2023-24 ನೇ ಸಾಲಿನಲ್ಲಿ ಎಸ್.ಸಿ.ಪಿ,ಟಿ.ಎಸ್.ಪಿ ಯೋಜನೆಯಡಿ ಮೀಸಲಾಗಿರುವ ಅನುದಾನವನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣ ಪ್ರಮಾಣದಲ್ಲಿ ವ್ಯಯಿಸುವ ಮೂಲಕ ಭೌತಿಕವಾಗಿ, ಆರ್ಥಿಕವಾಗಿ ಶೇಕಡ 100ರಷ್ಟು ಪ್ರಗತಿ ಸಾಧಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಎಸ್.ಸಿ.ಪಿ-ಟಿ.ಎಸ್.ಪಿ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸ್ತುತ ವರ್ಷ ಬರ ಪರಿಸ್ಥಿತಿ ಎದುರಿಸುತ್ತಿದ್ದು, ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಎಸ್.ಸಿ.ಪಿ-ಟಿ.ಎಸ್.ಪಿ ಯೋಜನೆಯಡಿ ವಿವಿಧ ಇಲಾಖೆಗಳಿಗೆ ಈಗಾಗಲೇ ಅನುದಾನ ಬಿಡುಗಡೆ ಆಗಿದ್ದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮಾತ್ರ ಅನುದಾನವನ್ನು ಬಳಸಬೇಕು. ಶಾಲಾ ಶಿಕ್ಷಣ ಇಲಾಖೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳು ಈಗಾಗಲೇ ಶೇಕಡ 100% ಪ್ರಗತಿ ಸಾಧಿಸಿದ್ದು, ಕೃಷಿ, ರೇಷ್ಮೆ, ತೋಟಗಾರಿಕೆ, ಸಮಾಜ ಕಲ್ಯಾಣ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮೀನುಗಾರಿಕೆ ಇಲಾಖೆ ಸೇರಿದಂತೆ ನಿಗಮಗಳಲ್ಲಿರುವ ಎಸ್.ಸಿ.ಪಿ-ಟಿ.ಎಸ್.ಪಿ ಬಾಕಿ ಇರುವ ಅನುದಾನವು ವ್ಯಯಮಾಡಲಾಗುತ್ತಿದ್ದು ನಿಗದಿತ ಕಾಲಮಿತಿಯೊಳಗೆ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ವ್ಯಯ ಮಾಡಿ ಪ್ರಗತಿ ವರದಿ ಸಲ್ಲಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಟಿ.ಎಲ್.ಎಸ್ ಪ್ರೇಮ, ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…