ಎಸ್ ಟಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಎಸ್ ಟಿ ಸಮಿತಿ ಬದ್ಧ- ಸಮಿತಿ ನೂತನ‌ ರಾಜ್ಯಾಧ್ಯಕ್ಷ ಮುನಿರಾಜು(ಚಿಕ್ಕಪ್ಪಿ)

ಎಸ್ ಟಿ ಸಮುದಾಯವು ಸಮಾಜದಲ್ಲಿ ಇನ್ನೂ ಹಿಂದುಳಿದಿದೆ. ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಎಸ್ ಟಿ ಸಮಿತಿ ಶ್ರಮಿಸಲಿದೆ ಎಂದು ಸಮಿತಿಯ ನೂತನ ರಾಜ್ಯಾಧ್ಯಕ್ಷ ಮುನಿರಾಜು (ಚಿಕ್ಕಪ್ಪಿ) ಹೇಳಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಎಸ್ ಟಿ ಸಮಿತಿಯನ್ನ ಅಧಿಕೃತವಾಗಿ ಘೋಷಣೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಅನೇಕ ಸಂಘಟನೆಗಳಿದ್ದಾಗಿಯೂ ಸಹ ವಾಲ್ಮೀಕಿ ನಾಯಕ ಸಮುದಾಯದ ಜನತೆ ಅನ್ಯರಿಂದ ಶೋಷಣೆ ಹಾಗೂ ದೌರ್ಜನ್ಯಕ್ಕೆ ಒಳಗಾಗುವುದನ್ನು ತಪ್ಪಿಸಲಾಗುತ್ತಿಲ್ಲ. ಈ ನಿಟ್ಟಿನಲ್ಲಿ ಸಮುದಾಯದ ಜನರನ್ನು ಸ್ವಾವಲಂಬಿಗಳಾಗಿ ಜೀವಿಸಲು ಅವಕಾಶ ಕಲ್ಪಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಿದ ಕಾರ್ಯಕ್ರಮಗಳ ಮತ್ತು ಯೋಜನೆಗಳ ಪೂರ್ಣ ಪ್ರಯೋಜನಗಳನ್ನು ವಾಲ್ಮೀಕಿ ಜನಾಂಗದ ಜನರಿಗೆ ದೊರಕಿಸುವ ಅಗತ್ಯವಿದ್ದು. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೆರವು ಮತ್ತು ಸ್ವ-ಸಹಾಯ ಸಂಘಗಳ ಸಹಾಯದಿಂದ ಜನಾಂಗದ ಮಹಿಳೆಯರ ಮತ್ತು ಮಕ್ಕಳ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಎಂದು ತಿಳಿಸಿದರು.

ನಮ್ಮ ನಾಯಕ ಸಮಾಜದ ವಿದ್ಯಾರ್ಥಿಗಳು, ನಿರುದ್ಯೋಗಿಗಳು,ಅಂಗವಿಕಲರು ಮತ್ತು ವಿಧವೆಯರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ದೊರಕಿಸಿಕೊಡುವ ಮೂಲಕ ಜನಾಂಗದ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿಸಿಕೊಂಡು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ನಂತರ ರಾಜ್ಯಉಪಾಧ್ಯಕ್ಷ ಕೇಬಲ್ ರಾಮಚಂದ್ರ ಮಾತನಾಡಿ, ವಾಲ್ಮೀಕಿ ನಾಯಕ ಸಮಾಜದ ಜನರು ವಾಸಿಸುತ್ತಿರುವ ಹಳ್ಳಿಗಳಿಗೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಸರ್ಕಾರದಿಂದ ಒದಗಿಸುವುದು ನಮ್ಮ ಆದ್ಯತೆಯಾಗಿದೆ. ಸರ್ಕಾರಗಳು ವಿವಿಧ ಇಲಾಖೆಗಳ ಅಡಿಯಲ್ಲಿ ಅನೇಕ ಯೋಜನೆಗಳನ್ನು ನಮ್ಮ ಸಮುದಾಯಕ್ಕೆ ನೀಡುತ್ತಿದೆ. ಆದರೆ ಅರ್ಹರಿಗೆ ತಲುಪುತ್ತಿಲ್ಲ. ಸಮಾಜ ಕಲ್ಯಾಣ ಇಲಾಖೆಯಿಂದ ದೊರಕಬೇಕಾದ ಸೌಲಭ್ಯ ಕೆಲ ರಾಜಕಾರಣಿಗಳ ಹಿಂಬಾಲಕರಿಗೆ ಸೀಮಿತವಾಗಿದೆ. ಈ ನಿಟ್ಟಿನಲ್ಲಿ ಸಮಿತಿ ಪ್ರಮಾಣಿಕ ಹೋರಾಟ ನಡೆಸಿ ಅರ್ಹರಿಗೆ ಯೋಜನೆ ತಲುಪಿಸುತ್ತೇವೆ.ಈಗಾಗಲೆ ಅಸ್ಥಿತ್ವದಲ್ಲಿರುವ ಸಂಘಟನೆಗಳ ಸಲಹೆ ಸಹಕಾರದೊಂದಿಗೆ, ನಮ್ಮ ಸಂಘದ ಧೈಯೋದ್ದೇಶಗಳ ಈಡೇರಿಕೆಗೆ ಅಗತ್ಯವಾದ ಮತ್ತು ಸೂಕ್ತವಾದ ಭೂಮಿಕೆಯನ್ನು ಸಿದ್ಧಪಡಿಸಲು ರಾಜ್ಯಾದ್ಯಂತ ಪ್ರವಾಸವನ್ನು ಕೈಗೊಂಡು, ಕಾರ್ಯಕರ್ತರನ್ನು ಸಜ್ಜುಗೊಳಿಸಲಿದ್ದೇವೆ ಎಂದು ತಿಳಿಸಿದರು.

ಕಾನೂನು ಸಲಹೆಗಾರ ನ್ಯಾಯವಾದಿ ಅಂಬರೀಶ್ ಮಾತನಾಡಿ ಮಹರ್ಷಿ ವಾಲ್ಮೀಕಿ,ಮದಕರಿ ನಾಯಕ ರಂತಹ ಮಹಾನ್ ಪುರುಷರನ್ನು ಇತಿಹಾಸಕ್ಕೆ ಕೊಡುಗೆ ನೀಡಿದ ಜನಾಂಗ ನಮ್ಮದು. ಆದರೆ ಆಧುನಿಕತೆ ಬೆಳೆದರು ನಮ್ಮ ಸಮಾಜಕ್ಕೆ ಸಿಗಬೇಕಾದ ಗೌರವ , ಸೌಲಭ್ಯಗಳು ಸಿಗುತ್ತಿಲ್ಲ . ನಮ್ಮ ಸಮುದಾಯದ ಅಥವಾ ಯಾವುದೇ ಸಮುದಾಯದ ಜನತೆಗೆ ಅನ್ಯಾಯವಾದಲ್ಲಿ ನಮ್ಮ ಸಮಿತಿ ಆವರ ದ್ವನಿಯಾಗಿ ನಿಲ್ಲಲಿದೆ ಈ ರೀತಿಯ ಘಟನೆಗಳು ಎದುರಾದಲ್ಲಿ ನಮ್ಮ ಸಂಘದವತಿಯಿಂದ ಉಚಿತವಾಗಿ ಕಾನೂನು ನೆರವನ್ನು ನೀಡಲಾಗುವುದು ಎಂದರು.

ಈ ವೇಳೆ ಈ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ರಾಜ್ಯ ಖಜಾಂಚಿ ರಾಜಣ್ಣ, ರಾಜ್ಯ ಸದಸ್ಯರಾದ ರಾಜಣ್ಣ, ರಘು, ನವೀನ್ ಕುಮಾರ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

1 hour ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

3 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

5 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

8 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

19 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

19 hours ago