ಬೆಂಗಳೂರು: ಕರ್ನಾಟಕದಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಏಳು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. ಅದೇರೀತಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಭೋಧನ ಹೊಸಹಳ್ಳಿ ಗ್ರಾಮದ ಎಸ್ ಡಿಎ ಅಧಿಕಾರಿ ಅನಂತ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ಮಾಡಲಾಗಿದೆ.
ಲೋಕಾಯುಕ್ತ ಎಸ್ಪಿ ನೇತೃತ್ವದ 8 ಜನರ ತಂಡದಿಂದ ಎಸ್.ಡಿಎ ಅಧಿಕಾರಿ ಅನಂತ್ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಎಸ್ ಡಿಎ ಅಧಿಕಾರಿ ಅನಂತ್ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆಯಾಗಿದೆ. ಈಗಾಗಲೇ ಅನಂತ್ ಮನೆಯಲ್ಲೆ ಮೂರು ಲಕ್ಷ ನಗದು ಪತ್ತೆಯಾಗಿದ್ದು, ಜೊತೆಗೆ 11 ಚಿನ್ನದ ಉಂಗುರ, ಎರಡು ಬ್ರಾಸ್ ಲೈಟ್, ಎರಡು ಕೆಜಿಗೂ ಅಧಿಕ ಬೆಳ್ಳಿ ವಸ್ತುಗಳು ಪತ್ತೆಯಾಗಿದೆ.
ಹೊಸಕೋಟೆ ತಾಲೂಕು ಕಚೇರಿಯ ಭೂ ಮಂಜೂರಾತಿ ಸೆಕ್ಷನ್ ನಲ್ಲಿ ಅನಂತ್ ಎಸ್ ಡಿಎ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿಹೊಂದಿರೋ ಆರೋಪದ ಹಿನ್ನೆಲೆ ಅನಂತ್ ಮನೆ ಮೇಲೆ ರೈಡ್ ಮಾಡಲಾಗಿದೆ.
ಸದ್ಯ ಅಧಿಕಾರಿ ಮನೆಯಲ್ಲಿ ದಾಖಲೆಗಳ ಪರಿಶೀಲನೆ ಮುಂದುವರಿದಿದೆ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…