ಎಸ್ ಡಿಎ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಕರ್ನಾಟಕದಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಏಳು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. ಅದೇರೀತಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಭೋಧನ ಹೊಸಹಳ್ಳಿ ಗ್ರಾಮದ ಎಸ್ ಡಿಎ ಅಧಿಕಾರಿ ಅನಂತ್‌ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ಮಾಡಲಾಗಿದೆ.

ಲೋಕಾಯುಕ್ತ ಎಸ್ಪಿ ನೇತೃತ್ವದ 8 ಜನರ ತಂಡದಿಂದ ಎಸ್.ಡಿಎ ಅಧಿಕಾರಿ ಅನಂತ್ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಎಸ್ ಡಿಎ ಅಧಿಕಾರಿ ಅನಂತ್ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆಯಾಗಿದೆ. ಈಗಾಗಲೇ ಅನಂತ್ ಮನೆಯಲ್ಲೆ ಮೂರು ಲಕ್ಷ ನಗದು ಪತ್ತೆಯಾಗಿದ್ದು, ಜೊತೆಗೆ 11 ಚಿನ್ನದ ಉಂಗುರ, ಎರಡು ಬ್ರಾಸ್ ಲೈಟ್, ಎರಡು ಕೆಜಿಗೂ ಅಧಿಕ ಬೆಳ್ಳಿ ವಸ್ತುಗಳು ಪತ್ತೆಯಾಗಿದೆ.

ಹೊಸಕೋಟೆ ತಾಲೂಕು ಕಚೇರಿಯ ಭೂ ಮಂಜೂರಾತಿ ಸೆಕ್ಷನ್ ನಲ್ಲಿ ಅನಂತ್ ಎಸ್ ಡಿಎ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿಹೊಂದಿರೋ ಆರೋಪದ ಹಿನ್ನೆಲೆ ಅನಂತ್‌ ಮನೆ ಮೇಲೆ ರೈಡ್ ಮಾಡಲಾಗಿದೆ.

ಸದ್ಯ ಅಧಿಕಾರಿ ಮನೆಯಲ್ಲಿ ದಾಖಲೆಗಳ ಪರಿಶೀಲನೆ ಮುಂದುವರಿದಿದೆ…

Leave a Reply

Your email address will not be published. Required fields are marked *