ಬೆಂಗಳೂರು: ಕರ್ನಾಟಕದಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಏಳು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. ಅದೇರೀತಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಭೋಧನ ಹೊಸಹಳ್ಳಿ ಗ್ರಾಮದ ಎಸ್ ಡಿಎ ಅಧಿಕಾರಿ ಅನಂತ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ಮಾಡಲಾಗಿದೆ.
ಲೋಕಾಯುಕ್ತ ಎಸ್ಪಿ ನೇತೃತ್ವದ 8 ಜನರ ತಂಡದಿಂದ ಎಸ್.ಡಿಎ ಅಧಿಕಾರಿ ಅನಂತ್ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಎಸ್ ಡಿಎ ಅಧಿಕಾರಿ ಅನಂತ್ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆಯಾಗಿದೆ. ಈಗಾಗಲೇ ಅನಂತ್ ಮನೆಯಲ್ಲೆ ಮೂರು ಲಕ್ಷ ನಗದು ಪತ್ತೆಯಾಗಿದ್ದು, ಜೊತೆಗೆ 11 ಚಿನ್ನದ ಉಂಗುರ, ಎರಡು ಬ್ರಾಸ್ ಲೈಟ್, ಎರಡು ಕೆಜಿಗೂ ಅಧಿಕ ಬೆಳ್ಳಿ ವಸ್ತುಗಳು ಪತ್ತೆಯಾಗಿದೆ.
ಹೊಸಕೋಟೆ ತಾಲೂಕು ಕಚೇರಿಯ ಭೂ ಮಂಜೂರಾತಿ ಸೆಕ್ಷನ್ ನಲ್ಲಿ ಅನಂತ್ ಎಸ್ ಡಿಎ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿಹೊಂದಿರೋ ಆರೋಪದ ಹಿನ್ನೆಲೆ ಅನಂತ್ ಮನೆ ಮೇಲೆ ರೈಡ್ ಮಾಡಲಾಗಿದೆ.
ಸದ್ಯ ಅಧಿಕಾರಿ ಮನೆಯಲ್ಲಿ ದಾಖಲೆಗಳ ಪರಿಶೀಲನೆ ಮುಂದುವರಿದಿದೆ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…