ಎಸ್ ಟಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಎಸ್ ಟಿ ಸಮಿತಿ ಬದ್ಧ- ಸಮಿತಿ ನೂತನ‌ ರಾಜ್ಯಾಧ್ಯಕ್ಷ ಮುನಿರಾಜು(ಚಿಕ್ಕಪ್ಪಿ)

ಎಸ್ ಟಿ ಸಮುದಾಯವು ಸಮಾಜದಲ್ಲಿ ಇನ್ನೂ ಹಿಂದುಳಿದಿದೆ. ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಎಸ್ ಟಿ ಸಮಿತಿ ಶ್ರಮಿಸಲಿದೆ ಎಂದು ಸಮಿತಿಯ ನೂತನ ರಾಜ್ಯಾಧ್ಯಕ್ಷ ಮುನಿರಾಜು (ಚಿಕ್ಕಪ್ಪಿ) ಹೇಳಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಎಸ್ ಟಿ ಸಮಿತಿಯನ್ನ ಅಧಿಕೃತವಾಗಿ ಘೋಷಣೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಅನೇಕ ಸಂಘಟನೆಗಳಿದ್ದಾಗಿಯೂ ಸಹ ವಾಲ್ಮೀಕಿ ನಾಯಕ ಸಮುದಾಯದ ಜನತೆ ಅನ್ಯರಿಂದ ಶೋಷಣೆ ಹಾಗೂ ದೌರ್ಜನ್ಯಕ್ಕೆ ಒಳಗಾಗುವುದನ್ನು ತಪ್ಪಿಸಲಾಗುತ್ತಿಲ್ಲ. ಈ ನಿಟ್ಟಿನಲ್ಲಿ ಸಮುದಾಯದ ಜನರನ್ನು ಸ್ವಾವಲಂಬಿಗಳಾಗಿ ಜೀವಿಸಲು ಅವಕಾಶ ಕಲ್ಪಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಿದ ಕಾರ್ಯಕ್ರಮಗಳ ಮತ್ತು ಯೋಜನೆಗಳ ಪೂರ್ಣ ಪ್ರಯೋಜನಗಳನ್ನು ವಾಲ್ಮೀಕಿ ಜನಾಂಗದ ಜನರಿಗೆ ದೊರಕಿಸುವ ಅಗತ್ಯವಿದ್ದು. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೆರವು ಮತ್ತು ಸ್ವ-ಸಹಾಯ ಸಂಘಗಳ ಸಹಾಯದಿಂದ ಜನಾಂಗದ ಮಹಿಳೆಯರ ಮತ್ತು ಮಕ್ಕಳ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಎಂದು ತಿಳಿಸಿದರು.

ನಮ್ಮ ನಾಯಕ ಸಮಾಜದ ವಿದ್ಯಾರ್ಥಿಗಳು, ನಿರುದ್ಯೋಗಿಗಳು,ಅಂಗವಿಕಲರು ಮತ್ತು ವಿಧವೆಯರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ದೊರಕಿಸಿಕೊಡುವ ಮೂಲಕ ಜನಾಂಗದ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿಸಿಕೊಂಡು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ನಂತರ ರಾಜ್ಯಉಪಾಧ್ಯಕ್ಷ ಕೇಬಲ್ ರಾಮಚಂದ್ರ ಮಾತನಾಡಿ, ವಾಲ್ಮೀಕಿ ನಾಯಕ ಸಮಾಜದ ಜನರು ವಾಸಿಸುತ್ತಿರುವ ಹಳ್ಳಿಗಳಿಗೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಸರ್ಕಾರದಿಂದ ಒದಗಿಸುವುದು ನಮ್ಮ ಆದ್ಯತೆಯಾಗಿದೆ. ಸರ್ಕಾರಗಳು ವಿವಿಧ ಇಲಾಖೆಗಳ ಅಡಿಯಲ್ಲಿ ಅನೇಕ ಯೋಜನೆಗಳನ್ನು ನಮ್ಮ ಸಮುದಾಯಕ್ಕೆ ನೀಡುತ್ತಿದೆ. ಆದರೆ ಅರ್ಹರಿಗೆ ತಲುಪುತ್ತಿಲ್ಲ. ಸಮಾಜ ಕಲ್ಯಾಣ ಇಲಾಖೆಯಿಂದ ದೊರಕಬೇಕಾದ ಸೌಲಭ್ಯ ಕೆಲ ರಾಜಕಾರಣಿಗಳ ಹಿಂಬಾಲಕರಿಗೆ ಸೀಮಿತವಾಗಿದೆ. ಈ ನಿಟ್ಟಿನಲ್ಲಿ ಸಮಿತಿ ಪ್ರಮಾಣಿಕ ಹೋರಾಟ ನಡೆಸಿ ಅರ್ಹರಿಗೆ ಯೋಜನೆ ತಲುಪಿಸುತ್ತೇವೆ.ಈಗಾಗಲೆ ಅಸ್ಥಿತ್ವದಲ್ಲಿರುವ ಸಂಘಟನೆಗಳ ಸಲಹೆ ಸಹಕಾರದೊಂದಿಗೆ, ನಮ್ಮ ಸಂಘದ ಧೈಯೋದ್ದೇಶಗಳ ಈಡೇರಿಕೆಗೆ ಅಗತ್ಯವಾದ ಮತ್ತು ಸೂಕ್ತವಾದ ಭೂಮಿಕೆಯನ್ನು ಸಿದ್ಧಪಡಿಸಲು ರಾಜ್ಯಾದ್ಯಂತ ಪ್ರವಾಸವನ್ನು ಕೈಗೊಂಡು, ಕಾರ್ಯಕರ್ತರನ್ನು ಸಜ್ಜುಗೊಳಿಸಲಿದ್ದೇವೆ ಎಂದು ತಿಳಿಸಿದರು.

ಕಾನೂನು ಸಲಹೆಗಾರ ನ್ಯಾಯವಾದಿ ಅಂಬರೀಶ್ ಮಾತನಾಡಿ ಮಹರ್ಷಿ ವಾಲ್ಮೀಕಿ,ಮದಕರಿ ನಾಯಕ ರಂತಹ ಮಹಾನ್ ಪುರುಷರನ್ನು ಇತಿಹಾಸಕ್ಕೆ ಕೊಡುಗೆ ನೀಡಿದ ಜನಾಂಗ ನಮ್ಮದು. ಆದರೆ ಆಧುನಿಕತೆ ಬೆಳೆದರು ನಮ್ಮ ಸಮಾಜಕ್ಕೆ ಸಿಗಬೇಕಾದ ಗೌರವ , ಸೌಲಭ್ಯಗಳು ಸಿಗುತ್ತಿಲ್ಲ . ನಮ್ಮ ಸಮುದಾಯದ ಅಥವಾ ಯಾವುದೇ ಸಮುದಾಯದ ಜನತೆಗೆ ಅನ್ಯಾಯವಾದಲ್ಲಿ ನಮ್ಮ ಸಮಿತಿ ಆವರ ದ್ವನಿಯಾಗಿ ನಿಲ್ಲಲಿದೆ ಈ ರೀತಿಯ ಘಟನೆಗಳು ಎದುರಾದಲ್ಲಿ ನಮ್ಮ ಸಂಘದವತಿಯಿಂದ ಉಚಿತವಾಗಿ ಕಾನೂನು ನೆರವನ್ನು ನೀಡಲಾಗುವುದು ಎಂದರು.

ಈ ವೇಳೆ ಈ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ರಾಜ್ಯ ಖಜಾಂಚಿ ರಾಜಣ್ಣ, ರಾಜ್ಯ ಸದಸ್ಯರಾದ ರಾಜಣ್ಣ, ರಘು, ನವೀನ್ ಕುಮಾರ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

57 minutes ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

15 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

16 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

17 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

17 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

21 hours ago