ಬೆಂಗಳೂರು: ಕರ್ನಾಟಕದಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಏಳು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. ಅದೇರೀತಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಭೋಧನ ಹೊಸಹಳ್ಳಿ ಗ್ರಾಮದ ಎಸ್ ಡಿಎ ಅಧಿಕಾರಿ ಅನಂತ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ಮಾಡಲಾಗಿದೆ.
ಲೋಕಾಯುಕ್ತ ಎಸ್ಪಿ ನೇತೃತ್ವದ 8 ಜನರ ತಂಡದಿಂದ ಎಸ್.ಡಿಎ ಅಧಿಕಾರಿ ಅನಂತ್ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಎಸ್ ಡಿಎ ಅಧಿಕಾರಿ ಅನಂತ್ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆಯಾಗಿದೆ. ಈಗಾಗಲೇ ಅನಂತ್ ಮನೆಯಲ್ಲೆ ಮೂರು ಲಕ್ಷ ನಗದು ಪತ್ತೆಯಾಗಿದ್ದು, ಜೊತೆಗೆ 11 ಚಿನ್ನದ ಉಂಗುರ, ಎರಡು ಬ್ರಾಸ್ ಲೈಟ್, ಎರಡು ಕೆಜಿಗೂ ಅಧಿಕ ಬೆಳ್ಳಿ ವಸ್ತುಗಳು ಪತ್ತೆಯಾಗಿದೆ.
ಹೊಸಕೋಟೆ ತಾಲೂಕು ಕಚೇರಿಯ ಭೂ ಮಂಜೂರಾತಿ ಸೆಕ್ಷನ್ ನಲ್ಲಿ ಅನಂತ್ ಎಸ್ ಡಿಎ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿಹೊಂದಿರೋ ಆರೋಪದ ಹಿನ್ನೆಲೆ ಅನಂತ್ ಮನೆ ಮೇಲೆ ರೈಡ್ ಮಾಡಲಾಗಿದೆ.
ಸದ್ಯ ಅಧಿಕಾರಿ ಮನೆಯಲ್ಲಿ ದಾಖಲೆಗಳ ಪರಿಶೀಲನೆ ಮುಂದುವರಿದಿದೆ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…