕಿಸಿಕೊಡುವ ಮೂಲಕ ಜನಾಂಗದ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿಸಿಕೊಂಡು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ನಂತರ ರಾಜ್ಯಉಪಾಧ್ಯಕ್ಷ ಕೇಬಲ್ ರಾಮಚಂದ್ರ ಮಾತನಾಡಿ, ವಾಲ್ಮೀಕಿ ನಾಯಕ ಸಮಾಜದ ಜನರು ವಾಸಿಸುತ್ತಿರುವ ಹಳ್ಳಿಗಳಿಗೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಸರ್ಕಾರದಿಂದ ಒದಗಿಸುವುದು ನಮ್ಮ ಆದ್ಯತೆಯಾಗಿದೆ. ಸರ್ಕಾರಗಳು ವಿವಿಧ ಇಲಾಖೆಗಳ ಅಡಿಯಲ್ಲಿ ಅನೇಕ ಯೋಜನೆಗಳನ್ನು ನಮ್ಮ ಸಮುದಾಯಕ್ಕೆ ನೀಡುತ್ತಿದೆ. ಆದರೆ ಅರ್ಹರಿಗೆ ತಲುಪುತ್ತಿಲ್ಲ. ಸಮಾಜ ಕಲ್ಯಾಣ ಇಲಾಖೆಯಿಂದ ದೊರಕಬೇಕಾದ ಸೌಲಭ್ಯ ಕೆಲ ರಾಜಕಾರಣಿಗಳ ಹಿಂಬಾಲಕರಿಗೆ ಸೀಮಿತವಾಗಿದೆ. ಈ ನಿಟ್ಟಿನಲ್ಲಿ ಸಮಿತಿ ಪ್ರಮಾಣಿಕ ಹೋರಾಟ ನಡೆಸಿ ಅರ್ಹರಿಗೆ ಯೋಜನೆ ತಲುಪಿಸುತ್ತೇವೆ.ಈಗಾಗಲೆ ಅಸ್ಥಿತ್ವದಲ್ಲಿರುವ ಸಂಘಟನೆಗಳ ಸಲಹೆ ಸಹಕಾರದೊಂದಿಗೆ, ನಮ್ಮ ಸಂಘದ ಧೈಯೋದ್ದೇಶಗಳ ಈಡೇರಿಕೆಗೆ ಅಗತ್ಯವಾದ ಮತ್ತು ಸೂಕ್ತವಾದ ಭೂಮಿಕೆಯನ್ನು ಸಿದ್ಧಪಡಿಸಲು ರಾಜ್ಯಾದ್ಯಂತ ಪ್ರವಾಸವನ್ನು ಕೈಗೊಂಡು, ಕಾರ್ಯಕರ್ತರನ್ನು ಸಜ್ಜುಗೊಳಿಸಲಿದ್ದೇವೆ ಎಂದು ತಿಳಿಸಿದರು.

ಕಾನೂನು ಸಲಹೆಗಾರ ನ್ಯಾಯವಾದಿ ಅಂಬರೀಶ್ ಮಾತನಾಡಿ ಮಹರ್ಷಿ ವಾಲ್ಮೀಕಿ,ಮದಕರಿ ನಾಯಕ ರಂತಹ ಮಹಾನ್ ಪುರುಷರನ್ನು ಇತಿಹಾಸಕ್ಕೆ ಕೊಡುಗೆ ನೀಡಿದ ಜನಾಂಗ ನಮ್ಮದು. ಆದರೆ ಆಧುನಿಕತೆ ಬೆಳೆದರು ನಮ್ಮ ಸಮಾಜಕ್ಕೆ ಸಿಗಬೇಕಾದ ಗೌರವ , ಸೌಲಭ್ಯಗಳು ಸಿಗುತ್ತಿಲ್ಲ . ನಮ್ಮ ಸಮುದಾಯದ ಅಥವಾ ಯಾವುದೇ ಸಮುದಾಯದ ಜನತೆಗೆ ಅನ್ಯಾಯವಾದಲ್ಲಿ ನಮ್ಮ ಸಮಿತಿ ಆವರ ದ್ವನಿಯಾಗಿ ನಿಲ್ಲಲಿದೆ ಈ ರೀತಿಯ ಘಟನೆಗಳು ಎದುರಾದಲ್ಲಿ ನಮ್ಮ ಸಂಘದವತಿಯಿಂದ ಉಚಿತವಾಗಿ ಕಾನೂನು ನೆರವನ್ನು ನೀಡಲಾಗುವುದು ಎಂದರು.

ಈ ವೇಳೆ ಈ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ರಾಜ್ಯ ಖಜಾಂಚಿ ರಾಜಣ್ಣ, ರಾಜ್ಯ ಸದಸ್ಯರಾದ ರಾಜಣ್ಣ, ರಘು, ನವೀನ್ ಕುಮಾರ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

2 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

7 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago