ಎಸ್ ಟಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಎಸ್ ಟಿ ಸಮಿತಿ ಬದ್ಧ- ಸಮಿತಿ ನೂತನ‌ ರಾಜ್ಯಾಧ್ಯಕ್ಷ ಮುನಿರಾಜು(ಚಿಕ್ಕಪ್ಪಿ)

ಎಸ್ ಟಿ ಸಮುದಾಯವು ಸಮಾಜದಲ್ಲಿ ಇನ್ನೂ ಹಿಂದುಳಿದಿದೆ. ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಎಸ್ ಟಿ ಸಮಿತಿ ಶ್ರಮಿಸಲಿದೆ ಎಂದು ಸಮಿತಿಯ ನೂತನ ರಾಜ್ಯಾಧ್ಯಕ್ಷ ಮುನಿರಾಜು (ಚಿಕ್ಕಪ್ಪಿ) ಹೇಳಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಎಸ್ ಟಿ ಸಮಿತಿಯನ್ನ ಅಧಿಕೃತವಾಗಿ ಘೋಷಣೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಅನೇಕ ಸಂಘಟನೆಗಳಿದ್ದಾಗಿಯೂ ಸಹ ವಾಲ್ಮೀಕಿ ನಾಯಕ ಸಮುದಾಯದ ಜನತೆ ಅನ್ಯರಿಂದ ಶೋಷಣೆ ಹಾಗೂ ದೌರ್ಜನ್ಯಕ್ಕೆ ಒಳಗಾಗುವುದನ್ನು ತಪ್ಪಿಸಲಾಗುತ್ತಿಲ್ಲ. ಈ ನಿಟ್ಟಿನಲ್ಲಿ ಸಮುದಾಯದ ಜನರನ್ನು ಸ್ವಾವಲಂಬಿಗಳಾಗಿ ಜೀವಿಸಲು ಅವಕಾಶ ಕಲ್ಪಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಿದ ಕಾರ್ಯಕ್ರಮಗಳ ಮತ್ತು ಯೋಜನೆಗಳ ಪೂರ್ಣ ಪ್ರಯೋಜನಗಳನ್ನು ವಾಲ್ಮೀಕಿ ಜನಾಂಗದ ಜನರಿಗೆ ದೊರಕಿಸುವ ಅಗತ್ಯವಿದ್ದು. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೆರವು ಮತ್ತು ಸ್ವ-ಸಹಾಯ ಸಂಘಗಳ ಸಹಾಯದಿಂದ ಜನಾಂಗದ ಮಹಿಳೆಯರ ಮತ್ತು ಮಕ್ಕಳ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಎಂದು ತಿಳಿಸಿದರು.

ನಮ್ಮ ನಾಯಕ ಸಮಾಜದ ವಿದ್ಯಾರ್ಥಿಗಳು, ನಿರುದ್ಯೋಗಿಗಳು,ಅಂಗವಿಕಲರು ಮತ್ತು ವಿಧವೆಯರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ದೊರಕಿಸಿಕೊಡುವ ಮೂಲಕ ಜನಾಂಗದ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿಸಿಕೊಂಡು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ನಂತರ ರಾಜ್ಯಉಪಾಧ್ಯಕ್ಷ ಕೇಬಲ್ ರಾಮಚಂದ್ರ ಮಾತನಾಡಿ, ವಾಲ್ಮೀಕಿ ನಾಯಕ ಸಮಾಜದ ಜನರು ವಾಸಿಸುತ್ತಿರುವ ಹಳ್ಳಿಗಳಿಗೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಸರ್ಕಾರದಿಂದ ಒದಗಿಸುವುದು ನಮ್ಮ ಆದ್ಯತೆಯಾಗಿದೆ. ಸರ್ಕಾರಗಳು ವಿವಿಧ ಇಲಾಖೆಗಳ ಅಡಿಯಲ್ಲಿ ಅನೇಕ ಯೋಜನೆಗಳನ್ನು ನಮ್ಮ ಸಮುದಾಯಕ್ಕೆ ನೀಡುತ್ತಿದೆ. ಆದರೆ ಅರ್ಹರಿಗೆ ತಲುಪುತ್ತಿಲ್ಲ. ಸಮಾಜ ಕಲ್ಯಾಣ ಇಲಾಖೆಯಿಂದ ದೊರಕಬೇಕಾದ ಸೌಲಭ್ಯ ಕೆಲ ರಾಜಕಾರಣಿಗಳ ಹಿಂಬಾಲಕರಿಗೆ ಸೀಮಿತವಾಗಿದೆ. ಈ ನಿಟ್ಟಿನಲ್ಲಿ ಸಮಿತಿ ಪ್ರಮಾಣಿಕ ಹೋರಾಟ ನಡೆಸಿ ಅರ್ಹರಿಗೆ ಯೋಜನೆ ತಲುಪಿಸುತ್ತೇವೆ.ಈಗಾಗಲೆ ಅಸ್ಥಿತ್ವದಲ್ಲಿರುವ ಸಂಘಟನೆಗಳ ಸಲಹೆ ಸಹಕಾರದೊಂದಿಗೆ, ನಮ್ಮ ಸಂಘದ ಧೈಯೋದ್ದೇಶಗಳ ಈಡೇರಿಕೆಗೆ ಅಗತ್ಯವಾದ ಮತ್ತು ಸೂಕ್ತವಾದ ಭೂಮಿಕೆಯನ್ನು ಸಿದ್ಧಪಡಿಸಲು ರಾಜ್ಯಾದ್ಯಂತ ಪ್ರವಾಸವನ್ನು ಕೈಗೊಂಡು, ಕಾರ್ಯಕರ್ತರನ್ನು ಸಜ್ಜುಗೊಳಿಸಲಿದ್ದೇವೆ ಎಂದು ತಿಳಿಸಿದರು.

ಕಾನೂನು ಸಲಹೆಗಾರ ನ್ಯಾಯವಾದಿ ಅಂಬರೀಶ್ ಮಾತನಾಡಿ ಮಹರ್ಷಿ ವಾಲ್ಮೀಕಿ,ಮದಕರಿ ನಾಯಕ ರಂತಹ ಮಹಾನ್ ಪುರುಷರನ್ನು ಇತಿಹಾಸಕ್ಕೆ ಕೊಡುಗೆ ನೀಡಿದ ಜನಾಂಗ ನಮ್ಮದು. ಆದರೆ ಆಧುನಿಕತೆ ಬೆಳೆದರು ನಮ್ಮ ಸಮಾಜಕ್ಕೆ ಸಿಗಬೇಕಾದ ಗೌರವ , ಸೌಲಭ್ಯಗಳು ಸಿಗುತ್ತಿಲ್ಲ . ನಮ್ಮ ಸಮುದಾಯದ ಅಥವಾ ಯಾವುದೇ ಸಮುದಾಯದ ಜನತೆಗೆ ಅನ್ಯಾಯವಾದಲ್ಲಿ ನಮ್ಮ ಸಮಿತಿ ಆವರ ದ್ವನಿಯಾಗಿ ನಿಲ್ಲಲಿದೆ ಈ ರೀತಿಯ ಘಟನೆಗಳು ಎದುರಾದಲ್ಲಿ ನಮ್ಮ ಸಂಘದವತಿಯಿಂದ ಉಚಿತವಾಗಿ ಕಾನೂನು ನೆರವನ್ನು ನೀಡಲಾಗುವುದು ಎಂದರು.

ಈ ವೇಳೆ ಈ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ರಾಜ್ಯ ಖಜಾಂಚಿ ರಾಜಣ್ಣ, ರಾಜ್ಯ ಸದಸ್ಯರಾದ ರಾಜಣ್ಣ, ರಘು, ನವೀನ್ ಕುಮಾರ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 hour ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

6 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

15 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

21 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

22 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago